2008ರ ನವೆಂಬರ್ 26ರ ಭಯೋತ್ಪಾದಕ ದಾಳಿಯ ನಂತರ ಭದ್ರತಾ ಕಾರ್ಯಾಚರಣೆಯ ಸಮಯದಲ್ಲಿ ದಕ್ಷಿಣ ಮುಂಬೈನ ತಾಜ್ ಹೋಟೆಲ್‌ನಿಂದ ಹೊಗೆ ಹೊರಹೊಮ್ಮುತ್ತಿದೆ. 
ವಿದೇಶ

26/11ರ ಮುಂಬೈ ದಾಳಿಗೆ 15 ವರ್ಷ: ಲಷ್ಕರ್-ಎ-ತಯ್ಬಾವನ್ನು 'ಭಯೋತ್ಪಾದಕ ಸಂಘಟನೆ' ಎಂದು ಘೋಷಿಸಿದ ಇಸ್ರೇಲ್

ಇಸ್ರೇಲಿಯನ್ನರು ಸೇರಿದಂತೆ 160ಕ್ಕೂ ಹೆಚ್ಚು ರಾಷ್ಟ್ರಗಳ ಜನರ ಸಾವಿಗೆ ಕಾರಣವಾದ ಮುಂಬೈ ಮೇಲಿನ 26/11ರ ಭಯೋತ್ಪಾದಕ ದಾಳಿಗೆ 15 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಇಸ್ರೇಲ್ ಮಂಗಳವಾರ ಪಾಕಿಸ್ತಾನ ಮೂಲದ ಲಷ್ಕರ್-ಎ-ತಯ್ಬಾವನ್ನು 'ಭಯೋತ್ಪಾದಕ ಸಂಘಟನೆ' ಎಂದು ಘೋಷಿಸಿದೆ.

ಜೆರುಸಲೇಂ/ನವದೆಹಲಿ: ಇಸ್ರೇಲಿಯನ್ನರು ಸೇರಿದಂತೆ 160ಕ್ಕೂ ಹೆಚ್ಚು ರಾಷ್ಟ್ರಗಳ ಜನರ ಸಾವಿಗೆ ಕಾರಣವಾದ ಮುಂಬೈ ಮೇಲಿನ 26/11ರ ಭಯೋತ್ಪಾದಕ ದಾಳಿಗೆ 15 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಇಸ್ರೇಲ್ ಮಂಗಳವಾರ ಪಾಕಿಸ್ತಾನ ಮೂಲದ ಲಷ್ಕರ್-ಎ-ತಯ್ಬಾವನ್ನು 'ಭಯೋತ್ಪಾದಕ ಸಂಘಟನೆ' ಎಂದು ಘೋಷಿಸಿದೆ.

'ಮುಂಬೈ ಭಯೋತ್ಪಾದನಾ ದಾಳಿಯ 15ನೇ ವರ್ಷದ ಸ್ಮರಣಾರ್ಥವಾಗಿ ಇಸ್ರೇಲ್ ದೇಶವು ಲಷ್ಕರ್-ಎ-ತಯ್ಬಾವನ್ನು ಭಯೋತ್ಪಾದಕ ಸಂಘಟನೆಯ ಪಟ್ಟಿಗೆ ಸೇರಿಸಿದೆ' ಎಂದು ಇಸ್ರೇಲ್ ರಾಯಭಾರ ಕಚೇರಿ ದೆಹಲಿಯಲ್ಲಿ ಹೇಳಿಕೆಯಲ್ಲಿ ತಿಳಿಸಿದೆ.

'ಈ ಕ್ರಮದ ಹಿಂದೆ ಭಾರತ ಸರ್ಕಾರದ ಯಾವುದೇ ಪಾತ್ರವಿಲ್ಲ. ಇಸ್ರೇಲ್ ಎಲ್ಲಾ ಅಗತ್ಯ ಕಾರ್ಯವಿಧಾನಗಳನ್ನು ಔಪಚಾರಿಕವಾಗಿ ಪೂರ್ಣಗೊಳಿಸಿದೆ ಮತ್ತು ಲಷ್ಕರ್-ಎ-ತಯ್ಬಾವನ್ನು ಇಸ್ರೇಲಿ ಅಕ್ರಮ ಭಯೋತ್ಪಾದಕ ಸಂಘಟನೆಗಳ ಪಟ್ಟಿಗೆ ಸೇರಿಸಲು ಅಗತ್ಯವಿರುವ ಎಲ್ಲಾ ಪರಿಶೀಲನೆ ಮತ್ತು ನಿಬಂಧನೆಗಳನ್ನು ಪೂರೈಸಿದೆ' ಎಂದು ಹೇಳಿಕೆ ತಿಳಿಸಿದೆ.

2008ರ ನವೆಂಬರ್ 26ರಂದು ಪಾಕಿಸ್ತಾನದಿಂದ ಸಮುದ್ರ ಮಾರ್ಗದಲ್ಲಿ ಪಾಕಿಸ್ತಾನದ 10 ಭಯೋದ್ಪಾದಕರು ದಕ್ಷಿಣ ಮುಂಬೈ ಪ್ರದೇಶಗಳನ್ನು ಪ್ರವೇಶಿಸಿದರು. ಚಾಬಾದ್ ಹೌಸ್ ಮತ್ತು ಯಹೂದಿ ಕೇಂದ್ರ ಸೇರಿದಂತೆ ಹಲವಾರು ಸ್ಥಳಗಳ ಮೇಲೆ ದಾಳಿ ಮಾಡಿದರು. ದಾಳಿಯಲ್ಲಿ 18 ಭದ್ರತಾ ಸಿಬ್ಬಂದಿ ಸೇರಿದಂತೆ 166 ಜನರು ಮೃತಪಟ್ಟಿದ್ದರು. 

ಈ ವೇಳೆ 60 ಗಂಟೆ ಕಾರ್ಯಾಚರಣೆ ನಡೆದಿತ್ತು. ಘಟನೆಯಲ್ಲಿ ಒಂಬತ್ತು ಉಗ್ರರನ್ನು ಹತರಾಗಿದ್ದರು. ದಾಳಿಯಲ್ಲಿ ಜೀವಂತವಾಗಿ ಸಿಕ್ಕಿಬಿದ್ದಿದ್ದ ಉಗ್ರ ಅಜ್ಮಲ್ ಕಸಬ್‌ನನ್ನು 2021ರ ನವೆಂಬರ್ 21ರಂದು ಗಲ್ಲು ಶಿಕ್ಷೆಗೆ ಗುರಿಪಡಿಸಲಾಗಿತ್ತು. 

'ಲಷ್ಕರ್-ಎ-ತಯ್ಬಾ ಮಾರಣಾಂತಿಕ ಮತ್ತು ಖಂಡನೀಯ ಭಯೋತ್ಪಾದಕ ಸಂಘಟನೆಯಾಗಿದ್ದು, ನೂರಾರು ಭಾರತೀಯ ನಾಗರಿಕರ ಹತ್ಯೆಗೆ ಮತ್ತು ಇತರರ ಹತ್ಯೆಗೆ ಕಾರಣವಾಗಿದೆ. 2008ರ ನವೆಂಬರ್ 26ರಂದು ಸಂಘಟನೆ ನಡೆಸಿದ ಹೇಯ ಕೃತ್ಯವು ಶಾಂತಿಯನ್ನು ಬಯಸುವ ಎಲ್ಲಾ ರಾಷ್ಟ್ರಗಳು ಮತ್ತು ಸಮಾಜಗಳಲ್ಲಿ ಇನ್ನೂ ಹಸಿರಾಗಿದೆ' ಎಂದು ಹೇಳಿಕೆ ಸೇರಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಖ್ಯಮಂತ್ರಿ ಬದಲಾವಣೆ: ದೆಹಲಿಯಲ್ಲಿ ಕಾಂಗ್ರೆಸ್‌ ಮ್ಯಾರಥಾನ್‌ ಮೀಟಿಂಗ್ ಬಳಿಕ ಕೆ.ಸಿ ವೇಣುಗೋಪಾಲ್ ಹೇಳಿದ್ದೇನು? Video

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

ಬಕ್ರೀದ್ ಮೇಕೆ ವಿಷಯವಾಗಿ ಮುಂಬೈ ಸೊಸೈಟಿಯಲ್ಲಿ ಭಾರಿ ವಿವಾದ; VHP ಕಾರ್ಯಕರ್ತರ ಮೇಲೆ ಬ್ಲೇಡ್ ನಿಂದ ಹಲ್ಲೆ!

IPL 2026 Qualifier 1: ರಜತ್ ಪಟಿದಾರ್ ಸ್ಫೋಟಕ ಬ್ಯಾಟಿಂಗ್, GTಗೆ ಗೆಲ್ಲಲು 255 ರನ್ ಬೃಹತ್ ಗುರಿ ನೀಡಿದ RCB

ಬೆಂಗಳೂರು: ದೃಷ್ಟಿಹೀನ ಸ್ನೇಹಿತೆ ಬಳಿ ಇದ್ದ 49.5 ಲಕ್ಷ ರೂ. ನಗದು, ಚಿನ್ನ ಕದ್ದ ಖದೀಮ ದಂಪತಿ ಬಂಧನ!

SCROLL FOR NEXT