ಗಾಯತ್ರಿ ಜೋಶಿ ಮತ್ತು ವಿಕಾಸ್ ಒಬೇರಾಯ್ 
ವಿದೇಶ

ಇಟಲಿ: ನಟಿ ಗಾಯತ್ರಿ ಜೋಶಿ ಪ್ರಯಾಣಿಸುತ್ತಿದ್ದ ಲಂಬೋರ್ಗಿನಿ ಕಾರು ಅಪಘಾತ, ಅಪಾಯದಿಂದ ಪಾರು; ವೃದ್ಧ ದಂಪತಿ ಸಾವು

ಬಾಲಿವುಡ್ ಖ್ಯಾತ ನಟಿ ಗಾಯತ್ರಿ ಜೋಶಿ ಮತ್ತು ಅವರ ಪತಿ ವಿಕಾಸ್ ಒಬೆರಾಯ್ ಪ್ರಯಾಣಿಸುತ್ತಿದ್ದ ಕಾರು ಇಟಲಿಯಲ್ಲಿ ಅಪಘಾತವಾಗಿದೆ. ವರದಿಗಳ ಪ್ರಕಾರ ಈ ರಸ್ತೆ ಅಪಘಾತದಲ್ಲಿ ವೃದ್ದ ದಂಪತಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ.

ಮುಂಬಯಿ: ಬಾಲಿವುಡ್ ಖ್ಯಾತ ನಟಿ ಗಾಯತ್ರಿ ಜೋಶಿ ಮತ್ತು ಅವರ ಪತಿ ವಿಕಾಸ್ ಒಬೆರಾಯ್ ಪ್ರಯಾಣಿಸುತ್ತಿದ್ದ ಕಾರು ಇಟಲಿಯಲ್ಲಿ ಅಪಘಾತವಾಗಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವರದಿಗಳ ಪ್ರಕಾರ ಈ ರಸ್ತೆ ಅಪಘಾತದಲ್ಲಿ ಮತ್ತೊಂದು ಕಾರ್ ನಲ್ಲಿದ್ದ ವೃದ್ದ ದಂಪತಿ ಸಾವನ್ನಪ್ಪಿದ್ದಾರೆ .

ತನ್ನ ಪತಿ ವಿಕಾಸ್ ಒಬೆರಾಯ್ ಜೊತೆ ಲಂಬೋರ್ಗಿನಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಅಪಘಾತದಲ್ಲಿ ಫೆರಾರಿಯಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ವೃದ್ಧ ದಂಪತಿ ಸಾವನ್ನಪ್ಪಿದ್ದಾರೆ. ಮೃತ ದಂಪತಿಗಳನ್ನು ಸ್ವಿಟ್ಜರ್ಲೆಂಡ್‌ನ ಜುರಿಚ್ ಬಳಿಯ ವಾಲಿಸೆಲ್ಲೆನ್ ಪಟ್ಟಣದ 67 ವರ್ಷದ ಮಾರ್ಕಸ್ ಕ್ರೌಟ್ಲಿ ಮತ್ತು ಅವರ ಪತ್ನಿ ಮೆಲಿಸ್ಸಾ ಕ್ರೌಟ್ಲಿ (63) ಎಂದು ಗುರುತಿಸಲಾಗಿದೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ವರದಿಗಳ ಪ್ರಕಾರ, ಇಟಲಿಯ ಸಾರ್ಡಿನಿಯಾದಲ್ಲಿ ಈ ಅಪಘಾತ ಸಂಭವಿಸಿದೆ. ಲಂಬೋರ್ಗಿನಿ ಕಾರಿನಲ್ಲಿ ಮಿನಿ ಟ್ರಕ್ ಒಂದನ್ನು ಓವರ್ ಟೇಕ್ ಮಾಡಲು ಯತ್ನಿಸಿದ್ದು, ಹಿಂಬದಿಯಿಂದ ಬಂದ ಫೆರಾರಿಗೆ ಡಿಕ್ಕಿ ಹೊಡೆದಿದೆ. ನಂತರ ಡಿಕ್ಕಿ ಹೊಡೆದ ರಭಸಕ್ಕೆ ಮಿನಿ ಟ್ರಕ್ ಪಲ್ಟಿಯಾಗಿದೆ, ಅಲ್ಲದೆ ಫೆರಾರಿಗೆ ಬೆಂಕಿ ಹೊತ್ತಿಕೊಂಡಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ  ವೃದ್ಧ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಏತನ್ಮಧ್ಯೆ, ಇಟಲಿಯಲ್ಲಿ ಪ್ರವಾಸದಲ್ಲಿರುವ ಜೋಶಿ ಮತ್ತು ಒಬೆರಾಯ್ ಅವರು ಅಪಘಾತದಲ್ಲಿ ಸುರಕ್ಷಿತವಾಗಿರುವುದಾಗಿಯೂ ಮತ್ತು ಯಾವುದೇ ಹಾನಿಯಿಲ್ಲ ಎಂದು ಸ್ಥಳೀಯ ಮುಂಬೈ ಚಾನೆಲ್‌ಗಳಿಗೆ ಖಚಿತಪಡಿಸಿದ್ದಾರೆ, ಆದರೆ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಿಲ್ಲ.

ಈ ಅಪಘಾತದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋವನ್ನು ಕಾರಿನ ಡೆಸ್ಕ್ ಕ್ಯಾಮ್‌ನಿಂದ ರೆಕಾರ್ಡ್ ಮಾಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT