ಅಕ್ಟೋಬರ್ 7 ರ ಶನಿವಾರದಂದು ಇಸ್ರೇಲ್‌ನ ಅಶ್ಕೆಲೋನ್‌ನಲ್ಲಿ ಗಾಜಾ ಪಟ್ಟಿಯಿಂದ ರಾಕೆಟ್ ದಾಳಿಯಲ್ಲಿ ಕಾರುಗಳು ಬೆಂಕಿಗಾಹುತಿಯಾಗಿವೆ 
ವಿದೇಶ

ನೆಲ, ಸಮುದ್ರ ಮತ್ತು ವಾಯುಮಾರ್ಗ ಮೂಲಕ ಪ್ರವೇಶಿಸಿದ ಗಾಜಾ ಉಗ್ರರ ಜೊತೆ ಯುದ್ಧ: ಇಸ್ರೇಲ್ ಸೇನೆ

ಪ್ಯಾಲೆಸ್ತೀನ್ ಎನ್‌ಕ್ಲೇವ್‌ನಿಂದ ಇಸ್ರೇಲ್ ಮೇಲೆ ರಾಕೆಟ್‌ ದಾಳಿ ನಂತರ ಪ್ಯಾರಾಗ್ಲೈಡರ್‌ಗಳನ್ನು ಬಳಸಿ ಭೂಮಿ, ಸಮುದ್ರ ಮತ್ತು ವಾಯುಮಾರ್ಗದಲ್ಲಿ ಇಸ್ರೇಲ್‌ಗೆ ಪ್ರವೇಶಿಸಿದ ಗಾಜಾ ಉಗ್ರರ ವಿರುದ್ಧ ಹೋರಾಟ ನಡೆಸಲಾಗುತ್ತಿದೆ ಎಂದು ಇಸ್ರೇಲ್ ಸೇನೆ ಹೇಳಿದೆ. 

ಜೆರುಸಲೇಂ: ಪ್ಯಾಲೆಸ್ತೀನ್ ಎನ್‌ಕ್ಲೇವ್‌ನಿಂದ ಇಸ್ರೇಲ್ ಮೇಲೆ ರಾಕೆಟ್‌ ದಾಳಿ ನಂತರ ಪ್ಯಾರಾಗ್ಲೈಡರ್‌ಗಳನ್ನು ಬಳಸಿ ಭೂಮಿ, ಸಮುದ್ರ ಮತ್ತು ವಾಯುಮಾರ್ಗದಲ್ಲಿ ಇಸ್ರೇಲ್‌ಗೆ ಪ್ರವೇಶಿಸಿದ ಗಾಜಾ ಉಗ್ರರ ವಿರುದ್ಧ ಹೋರಾಟ ನಡೆಸಲಾಗುತ್ತಿದೆ ಎಂದು ಇಸ್ರೇಲ್ ಸೇನೆ ಹೇಳಿದೆ. 

"ಇದು ಪ್ಯಾರಾಗ್ಲೈಡರ್‌, ಸಮುದ್ರ ಮತ್ತು ನೆಲದ ಮೂಲಕ ನಡೆದ ಸಂಯೋಜಿತ ದಾಳಿಯಾಗಿದೆ ಎಂದು ಸೇನಾ ವಕ್ತಾರ ರಿಚರ್ಡ್ ಹೆಕ್ಟ್ ಸುದ್ದಿಗಾರರಿಗೆ ತಿಳಿಸಿದರು.

ಈಗ ನಾವು ಯುದ್ಧ ಮಾಡುತ್ತಿದ್ದೇವೆ.ಗಾಜಾ ಪಟ್ಟಿಯ ಸುತ್ತಲಿನ ಕೆಲವು ಸ್ಥಳಗಳಲ್ಲಿ ಹೋರಾಡುತ್ತಿದ್ದೇವೆ, ನಮ್ಮ ಪಡೆಗಳು ಈಗ ನೆಲದ ಮೇಲೆ ಹೋರಾಡುತ್ತಿವೆ ಎಂದು ಅವರು ಸೇನೆ ತಿಳಿಸಿದೆ. 

ಯುದ್ಧದಲ್ಲಿ ಇದುವರೆಗೆ ಹಲವು ಸಾವು ನೋವು ಉಂಟಾಗಿದ್ದರೂ ವಿವರಗಳು ಲಭ್ಯವಾಗಿಲ್ಲ. ಪ್ಯಾಲೇಸ್ತೀನ್  ಉಗ್ರಗಾಮಿಗಳು ಅನೇಕ ಇಸ್ರೇಲಿಯನ್ನರನ್ನು ಬಂಧಿಸಿದ್ದಾರೆ. ಹಾಗೆಯೇ ಉತ್ತರ ಇಸ್ರೇಲ್, ವೈರಿಗಳಾದ ಲೆಬನಾನ್ ಮತ್ತು ಸಿರಿಯಾ ಮತ್ತು ಆಕ್ರಮಿತ ವೆಸ್ಟ್ ಬ್ಯಾಂಕ್‌ಗೆ ಸಾವಿರಾರು ಮಿಲಿಟರಿಗಳನ್ನು ಕಳುಹಿಸಲಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ.

ಭಾರತೀಯ ಸ್ಥಳೀಯ ಕಾಲಮಾನ ಇಂದು ಬೆಳಗ್ಗೆ ಸುಮಾರು 10:30 ಕ್ಕೆ ಗಾಜಾದಿಂದ ಕನಿಷ್ಠ 2,200 ರಾಕೆಟ್‌ಗಳನ್ನು ಹಾರಿಸಲಾಯಿತು, ಆದರೆ ಹಮಾಸ್ ಉಗ್ರಗಾಮಿಗಳು ಈ ಸಂಖ್ಯೆಯನ್ನು 5,000 ಕ್ಕಿಂತ ಹೆಚ್ಚು ಎಂದು ವಕ್ತಾರರು ತಿಳಿಸಿದ್ದಾರೆ.

ಹಮಾಸ್ ನಿಯಂತ್ರಣವನ್ನು ತೆಗೆದುಕೊಂಡ ನಂತರ ಇಸ್ರೇಲ್ 2007 ರಲ್ಲಿ ಗಾಜಾವನ್ನು ದುರ್ಬಲಗೊಳಿಸುವ ದಿಗ್ಬಂಧನವನ್ನು ವಿಧಿಸಿತು. ಅಲ್ಲಿಂದೀಚೆಗೆ ಅನೇಕ ಗಡಿಯಾಚೆಗಿನ ಯುದ್ಧಗಳು ನಡೆದಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT