ಇಸ್ರೇಲ್ ಸೇನೆ 
ವಿದೇಶ

ಗಾಜಾ ಪಟ್ಟಿಯ ಸುತ್ತ 1,500 ಹಮಾಸ್ ಭಯೋತ್ಪಾದಕರ ಶವ ಪತ್ತೆ: ಇಸ್ರೇಲ್ ಸೇನೆ

ಇಸ್ರೇಲ್ ಮತ್ತು ಹಮಾಸ್ ನಡುವೆ ನಡೆಯುತ್ತಿರುವ ಯುದ್ಧದ ಸಮಯದಲ್ಲಿ ಸಾವಿನ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿದೆ. ಇಲ್ಲಿಯವರೆಗೆ, ಎರಡೂ ಕಡೆಗಳಲ್ಲಿ ಜೀವ ಮತ್ತು ಆಸ್ತಿ ನಷ್ಟದ ಬಗ್ಗೆ ಯಾವುದೇ ಅಧಿಕೃತ ಅಂಕಿಅಂಶಗಳು ಬಹಿರಂಗವಾಗಿಲ್ಲ.

ಇಸ್ರೇಲ್ ಮತ್ತು ಹಮಾಸ್ ನಡುವೆ ನಡೆಯುತ್ತಿರುವ ಯುದ್ಧದ ಸಮಯದಲ್ಲಿ ಸಾವಿನ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿದೆ. ಇಲ್ಲಿಯವರೆಗೆ, ಎರಡೂ ಕಡೆಗಳಲ್ಲಿ ಜೀವ ಮತ್ತು ಆಸ್ತಿ ನಷ್ಟದ ಬಗ್ಗೆ ಯಾವುದೇ ಅಧಿಕೃತ ಅಂಕಿಅಂಶಗಳು ಬಹಿರಂಗವಾಗಿಲ್ಲ. ಆದರೆ ಇಸ್ರೇಲಿ ಸೇನೆಯು ಗಾಜಾ ಪಟ್ಟಿಯ ಸುತ್ತಲೂ 1,500 ಹಮಾಸ್ ಭಯೋತ್ಪಾದಕರ ಶವಗಳು ಪತ್ತೆಯಾಗಿವೆ ಎಂದು ಹೇಳಿದೆ.

ಹಮಾಸ್ ವಿರುದ್ಧದ ಕಾರ್ಯಾಚರಣೆಯಲ್ಲಿ ಗಾಜಾದ ಸಂಸತ್ತು ಮತ್ತು ನಾಗರಿಕ ಸಚಿವಾಲಯವು ತನ್ನ ಗುರಿಯಾಗಿದೆ ಎಂದು ಇಸ್ರೇಲಿ ಸೇನೆ ಹೇಳಿದೆ. 

ಇಸ್ರೇಲ್‌ನಲ್ಲಿ ಇನ್ನೂ ಅನೇಕ ಪ್ಯಾಲೆಸ್ತೀನ್ ಬಂದೂಕುಧಾರಿಗಳು ಇದ್ದಾರೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ಇಸ್ರೇಲ್ ಗಾಜಾದಲ್ಲಿ 20ಕ್ಕೂ ಹೆಚ್ಚು ಗುರಿಗಳ ಮೇಲೆ ದಾಳಿ ಮಾಡಿದೆ. ಗಾಜಾ ಕಡೆಯಿಂದ ಇಸ್ರೇಲ್ ಮೇಲೆ ರಾಕೆಟ್ ದಾಳಿಯೂ ಮುಂದುವರಿದಿದೆ ಎಂದರು.

ಇಸ್ರೇಲಿ ಸೇನಾ ವಕ್ತಾರ ರಿಚರ್ಡ್ ಹೆಚ್ಟ್, 'ಗಾಜಾ ಪಟ್ಟಿಯ ಸುತ್ತ ಇಸ್ರೇಲ್‌ನಲ್ಲಿ ಸುಮಾರು 1,500 ಹಮಾಸ್ ಭಯೋತ್ಪಾದಕರ ಶವಗಳು ಪತ್ತೆಯಾಗಿವೆ. ಭದ್ರತಾ ಪಡೆಗಳು ಗಾಜಾದ ಗಡಿಯಲ್ಲಿ ಹೆಚ್ಚು ಕಡಿಮೆ ನಿಯಂತ್ರಣವನ್ನು ಪುನಃಸ್ಥಾಪಿಸಿವೆ. ನಮ್ಮ ಮಾಹಿತಿಯ ಪ್ರಕಾರ, ಗಾಜಾದ ಮೇಲೆ ಇಸ್ರೇಲ್ ದಾಳಿ ಶುರು ಮಾಡಿದ ನಂತರ ಯಾರೂ ಗಡಿಯನ್ನು ದಾಟಿಲ್ಲ. ಯಾವುದೇ ಒಳನುಸುಳುವಿಕೆ ಇಲ್ಲ, ಆದರೆ ಒಳನುಸುಳುವಿಕೆ ಇನ್ನೂ ಸಂಭವಿಸಬಹುದು. ಗಡಿ ಸುತ್ತಲಿನ ಎಲ್ಲ ಸಮುದಾಯಗಳ ಜನರನ್ನು ಸ್ಥಳಾಂತರಿಸುವ ಕಾರ್ಯವನ್ನು ಸೇನೆ ಬಹುತೇಕ ಪೂರ್ಣಗೊಳಿಸಿದೆ ಎಂದು ಹೇಳಿದರು.

ಶನಿವಾರ ಹಮಾಸ್ ಇಸ್ರೇಲ್ ಮೇಲೆ ಸಾವಿರಾರು ರಾಕೆಟ್ ಗಳ ಮೂಲಕ ದಾಳಿ ನಡೆಸಿತ್ತು. ಇದಾದ ಬಳಿಕ ಹಮಾಸ್ ಉಗ್ರರು ಗಡಿ ಭೇದಿಸಿ ಇಸ್ರೇಲ್ ಪ್ರವೇಶಿಸಿ ಜನರ ಮೇಲೆ ಗುಂಡಿನ ದಾಳಿ ಆರಂಭಿಸಿದ್ದರು. ಅಲ್ಲದೆ ನೂರಾರು ಜನರನ್ನು ಅಪಹರಿಸಿದ್ದಾರೆ. ಇದಕ್ಕೆ ಪ್ರತಿಯಾಗಿ, ಇಸ್ರೇಲ್ ಗಾಜಾ ಪಟ್ಟಿಯಲ್ಲಿರುವ ಹಮಾಸ್ ಗುರಿಗಳ ಮೇಲೆ ಬೃಹತ್ ವಾಯುದಾಳಿಗಳನ್ನು ನಡೆಸುತ್ತಿದೆ. ಇದರಿಂದಾಗಿ ಕರಾವಳಿ ಪ್ರದೇಶದಲ್ಲಿ ಇದುವರೆಗೆ ಕನಿಷ್ಠ 687 ಜನರು ಹತ್ಯೆಯಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT