ಇಸ್ರೇಲ್ ರಾಜತಾಂತ್ರಿಕರ ಮೇಲೆ ದಾಳಿ 
ವಿದೇಶ

ಇಸ್ರೇಲ್-ಹಮಾಸ್ ಯುದ್ಧ: ಚೀನಾದಲ್ಲಿ ಇಸ್ರೇಲ್ ರಾಜತಾಂತ್ರಿಕ ಕಚೇರಿ ಸಿಬ್ಬಂದಿಗೆ ಚಾಕು ಇರಿತ

ಇಸ್ರೇಲ್ ಮತ್ತು ಹಮಾಸ್ ನಡುವೆ 7 ದಿನಗಳಿಂದ ಯುದ್ಧ ನಡೆಯುತ್ತಿದೆ. ಇದೇ ವೇಳೆ ಚೀನಾದಲ್ಲಿ ಇಸ್ರೇಲ್ ರಾಜತಾಂತ್ರಿಕ ಕಚೇರಿ ಸಿಬ್ಬಂದಿ ಮೇಲೆ ವ್ಯಕ್ತಿಯೋರ್ವ ಮಾರಣಾಂತಿಕ ದಾಳಿ ನಡೆಸಿದ್ದಾನೆ.

ಬೀಜಿಂಗ್: ಇಸ್ರೇಲ್ ಮತ್ತು ಹಮಾಸ್ ನಡುವೆ 7 ದಿನಗಳಿಂದ ಯುದ್ಧ ನಡೆಯುತ್ತಿದೆ. ಇದೇ ವೇಳೆ ಚೀನಾದಲ್ಲಿ ಇಸ್ರೇಲ್ ರಾಜತಾಂತ್ರಿಕ ಕಚೇರಿ ಸಿಬ್ಬಂದಿ ಮೇಲೆ ವ್ಯಕ್ತಿಯೋರ್ವ ಮಾರಣಾಂತಿಕ ದಾಳಿ ನಡೆಸಿದ್ದಾನೆ. 

ಇಸ್ರೇಲ್ ವಿದೇಶಾಂಗ ಸಚಿವಾಲಯ ಈ ಮಾಹಿತಿ ನೀಡಿದೆ. ರಾಜತಾಂತ್ರಿಕ ಕಚೇರಿ ಸಿಬ್ಬಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅವರ ಸ್ಥಿತಿ ಸ್ಥಿರವಾಗಿದೆ ಎಂದು ಸಚಿವಾಲಯ ತಿಳಿಸಿದೆ.

ವಾಸ್ತವವಾಗಿ, ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧವು ಮುಂದುವರಿಯುತ್ತದ್ದು ಇದೇ ವೇಳೆ ಚೀನಾದಲ್ಲಿ ಇಸ್ರೇಲ್ ರಾಜತಾಂತ್ರಿಕ ಸಿಬ್ಬಂದಿ ಮೇಲೆ ನಡುರಸ್ತೆಯಲ್ಲೇ ವ್ಯಕ್ತಿಯೋರ್ವ ಚಾಕುವಿನಿಂದ ದಾಳಿ ಮಾಡಿದ್ದಾನೆ.

ಪ್ರಪಂಚದ ಎಲ್ಲಾ ದೇಶಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಅಮೆರಿಕ, ಬ್ರಿಟನ್, ಫ್ರಾನ್ಸ್, ಜರ್ಮನಿ ಸೇರಿದಂತೆ ಹಲವು ಯುರೋಪಿಯನ್ ರಾಷ್ಟ್ರಗಳು ಹಮಾಸ್ ಅನ್ನು ಭಯೋತ್ಪಾದಕ ಸಂಘಟನೆ ಎಂದು ಕರೆಯುವ ಮೂಲಕ ಇಸ್ರೇಲ್ ಕ್ರಮವನ್ನು ಸಮರ್ಥಿಸಿಕೊಂಡಿವೆ. ಅದೇ ಸಮಯದಲ್ಲಿ, ಇರಾನ್ ಮತ್ತು ಸೌದಿ ಸೇರಿದಂತೆ ಎಲ್ಲಾ ಅರಬ್ ದೇಶಗಳು ಇಸ್ರೇಲ್ ನ ಕ್ರಮವನ್ನು ತಪ್ಪು ಎಂದು ಕರೆಯುತ್ತಿವೆ.

ಅಕ್ಟೋಬರ್‌ 7ರಂದು ಹಮಾಸ್‌ ಉಗ್ರರು ಇಸ್ರೇಲ್ ಮೇಲೆ ದಾಳಿ ನಡೆಸಿ 1,200 ಮಂದಿಯನ್ನು ಹತ್ಯೆ ಮಾಡಿದ್ದರು. ಈ ದಾಳಿಗೆ ಪ್ರತೀಕಾರವಾಗಿ ಹಮಾಸ್‌ ಅನ್ನು ನಾಶಗೈಯ್ಯುವುದಾಗಿ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಘೋಷಿಸಿದ್ದಾರೆ. ಇಲ್ಲಿಯವರೆಗೂ ಇಸ್ರೇಲ್‌ ದಾಳಿಯಿಂದಾಗಿ ಗಾಝಾ ಪಟ್ಟಿಯಲ್ಲಿ ಅಪಾರ ಸಾವು ನೋವು ಸಂಭವಿಸಿದ್ದು, ಸಾವಿನ ಸಂಖ್ಯೆ 1530 ದಾಟಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT