ಇಸ್ರೇಲ್ ವಾಯುದಾಳಿ 
ವಿದೇಶ

ಇಸ್ರೇಲಿ ವೈಮಾನಿಕ ದಾಳಿಯಲ್ಲಿ ಹಮಾಸ್ ಹಿರಿಯ ಕಮಾಂಡರ್ ಹತ್ಯೆ!

ಇಸ್ರೇಲಿ ವೈಮಾನಿಕ ದಾಳಿಯ ಸಮಯದಲ್ಲಿ ಹಮಾಸ್‌ನ ಹಿರಿಯ ಕಮಾಂಡರ್ ರೊಬ್ಬರು ಹತ್ಯೆಯಾಗಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಪಡೆ ತಿಳಿಸಿದೆ ಎಂದು ಟೈಮ್ಸ್ ಆಫ್ ಇಸ್ರೇಲ್ ವರದಿ ಮಾಡಿದೆ.

ಗಾಜಾಪಟ್ಟಿ: ಇಸ್ರೇಲಿ ವೈಮಾನಿಕ ದಾಳಿಯ ಸಮಯದಲ್ಲಿ ಹಮಾಸ್‌ನ ಹಿರಿಯ ಕಮಾಂಡರ್ ರೊಬ್ಬರು ಹತ್ಯೆಯಾಗಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಪಡೆ ತಿಳಿಸಿದೆ ಎಂದು ಟೈಮ್ಸ್ ಆಫ್ ಇಸ್ರೇಲ್ ವರದಿ ಮಾಡಿದೆ.

ನುಖ್ಬಾ ಘಟಕದ ದಕ್ಷಿಣ ಖಾನ್ ಯೂನಿಸ್ ಬೆಟಾಲಿಯನ್ ಎಂದು ಕರೆಯಲ್ಪಡುವ ಕಮಾಂಡರ್ ಬಿಲ್ಲಾಲ್ ಅಲ್-ಖೆದ್ರಾ ಅವರನ್ನು ಶಿನ್ ಬೆಟ್ ಭದ್ರತಾ ಸಂಸ್ಥೆ ಮತ್ತು ಮಿಲಿಟರಿ ಗುಪ್ತಚರ ನಿರ್ದೇಶನಾಲಯದ ಗುಪ್ತಚರ ಪ್ರಯತ್ನಗಳ ನಂತರ ವೈಮಾನಿಕ ದಾಳಿಯಲ್ಲಿ ಹತ್ಯೆ ಮಾಡಲಾಗಿದೆ.

ಈತ ಕಳೆದ ವಾರಾಂತ್ಯದಲ್ಲಿ ನಿರಿಮ್ ಮತ್ತು ನಿರ್ ಓಝ್‌ ದಕ್ಷಿಣ ಸಮುದಾಯಗಳ ಮೇಲೆ ದಾಳಿಯ ನೇತೃತ್ವ ವಹಿಸಿದ್ದ ಎಂದು ಟೈಮ್ಸ್ ಆಫ್ ಇಸ್ರೇಲ್ ವರದಿ ಮಾಡಿದೆ. ಕಿಬ್ಬುಟ್ಜ್ ನಿರಿಮ್ ಮತ್ತು ನಿರ್ ಓಜ್‌ನಲ್ಲಿನ ಬರ್ಬರ ದಾಳಿಗೆ ಆತ ಕಾರಣನಾಗಿದ್ದ ಎಂದು ಇಸ್ರೇಲ್ ರಕ್ಷಣಾ ಪಡೆ ಮಾಹಿತಿ ನೀಡಿದೆ. ಗಾಜಾ ಪಟ್ಟಿಯಲ್ಲಿ ರಾತ್ರಿಯಿಡೀ ನಡೆದ ವೈಮಾನಿಕ ದಾಳಿಯಲ್ಲಿ ಇನ್ನೂ ಹಲವಾರು ಹಮಾಸ್ ಮತ್ತು ಇಸ್ಲಾಮಿಕ್ ಜಿಹಾದ್ ಭಯೋತ್ಪಾದಕರು ಹತರಾಗಿದ್ದಾರೆ ಎನ್ನಲಾಗಿದೆ.

ಈ ಮಧ್ಯೆ ಹಮಾಸ್ ಕಮಾಂಡ್ ಕೇಂದ್ರಗಳು, ಮಿಲಿಟರಿ ಕಾಂಪೌಂಡ್ ಗಳು, ರಾಕೆಟ್ ಲಾಂಚರ್ ಗಳು, ಟ್ಯಾಂಕ್ ವಿರೋಧಿ ಕ್ಷಿಪಣಿ ಉಡಾವಣಾ ಪೋಸ್ಟ್‌ಗಳು ಮತ್ತು ವೀಕ್ಷಣಾ ಪೋಸ್ಟ್‌ಗಳು ಸೇರಿದಂತೆ 100 ಕ್ಕೂ ಹೆಚ್ಚು ಕಡೆಗಳಲ್ಲಿ ಇಸ್ರೇಲ್ ರಕ್ಷಣಾ ಪಡೆ ಭಾನುವಾರ ರಾತ್ರಿಯಿಡೀ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಪ್ರಕರಣ: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT