ಯುದ್ಧದಲ್ಲಿ ಸಾವನ್ನಪ್ಪಿದ್ದ ಇಸ್ರೇಲಿ ಯೋಧರ ಕುಟುಂಬ ಸದಸ್ಯರ ಚಿತ್ರ 
ವಿದೇಶ

ಹಮಾಸ್ ದಾಳಿಯಲ್ಲಿ ಭಾರತೀಯ ಮೂಲದ ಇಬ್ಬರು ಇಸ್ರೇಲಿ ಮಹಿಳಾ ಪೊಲೀಸರ ಸಾವು

ಈ ತಿಂಗಳ ಆರಂಭದಲ್ಲಿ ಪ್ಯಾಲೇಸ್ತೈನ್ ಉಗ್ರಗಾಮಿ ಗುಂಪು ಹಮಾಸ್ ನಡೆಸಿದ ದಾಳಿಯಲ್ಲಿ ಭಾರತೀಯ ಮೂಲದ  ಇಬ್ಬರು ಇಸ್ರೇಲಿ ಮಹಿಳಾ ಭದ್ರತಾ ಅಧಿಕಾರಿಗಳು ಸಾವನ್ನಪ್ಪಿದ್ದಾರೆ ಎಂದು ಅಧಿಕೃತ ಮೂಲಗಳು  ಭಾನುವಾರ ಖಚಿತಪಡಿಸಿವೆ.

ಇಸ್ರೇಲ್: ಈ ತಿಂಗಳ ಆರಂಭದಲ್ಲಿ ಪ್ಯಾಲೇಸ್ತೈನ್ ಉಗ್ರಗಾಮಿ ಗುಂಪು ಹಮಾಸ್ ನಡೆಸಿದ ದಾಳಿಯಲ್ಲಿ ಭಾರತೀಯ ಮೂಲದ  ಇಬ್ಬರು ಇಸ್ರೇಲಿ ಮಹಿಳಾ ಭದ್ರತಾ ಅಧಿಕಾರಿಗಳು ಸಾವನ್ನಪ್ಪಿದ್ದಾರೆ ಎಂದು ಅಧಿಕೃತ ಮೂಲಗಳು  ಭಾನುವಾರ ಖಚಿತಪಡಿಸಿವೆ.

ಅಶ್ಡೋಡ್‌ ಹೋಮ್ ಫ್ರೆಂಟ್ ಕಮಾಂಡ್ ನ  22 ವರ್ಷದ ಲೆಫ್ಟಿನೆಂಟ್ ಕಮಾಂಡರ್ ಓರ್ ಮೋಸೆಸ್ ಮತ್ತು ಪೊಲೀಸ್ ಸೆಂಟ್ರಲ್ ಡಿಸ್ಟ್ರಿಕ್ಟ್‌ ಬಾರ್ಡರ್ ನ ಪೊಲೀಸ್ ಅಧಿಕಾರಿ ಇನ್ಸ್‌ಪೆಕ್ಟರ್ ಕಿಮ್ ಡೋಕ್ರಾಕರ್ ಅಕ್ಟೋಬರ್ 7 ರಂದು ನಡೆದ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಅಧಿಕೃತ ಮೂಲಗಳು ಖಚಿತಪಡಿಸಿವೆ.

ಅವರಿಬ್ಬರೂ ಯುದ್ಧದ ಕರ್ತವ್ಯದಲ್ಲಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತದೆ. ಇದುವರೆಗೆ 286 ಸೇನಾ ಯೋಧರು ಮತ್ತು 51 ಪೊಲೀಸ್ ಅಧಿಕಾರಿಗಳು ಸಂಘರ್ಷದಲ್ಲಿ ಸಾವನ್ನಪ್ಪಿದ್ದಾರೆ ಎಂದು  ಸೇನಾ ಅಧಿಕಾರಿಗಳು ತಿಳಿಸಿದ್ದಾರೆ. 

ದಾಳಿಯಲ್ಲಿ ಮೃತಪಟ್ಟವರ ಗುರುತನ್ನು ದೃಢೀಕರಿಸಲು ಮತ್ತು ಕಾಣೆಯಾದ ಅಥವಾ ಬಹುಶಃ ಅಪಹರಣಕ್ಕೊಳಗಾದವರ ಹುಡುಕಾಟವನ್ನು ಇಸ್ರೇಲ್  ಮುಂದುವರೆಸುತ್ತಿರುವುದರಿಂದ ಇನ್ನೂ ಹಲವು ಮಂದಿ ಸಾವನ್ನಪ್ಪಿರಬಹುದೆಂದು ಕೆಲ ಸಮುದಾಯದ ಸದಸ್ಯರು ತಿಳಿಸಿದ್ದಾರೆ. 

ದಾಳಿಯಲ್ಲಿ ಗಾಯಗೊಂಡಿರುವ ಕೇರಳದ ಆರೈಕೆದಾರ ಶೀಜಾ ಆನಂದ್ ಈಗ ಸ್ಥಿರವಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಕ್ಟೋಬರ್ 7 ರಂದು ಉತ್ತರ ಇಸ್ರೇಲಿ ನಗರವಾದ ಅಶ್ಕೆಲೋನ್‌ನಲ್ಲಿ ನಡೆದ ರಾಕೆಟ್ ದಾಳಿಯಲ್ಲಿ ಅವರ ಕೈ ಮತ್ತು ಕಾಲಿಗೆ ಗಾಯಗಳಾಗಿತ್ತು. ಕೂಡಲೇ ಆಕೆಗೆ ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT