ಇಸ್ರೇಲ್ ದಾಳಿಯಲ್ಲಿ ಗಾಯಗೊಂಡ ಪ್ಯಾಲೆಸ್ಟೀನಿಯರು 
ವಿದೇಶ

ಇಸ್ರೇಲ್ ಗಡಿಯಲ್ಲಿ ಉದ್ವಿಗ್ನತೆ, ಲೆಬನಾನ್‌ನಲ್ಲಿ 19,000 ಕ್ಕೂ ಹೆಚ್ಚು ಜನರ ಸ್ಥಳಾಂತರ: ಯುಎನ್ ಏಜೆನ್ಸಿ

ಇಸ್ರೇಲ್ ಮತ್ತು ಹಿಜ್ಬುಲ್ಲಾ ನಡುವಿನ ಉದ್ವಿಗ್ನತೆಯ ನಡುವೆ ಲೆಬನಾನ್‌ನಲ್ಲಿ 19,000 ಕ್ಕೂ ಹೆಚ್ಚು ಜನರು ಸ್ಥಳಾಂತರಗೊಂಡಿದ್ದಾರೆ ಎಂದು ವಿಶ್ವಸಂಸ್ಥೆಯ ಏಜೆನ್ಸಿಯೊಂದು ಸೋಮವಾರ ಬಿಡುಗಡೆ ಮಾಡಿದ ಅಂಕಿಅಂಶಗಳು ತೋರಿಸಿವೆ.

ಬೈರೂಟ್: ಇಸ್ರೇಲ್ ಮತ್ತು ಹಿಜ್ಬುಲ್ಲಾ ನಡುವಿನ ಉದ್ವಿಗ್ನತೆಯ ನಡುವೆ ಲೆಬನಾನ್‌ನಲ್ಲಿ 19,000 ಕ್ಕೂ ಹೆಚ್ಚು ಜನರು ಸ್ಥಳಾಂತರಗೊಂಡಿದ್ದಾರೆ ಎಂದು ವಿಶ್ವಸಂಸ್ಥೆಯ ಏಜೆನ್ಸಿಯೊಂದು ಸೋಮವಾರ ಬಿಡುಗಡೆ ಮಾಡಿದ ಅಂಕಿ ಅಂಶಗಳು ತೋರಿಸಿವೆ. ಗಡಿಯಾಚೆಗಿನ ಘಟನೆಗಳ ಹೆಚ್ಚಳವು ಲೆಬನಾನ್‌ನಲ್ಲಿ 19,646 ಜನರ ಸ್ಥಳಾಂತರಕ್ಕೆ ಕಾರಣವಾಗಿದೆ. ದಕ್ಷಿಣ ಮತ್ತು ದೇಶದೊಳಗೆ ಇತರ ಕಡೆಗಳಲ್ಲಿ ವಲಸೆಗಾಗಿ ಸ್ಥಳಾಂತರಗೊಂಡಿದ್ದಾರೆ ಎಂದು  ಅಂತರರಾಷ್ಟ್ರೀಯ ಸಂಸ್ಥೆ ಹೇಳಿದೆ.

ಗಡಿಯಾಚೆಗಿನ ಉದ್ವಿಗ್ನತೆ ಮುಂದುವರಿದಂತೆ ಈ ಸಂಖ್ಯೆಗಳು ಹೆಚ್ಚಾಗಬಹುದು ಅಥವಾ ಹಿಂಸಾಚಾರ ಉಲ್ಬಣಗೊಳ್ಳಬಹುದೆಂದು ನಿರೀಕ್ಷೆಸುತ್ತೇವೆ ಎಂದು ಐಒಎಂ ವಕ್ತಾರ ಮೊಹಮ್ಮದಲಿ ಅಬುನಾಜೆಲಾ ಎಎಫ್ ಪಿ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. ಹಮಾಸ್ ಉಗ್ರಗಾಮಿಗಳು ಅಕ್ಟೋಬರ್ 7 ರಂದು ಗಾಜಾ ಪಟ್ಟಿಯಿಂದ ಇಸ್ರೇಲ್‌ಗೆ ನುಗ್ಗಿದ ನಂತರ ಉಂಟಾದ ಯುದ್ಧದಲ್ಲಿ ಕನಿಷ್ಠ 1,400 ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಇಸ್ರೇಲಿ ಅಧಿಕಾರಿಗಳು ತಿಳಿಸಿದ್ದಾರೆ. 

ಹಮಾಸ್ ನ ಆರೋಗ್ಯ ಸಚಿವಾಲಯದ ಪ್ರಕಾರ ಇಸ್ರೇಲ್‌ನ ಪ್ರತೀಕಾರದ ಬಾಂಬ್ ದಾಳಿಯಲ್ಲಿ 5,000 ಕ್ಕೂ ಹೆಚ್ಚು ಪ್ಯಾಲೆಸ್ಟೀನಿಯನ್ನರನ್ನು ಹತ್ಯೆ ಮಾಡಲಾಗಿದೆ. ಇರಾನ್-ಬೆಂಬಲಿತ ಶಿಯಾ ಮುಸ್ಲಿಂ ಗುಂಪು ಹೆಜ್ಬೊಲ್ಲಾಹ್ ಇಸ್ರೇಲ್ ಮೇಲೆ ದಾಳಿಗಳನ್ನು ಹೆಚ್ಚಿಸಿದ್ದು, ಮಿತ್ರ ಹಮಾಸ್‌ಗೆ ಬೆಂಬಲವಾಗಿ ಲೆಬನಾನ್‌ನಿಂದ ದಾಳಿ ನಡೆಸಲು ಗುಂಪು ಉದ್ದೇಶಿಸಿದೆ ಎಂಬುದು ಆತಂಕವನ್ನು ಹೆಚ್ಚಿಸಿದೆ.

ಇಸ್ರೇಲ್ ಲೆಬನಾನ್ ಮೇಲೆ ಗಡಿಯಾಚೆಗಿನ ದಾಳಿಗಳು ಮತ್ತು ಬಾಂಬ್ ದಾಳಿಗಳನ್ನು ನಡೆಸಿದೆ, ಆದರೆ ಪ್ಯಾಲೇಸ್ಟಿನಿಯನ್ ಗುಂಪುಗಳು ಇಸ್ರೇಲ್‌ಗೆ  ಒಳನುಸುಳುವಿಕೆ ಪ್ರಯತ್ನಗಳನ್ನು ಪ್ರಾರಂಭಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

SCROLL FOR NEXT