ಅಮೆರಿಕ ಅಧ್ಯಕ್ಷ ಜೋ ಬೈಡನ್ (ಸಂಗ್ರಹ ಚಿತ್ರ) 
ವಿದೇಶ

ಇಸ್ರೇಲ್ ಮೇಲಿನ ಹಮಾಸ್ ದಾಳಿಗೆ 'ಭಾರತ-ಮಧ್ಯಪ್ರಾಚ್ಯ ಆರ್ಥಿಕ ಕಾರಿಡಾರ್ ಕಾರಣ': ಅಮೆರಿಕ ಅಧ್ಯಕ್ಷ ಜೋ ಬೈಡನ್

ಇಸ್ರೇಲ್ ಮೇಲೆ ಹಮಾಸ್ ಉಗ್ರರು ಅಕ್ಟೋಬರ್ 7 ರಂದು ನಡೆಸಿದ ಭೀಕರ ದಾಳಿಗೆ ಭಾರತ-ಮಧ್ಯಪ್ರಾಚ್ಯ ಆರ್ಥಿಕ ಕಾರಿಡಾರ್ ನಿರ್ಮಾಣ ಘೋಷಣೆ ಕಾರಣವಾಗಿರಬಹುದು ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಹೇಳಿದ್ದಾರೆ.

ವಾಷಿಂಗ್ಟನ್: ಇಸ್ರೇಲ್ ಮೇಲೆ ಹಮಾಸ್ ಉಗ್ರರು ಅಕ್ಟೋಬರ್ 7 ರಂದು ನಡೆಸಿದ ಭೀಕರ ದಾಳಿಗೆ ಭಾರತ-ಮಧ್ಯಪ್ರಾಚ್ಯ ಆರ್ಥಿಕ ಕಾರಿಡಾರ್ ನಿರ್ಮಾಣ ಘೋಷಣೆ ಕಾರಣವಾಗಿರಬಹುದು ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಹೇಳಿದ್ದಾರೆ.

ಹೌದು.. ಈ ಹಿಂದೆ ಭಾರತದಲ್ಲಿ ನಡೆದ ಜಿ20 ಶೃಂಗಸಭೆಯಲ್ಲಿ ಭಾರತ, ಇಸ್ರೇಲ್, ಅಮೆರಿಕ ಸೇರಿದಂತೆ ಹಲವು ದೇಶಗಳು ಭಾರತ-ಮಧ್ಯಪ್ರಾಚ್ಯ ಆರ್ಥಿಕ ಕಾರಿಡಾರ್ ನಿರ್ಮಾಣ ಘೋಷಣೆ ಮಾಡಿದ್ದವು. ಈ ಸಂಬಂಧ ಮಹತ್ವದ ಎಂಒಯು (Memorandum of Understanding-MoU)ಗೂ ಸಹಿ ಹಾಕಿದ್ದವು. ಇದು ಇಡೀ ಪ್ರದೇಶವನ್ನು ರೈಲು, ರಸ್ತೆ ಮತ್ತು ಬಂದರುಗಳ ಜಾಲದೊಂದಿಗೆ ಸಂಯೋಜಿಸುವ ಮಹತ್ವದ ಒಪ್ಪಂದವಾಗಿತ್ತು. ಆದರೆ ಇದೇ ಒಪ್ಪಂದ ಇಸ್ರೇಲ್ ಮೇಲಿನ ಹಮಾಸ್ ಉಗ್ರರ ದಾಳಿಗೆ ಕಾರಣವಾಗಿರಬಹುದು ಎಂದು ಜೋ ಬೈಡನ್ ಹೇಳಿದ್ದಾರೆ.

ಈ ಬಗ್ಗೆ ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡು ಮಾತನಾಡಿದ ಜೋ ಬೈಡನ್, "ಹಮಾಸ್ ದಾಳಿ ಮಾಡಿದಾಗ ಈ ದಾಳಿಗೆ ಹಲವು ಕಾರಣಗಳನ್ನು ಪಟ್ಟಿ ಮಾಡಲಾಗಿದೆ. ಈ ಪೈಕಿ ಒಂದು ಕಾರಣ ನನಗೆ ಮನವರಿಕೆಯಾಗಿದ್ದು, ಅದು  ಭಾರತ-ಮಧ್ಯಪ್ರಾಚ್ಯ ಆರ್ಥಿಕ ಕಾರಿಡಾರ್ ನಿರ್ಮಾಣ ಘೋಷಣೆಯಾಗಿದೆ. ಇದಕ್ಕೆ ನನ್ನ ಬಳಿ ಯಾವುದೇ ಪುರಾವೆಗಳಿಲ್ಲ. ಆದರೆ ಇಸ್ರೇಲ್‌ಗಾಗಿ ಪ್ರಾದೇಶಿಕ ಏಕೀಕರಣ ಮತ್ತು ಒಟ್ಟಾರೆ ಪ್ರಾದೇಶಿಕ ಏಕೀಕರಣದ ಕಡೆಗೆ ನಾವು ಮಾಡುತ್ತಿರುವ ಪ್ರಗತಿಯೇ ಹಮಾಸ್ ಉಗ್ರರ ಈ ದಾಳಿಗೆ ಕಾರಣವಾಗಿರಬಹುದು. ಆದರೆ ನಾವು ಈ ದಾಳಿಯಿಂದ ಎದೆಗುಂದುವ ಅವಶ್ಯಕತೆ ಇಲ್ಲ. ನಾವು ಈ ಕೆಲಸದಿಂದ ಹಿಂದೆ ಬೀಳುವ ಯಾವುದೇ ಕಾರಣಗಳಿಲ್ಲ ಎಂದು ಹೇಳಿದರು.

ಅಮೆರಿಕ ಅಧ್ಯಕ್ಷ ಜೋ ಬೈಡನ್ ಈ ಮಹತ್ವಾಕಾಂಕ್ಷಿ ಆರ್ಥಿಕ ಕಾರಿಡಾರ್ ಯೋಜನೆಯನ್ನು ಶ್ಲಾಘಿಸಿದರು. ಈ ಯೋಜನೆಯು ಎರಡು ಖಂಡಗಳಲ್ಲಿ ಹೂಡಿಕೆಗೆ ಅವಕಾಶಗಳನ್ನು ಉತ್ತೇಜಿಸುತ್ತದೆ. ರೈಲು ಬಂದರು ಯೋಜನೆಯು ಹೆಚ್ಚು ಸುಸ್ಥಿರ, ಸಮಗ್ರ ಮಧ್ಯಪ್ರಾಚ್ಯವನ್ನು ನಿರ್ಮಿಸುವ ಪ್ರಯತ್ನದ ಭಾಗವಾಗಿದೆ ಎಂದು ಹೇಳಿದರು.

ಈ ಹಿಂದೆ ಭಾರತದ ರಾಜಧಾನಿ ದೆಹಲಿಯಲ್ಲಿ ನಡೆದ ಜಿ20 ಶೃಂಗಸಭೆಯ ಸಂದರ್ಭದಲ್ಲಿ ಭಾರತ, ಅಮೇರಿಕಾ, ಯುಎಇ, ಸೌದಿ ಅರೇಬಿಯಾ, ಫ್ರಾನ್ಸ್, ಜರ್ಮನಿ, ಇಟಲಿ ಮತ್ತು ಯುರೋಪಿಯನ್ ‍ಒಕ್ಕೂಟ ಭಾರತ-ಮಧ್ಯಪ್ರಾಚ್ಯ-ಯುರೋಪ್ ಆರ್ಥಿಕ ಕಾರಿಡಾರ್ ಸ್ಥಾಪಿಸಲು ತಿಳುವಳಿಕೆ ಪತ್ರಕ್ಕೆ (ಎಂಒಯು) ಸಹಿ ಹಾಕಿದ್ದವು. ಮೂಲಗಳ ಪ್ರಕಾರ ಏಷ್ಯಾ, ಪಶ್ಚಿಮ ಏಷ್ಯಾ, ಮಧ್ಯಪ್ರಾಚ್ಯ ಮತ್ತು ಯುರೋಪ್ ನಡುವೆ ವರ್ಧಿತ ಸಂಪರ್ಕ ಮತ್ತು ಆರ್ಥಿಕ ಏಕೀಕರಣದ ಮೂಲಕ ಆರ್ಥಿಕ ಅಭಿವೃದ್ಧಿಗೆ ಈ ಕಾರಿಡಾರ್ ಪ್ರೋತ್ಸಾಹ ಮತ್ತು ಪ್ರಚೋದನೆಯನ್ನು ನೀಡುತ್ತದೆ ಎಂದು ಹೇಳಲಾಗಿತ್ತು.

ಭಾರತ-ಮಧ್ಯಪ್ರಾಚ್ಯ-ಯುರೋಪ್ ಆರ್ಥಿಕ ಕಾರಿಡಾರ್ ಎರಡು ಪ್ರತ್ಯೇಕ ಕಾರಿಡಾರ್‌ಗಳನ್ನು ಒಳಗೊಂಡಿರುತ್ತದೆ, ಭಾರತವನ್ನು ಪಶ್ಚಿಮ ಏಷ್ಯಾ/ಮಧ್ಯಪ್ರಾಚ್ಯಕ್ಕೆ ಸಂಪರ್ಕಿಸುವ ಪೂರ್ವ ಕಾರಿಡಾರ್ ಮತ್ತು ಪಶ್ಚಿಮ ಏಷ್ಯಾ/ಮಧ್ಯಪ್ರಾಚ್ಯವನ್ನು ಯುರೋಪ್‌ಗೆ ಸಂಪರ್ಕಿಸುವುದು ಈ ಉತ್ತರ ಕಾರಿಡಾರ್ ನ ಪ್ರಮುಖ ಧ್ಯೇಯವಾಗಿದೆ.

ಇದು ರೈಲು ಮಾರ್ಗವನ್ನು ಒಳಗೊಂಡಿರುತ್ತದೆ. ಇದು ಪೂರ್ಣಗೊಂಡ ನಂತರ, ಭಾರತದ ಮೂಲಕ ಆಗ್ನೇಯ ಏಷ್ಯಾದ ನಡುವೆ ಸರಕು ಮತ್ತು ಸೇವೆಗಳ ಸಾಗಣೆಯನ್ನು ಹೆಚ್ಚಿಸುವ ಅಸ್ತಿತ್ವದಲ್ಲಿರುವ ಬಹು-ಮಾದರಿ ಸಾರಿಗೆ ಮಾರ್ಗಗಳಿಗೆ ಪೂರಕವಾಗಿ ವಿಶ್ವಾಸಾರ್ಹ ಮತ್ತು ವೆಚ್ಚ-ಪರಿಣಾಮಕಾರಿ ಅಡ್ಡ-ಗಡಿ ಹಡಗಿನಿಂದ ರೈಲು ಸಾರಿಗೆ ಜಾಲವನ್ನು ಪಶ್ಚಿಮ ಏಷ್ಯಾ/ಮಧ್ಯ ಪೂರ್ವ ಯುರೋಪ್‌ಗೆ ಒದಗಿಸುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

ಉಚ್ಚಾಟಿತ AIADMK ಹಿರಿಯ ನಾಯಕ ಸೆಂಗೊಟ್ಟೈಯನ್ ನಾಳೆ ವಿಜಯ್ ಭೇಟಿ; TVK ಸೇರುವ ಸಾಧ್ಯತೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

SCROLL FOR NEXT