ಇಸ್ರೇಲ್ ಸೇನಾಪಡೆಯ ವಕ್ತಾರ ಡೆನಿಯಲ್ ಹಗರಿ 
ವಿದೇಶ

ಯುದ್ಧ ಬಯಸಿದ್ದು, ಆರಂಭಿಸಿದ್ದು ನಾವಲ್ಲ; 2ನೇ ಹಂತದ ದಾಳಿಗೆ ಮುಂದಾಗಿದ್ದೇವೆ: ಇಸ್ರೇಲ್ ಸೇನಾಪಡೆ

ಯುದ್ಧ ಬಯಸಿದ್ದು, ಆರಂಭಿಸಿದ್ದು ನಾವಲ್ಲ, ಇದೀಗ ಹಮಾಸ್ ವಿರುದ್ಧ 2ನೇ ಹಂತದ ದಾಳಿಗೆ ಸಜ್ಜಾಗಿದ್ದು, ಗಾಜಾ ವಿರುದ್ಧ ಭೂಮಿ, ವಾಯು, ಸಮುದ್ರದಿಂದಲೂ ದಾಳಿ ಮಾಡುತ್ತೇವೆಂದು ಇಸ್ರೇಲ್ ಸೇನಾಪಡೆ ಭಾನುವಾರ ಹೇಳಿದೆ.

ಟೆಲ್ ಅವಿವ್: ಯುದ್ಧ ಬಯಸಿದ್ದು, ಆರಂಭಿಸಿದ್ದು ನಾವಲ್ಲ, ಇದೀಗ ಹಮಾಸ್ ವಿರುದ್ಧ 2ನೇ ಹಂತದ ದಾಳಿಗೆ ಸಜ್ಜಾಗಿದ್ದು, ಗಾಜಾ ವಿರುದ್ಧ ಭೂಮಿ, ವಾಯು, ಸಮುದ್ರದಿಂದಲೂ ದಾಳಿ ಮಾಡುತ್ತೇವೆಂದು ಇಸ್ರೇಲ್ ಸೇನಾಪಡೆ ಭಾನುವಾರ ಹೇಳಿದೆ.

ವಿಡಿಯೋ ಸಂದೇಶ ನೀಡಿರುವ ಇಸ್ರೇಲ್ ಸೇನಾಪಡೆಯ ವಕ್ತಾರ ಡೆನಿಯಲ್ ಹಗರಿ, ಇಸ್ರೇಲ್ ಸೇನಾಪಡೆ ತನ್ನ ಕಾರ್ಯಾಚರಣೆಯನ್ನು ವಿಸ್ತರಿಸುತ್ತಿದೆ. ಹಮಾಸ್ ವಿರುದ್ಧ 2ನೇ ಹಂತದ ದಾಳಿಗೆ ಮುಂದಾಗಿದ್ದೇವೆ. ಗಾಜಾದಲ್ಲಿ ಭೂಮಿ, ಸಮುದ್ರ ಹಾಗೂ ವಾಯು ಮೂಲಕ ದಾಳಿ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.

ಅಕ್ಟೋಬರ್ 7 ರಂದು ಹಮಾಸ್ ಮಾನವೀಯತೆಯ ಮೇಲೆ ಅಪರಾಧವೆಸಗಿತ್ತು. ಯುದ್ಧವನ್ನು ಇಸ್ರೇಲ್ ಆರಂಭಿಸಿರಲಿಲ್ಲ. ಇಸ್ರೇಲ್ ಯುದ್ಧವನ್ನು ಬಯಸಿಯೂ ಇರಲಿಲ್ಲ. ಇಸ್ರೇಲಿಗರ ಮೇಲೆ ಹಮಾಸ್ ದಾಳಿ ನಡೆಸಿತ್ತು. ಇದು ಅಪರಾಧ. ಇದೀಗ ಹಮಾಸ್ ಉಗ್ರರು ನಾಗರೀಕರನ್ನು ಗುರಾಣಿಗಳನ್ನಾಗಿ ಬಳಸಿಕೊಳ್ಳುತ್ತಿದ್ದಾರೆ.

ನಮ್ಮ ಹೋರಾಟ ಹಮಾಸ್ ವಿರುದ್ಧವೇ ಹೊರತು ಗಾಜಾದಲ್ಲಿರುವ ಜನತೆಯ ವಿರುದ್ಧವಲ್ಲ. ಆದರೆ, ಹಮಾಸ್ ಅಲ್ಲಿನ ನಾಗರೀಕರನ್ನು ಗುರಾಣಿಗಳನ್ನಾಗಿ ಬಳಸಿಕೊಳ್ಳುತ್ತಿದ್ದಾರೆ. ಶಾಲೆ, ಮಸೀದಿ ಹಾಗೂ ಆಸ್ಪತ್ರೆಗಳನ್ನು ಬಳಸಿಕೊಳ್ಳುತ್ತಿದ್ದಾರೆ. ಈ ಹಿಂದೆಯೇ ನಾವು ಹೇಳಿದ್ದೇವೆ. ಹಮಾಸ್ ಉಗ್ರರು ನಾಗರೀಕ ಕಟ್ಟಡಗಳ ಒಳಗೆ ಹಾಗೂ ಸುರಂಗಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ, ಸೇನಾಪಡೆ ಭಯೋತ್ಪಾದಕರು ಹಾಗೂ ನಾಗರೀಕರ ನಡುವಿನ ವ್ಯತ್ಯಾಸವನ್ನು ಗುರುತಿಸಬಲ್ಲದು. ಹೀಗಾಗಿಯೇ ಹಮಾಸ್ ನಿಂದ ದೂರ ಸರಿಯುವಂತೆ ಜನತೆಗೆ ವಾರಗಳಿಂದ ಎಚ್ಚರಿಕೆ ನೀಡಲಾಗುತ್ತಿದೆ. ಉತ್ತರ ಗಾಜಾ ಮತ್ತು ಗಾಜಾ ನಗರದಲ್ಲಿರುವ ನಾಗರಿಕರು ದಕ್ಷಿಣಕ್ಕೆ ತೆರಳುವಂತೆ ಎಚ್ಚರಿಕೆ ನೀಡುತ್ತಿದ್ದೇವೆ. ಆ ಪ್ರದೇಶದಲ್ಲಿ ನೀರು, ಆಹಾರ ಮತ್ತು ಔಷಧಗಳನ್ನು ನೀಡಲಾಗುತ್ತಿದೆ. ಅಲ್ಲಿ ಮಾನವೀಯ ನೆರವುಗಳನ್ನು ವಿಸ್ತರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT