ಉಗ್ರ ನಸೀಮ್ ಅಬು ಅಜಿನಾ 
ವಿದೇಶ

ಇಸ್ರೇಲ್ ಭರ್ಜರಿ ಬೇಟೆ: ಅ.7ರ ಉಗ್ರ ದಾಳಿಯ ರೂವಾರಿ ಹಮಾಸ್ ಕಮಾಂಡರ್ ಮಿಲಿಟರಿ ಕಾರ್ಯಾಚರಣೆಯಲ್ಲಿ ಹತ!

ಹಮಾಸ್ ಉಗ್ರ ಸಂಘಟನೆಯನ್ನು ಕಿತ್ತೊಗೆಯುವ ಶಪತ ಮಾಡಿರುವ ಇಸ್ರೇಲ್ ಸೇನೆ ಗಾಜಾ ಪಟ್ಟಿ ಮೇಲೆ ಮಿಲಿಟರಿ ಕಾರ್ಯಾಚರಣೆ ನಡೆಸುತ್ತಿದೆ. ಅದರಂತೆ ಗಾಜಾಪಟ್ಟಿಯೊಳಗೆ ನುಗ್ಗಿರುವ ಐಡಿಎಫ್ ಸಾಮಾಜಿಕ ಪೋಸ್ಟ್‌ನಲ್ಲಿ ಹಮಾಸ್ ಭಯೋತ್ಪಾದಕನ ಹತ್ಯೆ ಮಾಡಲಾಗಿದ್ದು ಆತನ ಹೆಸರು ಮತ್ತು ಫೋಟೋವನ್ನು ಹಂಚಿಕೊಂಡಿದೆ.

ಟೆಲ್ ಅವೀವ್: ಹಮಾಸ್ ಉಗ್ರ ಸಂಘಟನೆಯನ್ನು ಕಿತ್ತೊಗೆಯುವ ಶಪತ ಮಾಡಿರುವ ಇಸ್ರೇಲ್ ಸೇನೆ ಗಾಜಾ ಪಟ್ಟಿ ಮೇಲೆ ಮಿಲಿಟರಿ ಕಾರ್ಯಾಚರಣೆ ನಡೆಸುತ್ತಿದೆ. ಅದರಂತೆ ಗಾಜಾಪಟ್ಟಿಯೊಳಗೆ ನುಗ್ಗಿರುವ ಐಡಿಎಫ್ ಸಾಮಾಜಿಕ ಪೋಸ್ಟ್‌ನಲ್ಲಿ ಹಮಾಸ್ ಭಯೋತ್ಪಾದಕನ ಹತ್ಯೆ ಮಾಡಲಾಗಿದ್ದು ಆತನ ಹೆಸರು ಮತ್ತು ಫೋಟೋವನ್ನು ಹಂಚಿಕೊಂಡಿದೆ. 

ಗುಪ್ತಚರ ಆಧಾರದ ಮೇಲೆ, ಯುದ್ಧ ವಿಮಾನಗಳು ಉಗ್ರರ ಅಡಗುತಾಣದ ಮೇಲೆ ದಾಳಿ ಮಾಡುತ್ತಿದೆ. ಈ ದಾಳಿಯಲ್ಲಿ ಉತ್ತರ ವಿಭಾಗದ ಬೀಟ್ ಲಾಹಿಯಾ ಬೆಟಾಲಿಯನ್‌ನ ನಸೀಮ್ ಅಬು ಅಜಿನಾ ಹತ್ಯೆಯಾಗಿದ್ದಾನೆ ಎಂದು ಹೇಳಲಾಗುತ್ತದೆ.

ಕಮಾಂಡರ್ ನಸೀಮ್ ಹತ್ಯೆ
ಹತ್ಯೆಗೀಡಾದ ಭಯೋತ್ಪಾದಕ ಹಮಾಸ್‌ನ ಹಿರಿಯ ಕಮಾಂಡರ್ ಎಂದು ಇಸ್ರೇಲಿ ರಕ್ಷಣಾ ಪಡೆ ಹೇಳಿಕೊಂಡಿದೆ. ಕಿಬ್ಬುಟ್ಜ್ ಸೇರಿದಂತೆ ಮೋಶವ್ ನೆಟೀವ್ ಹಠಾರಾ ದಾಳಿಯಲ್ಲಿ ಪ್ರಮುಖ ಪಾತ್ರವಹಿಸಿದ್ದನು. IDF ವಕ್ತಾರ ಡೇನಿಯಲ್ ಹಗರಿ ಅವರು, ಅಮ್ಮನ್ ಮತ್ತು ಶಿನ್ ಬೇಟ್ ನ ಗುಪ್ತಚರ ಆಧಾರದ ಮೇಲೆ, ಕಳೆದ ರಾತ್ರಿ ಹಮಾಸ್ ನ ಉತ್ತರ ವಿಭಾಗದ ಕಮಾಂಡರ್ ನಸ್ಸಿಮ್ ಅಬು ಅಜಿನಾ ನನ್ನು ಹತ್ಯೆ ಮಾಡಲಾಗಿದೆ ಎಂದು ಬರೆದುಕೊಂಡಿದ್ದಾರೆ. ಅಕ್ಟೋಬರ್ 7ರಂದು ಕಿಬ್ಬುಟ್ಜ್, ಎರೆಜ್ ಮತ್ತು ಮೋಶವ್ ನೆಟೀವ್ ಹತಾರಾ ಮೇಲೆ ದಾಳಿ ನಡೆಸುವಲ್ಲಿ ನಸೀಮ್ ಸೇರಿದಂತೆ ಅನೇಕ ಭಯೋತ್ಪಾದಕರು ಭಾಗಿಯಾಗಿದ್ದರು.

ದಿ ಜೆರುಸಲೆಮ್ ಪೋಸ್ಟ್ ಪ್ರಕಾರ, ನಸೀಮ್ ವೈಮಾನಿಕ ದಾಳಿ ನಡೆಸುವಲ್ಲಿ ಪರಿಣತನಾಗಿದ್ದನು. ಹಮಾಸ್‌ನ ಮಾನವರಹಿತ ವೈಮಾನಿಕ ವಾಹನ ಮತ್ತು ಡ್ರೋನ್ ಅಭಿವೃದ್ಧಿಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದನು. ನಸೀಮ್‌ನ ಹತ್ಯೆ ಮೂಲಕ IDF ಹಮಾಸ್‌ಗೆ ದೊಡ್ಡ ಹೊಡೆತವನ್ನು ನೀಡಿದೆ.

ಇಸ್ರೇಲ್-ಹಮಾಸ್ ಯುದ್ಧದಲ್ಲಿ 8000 ಮಂದಿ ಸಾವು
ಅಕ್ಟೋಬರ್ 7ರಂದು, ಹಮಾಸ್ ಭಯೋತ್ಪಾದಕರು ದಕ್ಷಿಣ ಇಸ್ರೇಲ್ನಲ್ಲಿ ಗಾಳಿ, ನೀರು ಮತ್ತು ಭೂಮಿಯಿಂದ ನಿರಾಯುಧ ಇಸ್ರೇಲಿಗಳ ಮೇಲೆ ದಾಳಿ ಮಾಡಿದ್ದರು. ನಂತರ ಇಸ್ರೇಲ್ ಪ್ರತಿದಾಳಿಗೆ ಮುಂದಾಗಿದ್ದು ಅಂದಿನಿಂದ ಅಕ್ಟೋಬರ್ 31ರ ನಡುವೆ, ಇಸ್ರೇಲ್ ಮತ್ತು ಗಾಜಾದಲ್ಲಿ 8,000ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಅವರಲ್ಲಿ ಹೆಚ್ಚಿನವರು ಸಾಮಾನ್ಯರಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT