20ನೇ ಆಸಿಯಾನ್-ಭಾರತ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ 
ವಿದೇಶ

ಭಾರತ-ಆಸಿಯಾನ್ ಸಹಕಾರ ಬಲಪಡಿಸಲು 12 ಅಂಶಗಳ ಪ್ರಸ್ತಾವನೆ ಮಂಡಿಸಿದ ಪ್ರಧಾನಿ ಮೋದಿ

ಡಿಜಿಟಲ್ ಪರಿವರ್ತನೆ, ವ್ಯಾಪಾರ ಮತ್ತು ಆರ್ಥಿಕ ತೊಡಗಿಸಿಕೊಳ್ಳುವಿಕೆಯಂತಹ ಕ್ಷೇತ್ರಗಳಲ್ಲಿ ಭಾರತ-ಆಸಿಯಾನ್ ಸಹಕಾರವನ್ನು ಬಲಪಡಿಸುವ 12 ಅಂಶಗಳ ಪ್ರಸ್ತಾವನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಮಂಡಿಸಿದರು.

ಜಕಾರ್ತಾ: ಡಿಜಿಟಲ್ ಪರಿವರ್ತನೆ, ವ್ಯಾಪಾರ ಮತ್ತು ಆರ್ಥಿಕ ತೊಡಗಿಸಿಕೊಳ್ಳುವಿಕೆಯಂತಹ ಕ್ಷೇತ್ರಗಳಲ್ಲಿ ಭಾರತ-ಆಸಿಯಾನ್ ಸಹಕಾರವನ್ನು ಬಲಪಡಿಸುವ 12 ಅಂಶಗಳ ಪ್ರಸ್ತಾವನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಮಂಡಿಸಿದರು.

ಇಂಡೋನೇಷ್ಯಾ ರಾಜಧಾನಿ ಜಕಾರ್ತಾದಲ್ಲಿ ನಡೆದ 20ನೇ ಆಸಿಯಾನ್-ಭಾರತ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದರು. ಆಸಿಯಾನ್‌ನ ಪ್ರಧಾನ ಕಾರ್ಯದರ್ಶಿ(ಆಗ್ನೇಯ ಏಷ್ಯಾ ರಾಷ್ಟ್ರಗಳ ಒಕ್ಕೂಟ) ಡಾ ಕಾವೊ ಕಿಮ್ ಹರ್ನ್ ಕೂಡ ಶೃಂಗಸಭೆಯಲ್ಲಿ ಭಾಗವಹಿಸಿದ್ದರು.

ಶೃಂಗಸಭೆಯಲ್ಲಿ ಎರಡು ಜಂಟಿ ಹೇಳಿಕೆಗಳು - ಒಂದು ಕಡಲ ಸಹಕಾರ ಮತ್ತು ಇನ್ನೊಂದು ಆಹಾರ ಭದ್ರತೆಯ ಬಗ್ಗೆ ನಿರ್ಣಯ ಅಂಗೀಕರಿಸಲಾಯಿತು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ(MEA) ಪ್ರಕಟಣೆಯಲ್ಲಿ ತಿಳಿಸಿದೆ.

ಶೃಂಗಸಭೆಯಲ್ಲಿ, ಆಸಿಯಾನ್-ಭಾರತದ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಮತ್ತು ಅದರ ಭವಿಷ್ಯದ ಕೋರ್ಸ್ ಅನ್ನು ರೂಪಿಸುವ ಕುರಿತು ಆಸಿಯಾನ್ ಪಾಲುದಾರರೊಂದಿಗೆ ಪ್ರಧಾನಿ ಮೋದಿ ವ್ಯಾಪಕ ಚರ್ಚೆ ನಡೆಸಿದರು ಎಂದು ಪ್ರಕಟಣೆ ತಿಳಿಸಿದೆ.

ಪ್ರಧಾನಿ ಮೋದಿ ಅವರು ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಆಸಿಯಾನ್ ಪ್ರಾಮುಖ್ಯತೆಯನ್ನು ಪುನರುಚ್ಚರಿಸಿದರು ಮತ್ತು ಆಸಿಯಾನ್-ಭಾರತ ಮುಕ್ತ ವ್ಯಾಪಾರ ಒಪ್ಪಂದದ(ಎಐಟಿಜಿಎ) ಪರಿಶೀಲನೆಯನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸುವ ಅಗತ್ಯವನ್ನು ಒತ್ತಿ ಹೇಳಿದರು.

ಸಂಪರ್ಕ, ಡಿಜಿಟಲ್ ಪರಿವರ್ತನೆ, ವ್ಯಾಪಾರ ಮತ್ತು ಆರ್ಥಿಕ ತೊಡಗಿಸಿಕೊಳ್ಳುವಿಕೆ, ಭಯೋತ್ಪಾದನೆಯಂತಹ ಸಮಕಾಲೀನ ಸವಾಲುಗಳನ್ನು ಎದುರಿಸುವುದು, ಜನರಿಂದ ಜನರ ಸಂಪರ್ಕಗಳು ಮತ್ತು ಕಾರ್ಯತಂತ್ರವನ್ನು ಗಾಢವಾಗಿಸುವ ಭಾರತ-ಆಸಿಯಾನ್ ಸಹಕಾರ ಬಲಪಡಿಸುವ 12 ಅಂಶಗಳ ಪ್ರಸ್ತಾವನೆಯನ್ನು ಪ್ರಧಾನಿ ಮೋದಿ ಮಂಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT