ಆಂಟೋನಿಯೊ ಗುಟೆರಸ್ 
ವಿದೇಶ

'ಭಾರತ್' ಹೆಸರಿನ ವಿವಾದ: ಮರುನಾಮಕರಣಕ್ಕೆ ಮನವಿ ಬಂದರೆ ಪರಿಗಣಿಸುತ್ತೇವೆ- ವಿಶ್ವಸಂಸ್ಥೆ ವಕ್ತಾರ

ಇಂಡಿಯಾವನ್ನು ಭಾರತ್ ಎಂದು ಮರು ನಾಮಕರಣ ಮಾಡುವ ಕುರಿತು ದೇಶಾದ್ಯಂತ ತೀವ್ರ ಚರ್ಚೆ ನಡೆಯುತ್ತಿರುವಂತೆಯೇ, ಹೆಸರು ಬದಲಾವಣೆಗೆ ರಾಷ್ಟ್ರಗಳಿಂದ ಮನವಿ ಬಂದರೆ ಅದನ್ನು ಪರಿಗಣಿಸಲಾಗುತ್ತದೆ ಎಂದು ವಿಶ್ವಸಂಸ್ಥೆಯ ಉನ್ನತ ಅಧಿಕಾರಿಯೊಬ್ಬರು ಹೇಳಿದ್ದಾರೆ. 

ವಿಶ್ವಸಂಸ್ಥೆ: ಇಂಡಿಯಾವನ್ನು ಭಾರತ್ ಎಂದು ಮರು ನಾಮಕರಣ ಮಾಡುವ ಕುರಿತು ದೇಶಾದ್ಯಂತ ತೀವ್ರ ಚರ್ಚೆ ನಡೆಯುತ್ತಿರುವಂತೆಯೇ, ಹೆಸರು ಬದಲಾವಣೆಗೆ ರಾಷ್ಟ್ರಗಳಿಂದ ಮನವಿ ಬಂದರೆ ಅದನ್ನು ಪರಿಗಣಿಸಲಾಗುತ್ತದೆ ಎಂದು ವಿಶ್ವಸಂಸ್ಥೆಯ ಉನ್ನತ ಅಧಿಕಾರಿಯೊಬ್ಬರು ಹೇಳಿದ್ದಾರೆ. 

ಇಂಡಿಯಾವನ್ನು ಭಾರತ ಎಂದು ಮರುನಾಮಕರಣ ಕುರಿತು ಪ್ರತಿಕ್ರಿಯಿಸಿರುವ  ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್ ಅವರ ಉಪ ವಕ್ತಾರ ಫರ್ಹಾನ್ ಹಕ್, ಕಳೆದ ವರ್ಷ ಟರ್ಕಿ ತನ್ನ ಹೆಸರನ್ನು ಟರ್ಕಿಯೆ ಎಂದು ಬದಲಾಯಿಸುವಂತೆ ರಾಷ್ಟ್ರಗಳಿಂದ ಮನವಿ ಬಂದರೆ, ನಿಸ್ಸಂಶಯವಾಗಿ ಅಂತಹ ಮನವಿಗಳನ್ನು ಪರಿಗಣಿಸುತ್ತೇವೆ ಎಂದಿದ್ದಾರೆ. 

ಜಿ 20 ಔತಣಕೂಟದ ಆಮಂತ್ರಣ ಪತ್ರಿಕೆಯಲ್ಲಿ ಈವರೆಗೆ ಬರೆಯಲಾಗುತ್ತಿದ್ದ ‘ಪ್ರೆಸಿಡೆಂಟ್‌ ಆಫ್‌ ಇಂಡಿಯಾ’ ಬದಲು ‘ಪ್ರೆಸಿಡೆಂಟ್‌ ಆಫ್‌ ಭಾರತ್‌’ ಎಂದು ಬರೆದಿರುವುದು ತಿಳಿದುಬಂದ ನಂತರ ಭಾರತದಲ್ಲಿ ಇದು ತೀವ್ರ ಚರ್ಚೆಗೆ ಕಾರಣವಾಗಿದ್ದು, ಪ್ರತಿಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿವೆ. 

ಈ ವಿಚಾರ ಕುರಿತ ವಿವಾದವನ್ನು ತಪ್ಪಿಸುವಂತೆ ಪ್ರಧಾನಿ ಮೋದಿ ಬುಧವಾರ ತಮ್ಮ ಸಚಿವ ಸಹೋದ್ಯೋಗಿಗಳಿಗೆ ತಿಳಿಸಿದ್ದು, ಇದು ದೇಶದ ಪ್ರಾಚೀನ ಹೆಸರು ಎಂದಿದ್ದಾರೆ. ಅಲ್ಲದೇ,  ಜಿ 20 ಶೃಂಗಸಭೆ ವೇಳೆಯಲ್ಲಿ ಯಾವ ವಿಷಯ ಪ್ರಸ್ತಾಪಿಸಬೇಕು, ಯಾವುದನ್ನು ಪ್ರಸ್ತಾಪಿಸಬಾರದು ಎಂಬ ಸಲಹೆಯನ್ನು ಕೂಡಾ ಮೋದಿ ನೀಡಿದ್ದಾರೆ ಎನ್ನಲಾಗಿದೆ.

ಭಾರತದ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 9 ಮತ್ತು 10 ರಂದು ನವದೆಹಲಿಯಲ್ಲಿ ಜಿ 20 ಶೃಂಗಸಭೆ ನಡೆಯುತ್ತಿದ್ದು, ಯುಎಸ್ ಅಧ್ಯಕ್ಷ ಜೋ ಬೈಡನ್ ಸೇರಿದಂತೆ ವಿಶ್ವದಾದ್ಯಂತದ ಹಲವಾರು ರಾಷ್ಟ್ರಗಳ ಮುಖ್ಯಸ್ಥರು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

SCROLL FOR NEXT