ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ 
ವಿದೇಶ

ನಾಜಿ ಮಾಜಿ ಯೋಧನ ಗೌರವಿಸಿದ್ದಕ್ಕೆ ಟೀಕೆಗೆ ಗುರಿ: ಕ್ಷಮೆಯಾಚಿಸಿದ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ

ನಾಜಿ ಮಾಜಿ ಯೋಧನ ಗೌರವಿಸಿದ ಹಿನ್ನೆಲೆಯಲ್ಲಿ ತೀವ್ರ ವಿರೋಧ ಹಾಗೂ ಟೀಕೆಗೆ ಗುರಿಯಾಗಿದ್ದ ಕೆನಡಾ ಪ್ರಧಾನಮಂತ್ರಿ ಜಸ್ಟಿನ್‌ ಟ್ರುಡೊ ಅವರು ಸಂಸತ್ತಿನ ಪರವಾಗಿ ಕ್ಷಮೆಯಾಚಿಸಿದ್ದಾರೆ.

ಒಟ್ಟಾವಾ: ನಾಜಿ ಮಾಜಿ ಯೋಧನ ಗೌರವಿಸಿದ ಹಿನ್ನೆಲೆಯಲ್ಲಿ ತೀವ್ರ ವಿರೋಧ ಹಾಗೂ ಟೀಕೆಗೆ ಗುರಿಯಾಗಿದ್ದ ಕೆನಡಾ ಪ್ರಧಾನಮಂತ್ರಿ ಜಸ್ಟಿನ್‌ ಟ್ರುಡೊ ಅವರು ಸಂಸತ್ತಿನ ಪರವಾಗಿ ಕ್ಷಮೆಯಾಚಿಸಿದ್ದಾರೆ.

ಸೆಪ್ಟೆಂಬರ್ 22ರಂದು ಕೆನಡಾದ ಸಂಸತ್ತನ್ನುದ್ದೇಶಿಸಿ ಉಕ್ರೇನ್‌ ಅಧ್ಯಕ್ಷ ವ್ಲಾಡಿಮಿರ್ ಝೆಲೆನ್ಸ್ಕಿ ಭಾಷಣ ಮಾಡಿದ್ದರು. ಈ ವೇಳೆ 98 ವರ್ಷದ ನಾಜಿ ಮಾಜಿ ಯೋಧ ಯಾರೋಸ್ಲಾವ್ ಹುಂಕಾ ಅವರನ್ನು ಕೆನಡಾದ ಸ್ಪೀಕರ್‌ ಆ್ಯಂಥೋನಿ ರೋಟಾ ಗೌರವಿಸಿದ್ದರು. ಹುಂಕಾ ಅವರು ಎರಡನೇ ಮಹಾ ಯುದ್ಧದಲ್ಲಿ ಭಾಗವಹಿಸಿದ್ದರು.

ನಾಜಿ ಯೋಧನಿಗೆ ಗೌರವ ನೀಡಿರುವುದನ್ನು ಖಂಡಿಸಿದ್ದ ವಿರೋಧ ಪಕ್ಷಗಳು ಟ್ರುಡೊ ಕ್ಷಮೆ ಕೇಳಬೇಕೆಂದು ಆಗ್ರಹಿಸಿದ್ದವು. ಈ ಸಂಬಂಧ ಸಾಕಷ್ಟು ಟೀಕೆಗಳೂ ವ್ಯಕ್ತವಾಗಿದ್ದವು.

ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಟ್ರುಡೋ ಅವರು, ‘ನಮ್ಮ ನಡೆಯಿಂದ ಸಂಸತ್ತು ಮತ್ತು ಕೆನಡಾಕ್ಕೆ ತೀವ್ರ ಮುಜುಗರ ಉಂಟಾಗಿದೆ. ಶುಕ್ರವಾರ ಈ ಸದನದಲ್ಲಿದ್ದ ನಾವೆಲ್ಲರೂ ಪೂರ್ವಪರ ಯೋಚಿಸಿದೆ ನಿಂತು ಚಪ್ಪಾಳೆ ತಟ್ಟಿದ್ದೇವೆ. ಅದಕ್ಕಾಗಿ ತೀವ್ರವಾಗಿ ವಿಷಾದಿಸುತ್ತೇವೆ’ ಎಂದು ಹೇಳಿದ್ದಾರೆ.

ಮಾಜಿ ಯೋಧ ಯಾರೋಸ್ಲಾವ್ ಹುಂಕಾ ಅವರನ್ನು ಗೌರವಿಸಿರುವುದು ಹತ್ಯಾಕಾಂಡದಲ್ಲಿ ಮಡಿದ ಜನರಿಗೆ ಮಾಡಿದ ದೊಡ್ಡ ಅವಮಾನವಾಗಿದೆ. ಇದರಿಂದ ಯುಹೂದಿ ಸೇರಿದಂತೆ ಎರಡನೇ ಮಹಾಯುದ್ಧದಲ್ಲಿ ನಾಜಿ ಆಡಳಿತದಿಂದ ತತ್ತರಿಸಿದ ಅನೇಕ ಗುಂಪುಗಳಿಗೆ ನೋವಾಗಿದೆ. ಆ ವ್ಯಕ್ತಿಯನ್ನು(ನಾಜಿ ಯೋಧ) ಆಹ್ವಾನಿಸಿ ಗೌರವಿಸಿರುವ ಸಂಬಂಧ ಸ್ಪೀಕರ್‌ ಅವರು ತಪ್ಪೊಪ್ಪಿಕೊಂಡು ತಮ್ಮ ಸ್ಥಾನದಿಂದ ಕೆಳಗಿಳಿದಿದ್ದಾರೆ ಎಂದು ತಿಳಿಸಿದರು.

ಇದೇ ವೇಳೆ ಉಕ್ರೇನ್ ಯಾವುದಕ್ಕಾಗಿ ಹೋರಾಡುತ್ತಿದೆ ಎಂಬುದರ ಕುರಿತು ಸುಳ್ಳು ಪ್ರಚಾರ ನೀಡಲು ರಷ್ಯಾ ಮತ್ತು ಅದರ ಬೆಂಬಲಿಗ ರಾಷ್ಟ್ರಗಳು ಈ ಸಣ್ಣ ದೋಷವನ್ನು ರಾಜಕೀಯಗೊಳಿಸುತ್ತಿವೆ’ ಎಂದು ಕಿಡಿಕಾರಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

SCROLL FOR NEXT