ಪಾಕಿಸ್ತಾನ: ಪೊಲೀಸ್ ಠಾಣೆಗೆ ತೆರಳಿ ಆರಕ್ಷಕರನ್ನು ಥಳಿಸಿದ ಸೈನಿಕರು online desk
ವಿದೇಶ

ಪಾಕಿಸ್ತಾನ: ಪೊಲೀಸ್ ಠಾಣೆಗೆ ತೆರಳಿ ಆರಕ್ಷಕರನ್ನು ಥಳಿಸಿದ ಸೈನಿಕರು: ವೀಡಿಯೋ ವೈರಲ್

ಪಾಕಿಸ್ತಾನದ ಸೇನೆಯ ಸಿಬ್ಬಂದಿಗಳು ಪೊಲೀಸ್ ಠಾಣೆಗೆ ತೆರಳಿ ಆರಕ್ಷಕರನ್ನು ಥಳಿಸಿರುವ ಘಟನೆ ಅಲ್ಲಿನ ಪಂಜಾಬ್ ಪ್ರಾಂತ್ಯದಲ್ಲಿ ನಡೆದಿದೆ.

ಪಾಕಿಸ್ತಾನದ ಸೇನೆಯ ಸಿಬ್ಬಂದಿಗಳು ಪೊಲೀಸ್ ಠಾಣೆಗೆ ತೆರಳಿ ಆರಕ್ಷಕರನ್ನು ಥಳಿಸಿರುವ ಘಟನೆ ಅಲ್ಲಿನ ಪಂಜಾಬ್ ಪ್ರಾಂತ್ಯದಲ್ಲಿ ನಡೆದಿದೆ. ಆರಕ್ಷಕರನ್ನು ಥಳಿಸಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗತೊಡಗಿದೆ. ಆದರೆ ಪೊಲೀಸ್ ಅಧಿಕಾರಿಗಳು ಈ ಘಟನೆ ನಡೆದಿರುವುದನ್ನು ಅಲ್ಲಗಳೆದಿದ್ದಾರೆ.

ಸೇನಾ ಅಧಿಕಾರಿಯೊಬ್ಬರಿಗೆ ಸಂಬಂಧಿಸಿದಂತೆ ರೇಡ್ ನಡೆದ ಹಿನ್ನೆಲೆಯಲ್ಲಿ ಸೇನೆಯ ಸಿಬ್ಬಂದಿಗಳು ಪೊಲೀಸ್ ಠಾಣೆಗೆ ತೆರಳಿ ಈ ದಾಳಿ ನಡೆಸಿದ್ದಾರೆ.

ಮತ್ತೊಂದು ಕ್ಲಿಪ್ ನಲ್ಲಿ ಯುವ ಅಧಿಕಾರಿಗಳು ಸೇನಾ ಸಿಬ್ಬಂದಿಗಳಿಂದ ತಪ್ಪಿಸಿಕೊಳ್ಳಲು ಓಡುತ್ತಿರುವುದು ದಾಖಲಾಗಿದೆ. ಮೂಲಗಳ ಪ್ರಕಾರ, "ಮೂವರು ನಾಗರಿಕರನ್ನು ಅಕ್ರಮವಾಗಿ ಬಂಧಿಸಲಾಗಿದೆ ಮತ್ತು ಪಂಜಾಬ್ ಪೊಲೀಸ್ ಸಿಬ್ಬಂದಿ ಅವರ ಬಿಡುಗಡೆಗೆ ಹಣಕ್ಕಾಗಿ ಬೇಡಿಕೆಯಿಡುತ್ತಿದ್ದರು, ಅಷ್ಟೇ ಅಲ್ಲದೇ ಮೂವರ ಸಹಚರನನ್ನು ಬಂಧಿಸಲು ಪೊಲೀಸರು ಸೇನಾ ಅಧಿಕಾರಿಯ ನಿವಾಸದ ಮೇಲೆ ದಾಳಿ ನಡೆಸಿದರು.

ಈ ಘಟನೆಯಲ್ಲಿ ತೊಡಗಿದ್ದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ಕೇಳಿಬಂದಿದೆ. ಸಮವಸ್ತ್ರದಲ್ಲಿರುವ ಪೊಲೀಸರನ್ನು ಮಂಡಿಯೂರುವಂತೆ ಮಾಡಿರುವುದು ವೀಡಿಯೋ ಕ್ಲಿಪ್ ನಲ್ಲಿ ಕಂಡುಬಂಡಿದೆ. ಅಷ್ಟೇ ಅಲ್ಲದೇ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಹಿಂಸೆ ನೀಡುತ್ತಿದ್ದು, ಪೊಲೀಸ್ ಅಧಿಕಾರಿಗಳು ತಮ್ಮನ್ನು ಬಿಟ್ಟುಬಿಡುವಂತೆ ಮನವಿ ಮಾಡಿಕೊಳ್ಳುತ್ತಿರುವುದು ದಾಖಲಾಗಿದೆ.

ಇದು ಕೆಲವು ಸೇನಾ ಸಿಬ್ಬಂದಿಯನ್ನು ಕೆರಳಿಸಿತು ಮತ್ತು ನಂತರ ಅವರು ಆ ಮೂವರನ್ನು ಬಿಡುಗಡೆ ಮಾಡಲು ಬಹವಾಲ್‌ನಗರದ ಮದ್ರಸಾ ಪೊಲೀಸ್ ಠಾಣೆಗೆ ದಾಳಿ ನಡೆಸಿದರು. ಆ ದಾಳಿಯ ವೇಳೆ ಪೊಲೀಸರಿಗೆ ಚಿತ್ರಹಿಂಸೆ ನೀಡಲಾಯಿತು' ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ಪಿಟಿಐಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT