ಬಲೂಚಿಸ್ತಾನದಲ್ಲಿ ಗುಂಡಿಟ್ಟ ಹತ್ಯೆ ಮಾಡಿದ ಉಗ್ರರು 
ವಿದೇಶ

Terror Attack In Pakistan: ಬಲೂಚಿಸ್ತಾನದಲ್ಲಿ ಬಸ್ ನಲ್ಲಿ ತೆರಳುತ್ತಿದ್ದ 11 ಮಂದಿ ಅಪಹರಣ, ಗುಂಡಿಟ್ಟು ಹತ್ಯೆ!

ಪಾಕಿಸ್ತಾನದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದು, ಬಸ್ ನಲ್ಲಿ ತೆರಳುತ್ತಿದ್ದವರನ್ನು ಅಪಹರಣ ಮಾಡಿ ಗುಂಡಿಟ್ಟು ಹತ್ಯೆ ಮಾಡಿದ್ದಾರೆ.

ಲಾಹೋರ್: ಪಾಕಿಸ್ತಾನದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದು, ಬಸ್ ನಲ್ಲಿ ತೆರಳುತ್ತಿದ್ದವರನ್ನು ಅಪಹರಣ ಮಾಡಿ ಗುಂಡಿಟ್ಟು ಹತ್ಯೆ ಮಾಡಿದ್ದಾರೆ.

ಹೌದು.. ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಉಗ್ರರು 9 ಮಂದಿಯನ್ನು ಅಪಹರಿಸಿ, ಅವರನ್ನು ಭೀಕರವಾಗಿ (Terror Attack) ಗುಂಡಿಟ್ಟು ಹತ್ಯೆ ಮಾಡಿದ್ದಾರೆ. ಮೂಲಗಳ ಪ್ರಕಾರ ಬಲೂಚಿಸ್ತಾನದ ಕ್ವೆಟ್ಟಾದಿಂದ ತಫ್ತಾನ್‌ಗೆ ರಾಷ್ಟ್ರೀಯ ಹೆದ್ದಾರಿ ಮೂಲಕ ಬಸ್ ವೊಂದು ತೆರಳುತ್ತಿತ್ತು.

ಇದೇ ವೇಳೆ ವಾಹನವನ್ನು ಅಡ್ಡಹಾಕಿದ ಅಪರಿಚಿತ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ವಾಹನದಿಂದ ಪ್ರಯಾಣಿಕರನ್ನು ಹೊರಗೆಳೆದ ಉಗ್ರರು, ಅವರ ಮೇಲೆ ನಿರಂತರವಾಗಿ ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಪಂಜಾಬ್‌ ಪ್ರಾಂತ್ಯದ 9 ಮಂದಿ ಸೇರಿ ಒಟ್ಟು 11 ಜನ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ವಾಹನದಲ್ಲಿ ತೆರಳುತ್ತಿದ್ದ ಪ್ರಯಾಣಿಕರನ್ನು ಉಗ್ರರು ಅಪಹರಿಸಿದ್ದಾರೆ. ಇದಾದ ಬಳಿಕ ಎಲ್ಲೆಂದರಲ್ಲಿ ಪ್ರಯಾಣಿಕರನ್ನು ಕೊಲೆ ಮಾಡಿದ್ದಾರೆ. ಎರಡು ಪ್ರತ್ಯೇಕ ಘಟನೆಗಳಲ್ಲಿ ಒಟ್ಟು 11 ಜನರನ್ನು ಹತ್ಯೆ ಮಾಡಲಾಗಿದೆ. 9 ಜನರ ಶವಗಳು ಬೆಟ್ಟ ಗುಡ್ಡಗಳು, ಸೇತುವೆಗಳ ಬಳಿ ಸಿಕ್ಕಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ವಾಜಿರಾಬಾದ್‌, ಮಂಡಿ, ಬಹಾವುದ್ದೀನ್‌ ಹಾಗೂ ಗುಜ್ರನ್‌ವಾಲಾದವರು ಎಂದು ಗುರುತಿಸಲಾಗಿದೆ. ಇದೇ ಪ್ರಾಂತ್ಯದಲ್ಲಿ ಮತ್ತೊಂದು ಕಡೆ ದಾಳಿ ನಡೆದಿದ್ದು, ದಾಳಿಯಲ್ಲಿ ಇಬ್ಬರನ್ನು ಉಗ್ರರು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.

ಪ್ರಧಾನಿ ಶೆಹಬಾಜ್‌ ಷರೀಫ್‌ ಖಂಡನೆ

ಇನ್ನು ದಾಳಿ ಕುರಿತು ಮಾತನಾಡಿರುವ ಪಾಕಿಸ್ತಾನ ಪ್ರಧಾನಿ ಶೆಹಬಾಜ್‌ ಷರೀಫ್‌, 'ಉಗ್ರರ ದಾಳಿಯನ್ನು ನಾವು ಖಂಡಿಸುತ್ತೇವೆ. ಯಾವುದೇ ರೀತಿಯ ಉಗ್ರವಾದವನ್ನು ನಾವು ಸಹಿಸುವುದಿಲ್ಲ. ದಾಳಿಗೆ ಕಾರಣರಾದವರಿಗೆ ತಕ್ಕ ಶಾಸ್ತಿ ಮಾಡುತ್ತೇವೆ' ಎಂದಿದ್ದಾರೆ.

ಉಗ್ರರ ದಾಳಿಯ ಬಳಿಕ ಯಾವುದೇ ಸಂಘಟನೆಯು ಹೊಣೆಯನ್ನು ಹೊತ್ತುಕೊಂಡಿಲ್ಲ. ಕಳೆದ ತಿಂಗಳು ಗ್ವಾದರ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ 17 ಮಂದಿಯನ್ನು ಹತ್ಯೆ ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!