ಇರಾನ್ ವಶದಲ್ಲಿರುವ ಇಸ್ರೇಲ್ ಹಡಗು 
ವಿದೇಶ

ಇರಾನ್ ವಶದಲ್ಲಿ ಇಸ್ರೇಲ್ ಹಡಗು: 17 ನಾವಿಕರ ಭೇಟಿಗೆ ಭಾರತೀಯ ಅಧಿಕಾರಿಗಳಿಗೆ ಅನುಮತಿ!

ಇರಾನ್‌ನ ಕಮಾಂಡೋಗಳು 17 ಭಾರತೀಯ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಇಸ್ರೇಲ್ ಮೂಲದ ಸರಕು ಸಾಗಣೆ ಹಡಗನ್ನು ಶನಿವಾರ ವಶಪಡಿಸಿಕೊಂಡಿದೆ.

ನವದೆಹಲಿ: ಇರಾನ್‌ನ ಕಮಾಂಡೋಗಳು 17 ಭಾರತೀಯ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಇಸ್ರೇಲ್ ಮೂಲದ ಸರಕು ಸಾಗಣೆ ಹಡಗನ್ನು ಶನಿವಾರ ವಶಪಡಿಸಿಕೊಂಡಿದೆ. ಹೀಗಾಗಿ ಈ 17 ಸಿಬ್ಬಂದಿಯನ್ನು ಭೇಟಿ ಮಾಡಲು ಭಾರತೀಯ ಅಧಿಕಾರಿಗಳಿಗೆ ಇರಾನ್ ಅನುಮತಿ ನೀಡಿದೆ.

ಹಾರ್ಮುಜ್ ಜಲಸಂಧಿ ಬಳಿ ಇರಾನ್ ಮಿಲಿಟರಿ ವಶಪಡಿಸಿಕೊಂಡ ಸರಕು ಹಡಗಿನ 17 ಭಾರತೀಯ ಸಿಬ್ಬಂದಿಯನ್ನು ಭೇಟಿ ಮಾಡಲು ಟೆಹ್ರಾನ್ ಭಾರತೀಯ ಅಧಿಕಾರಿಗಳಿಗೆ ಅವಕಾಶ ನೀಡಲಿದೆ ಎಂದು ಇರಾನ್ ವಿದೇಶಾಂಗ ಸಚಿವ ಹೊಸೈನ್ ಅಮೀರ್-ಅಬ್ದೊಲ್ಲಾಹಿಯಾನ್ ಹೇಳಿದ್ದಾರೆ.

ಅಮೀರ್-ಅಬ್ದುಲ್ಲಾಹಿಯಾನ್ ಅವರು ಭಾನುವಾರ ದೂರವಾಣಿ ಮಾತುಕತೆ ವೇಳೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರಿಗೆ ಈ ಮಾಹಿತಿ ನೀಡಿದ್ದಾರೆ ಎಂದು ಇರಾನ್‌ ಹೇಳಿಕೆಯಲ್ಲಿ ತಿಳಿಸಿದೆ. ಮಾತುಕತೆ ವೇಳೆ ಜೈಶಂಕರ್ ಅವರು ಹಡಗು ಎಂಎಸ್‌ಸಿ ಏರೀಸ್‌ನಲ್ಲಿರುವ ಭಾರತೀಯರನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ ಎಂದು ವರದಿಯಾಗಿದೆ. ನಾವು ವಶಪಡಿಸಿಕೊಂಡ ಹಡಗಿನ ವಿವರಗಳನ್ನು ನೀಡಲಾಗುತ್ತದೆ. ಶೀಘ್ರದಲ್ಲೇ ಭಾರತ ಸರ್ಕಾರದ ಪ್ರತಿನಿಧಿಗಳು ಹೇಳಿದ ಹಡಗಿನ ಸಿಬ್ಬಂದಿಯನ್ನು ಭೇಟಿ ಮಾಡಲು ಅವಕಾಶ ನೀಡಲಾಗುತ್ತದೆ ಎಂದು ಅಮೀರ್-ಅಬ್ದುಲ್ಲಾಹಿಯಾನ್ ಅವರು ತಿಳಿಸಿರುವುದಾಗಿ ಇರಾನ್ ಮಾಧ್ಯಮ ವರದಿ ಮಾಡಿದೆ.

ಜೈಶಂಕರ್ ಅವರು 17 ಭಾರತೀಯ ಸಿಬ್ಬಂದಿಗಳ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ ಮತ್ತು ಈ ನಿಟ್ಟಿನಲ್ಲಿ ಇರಾನ್‌ನಿಂದ ಸಹಾಯವನ್ನು ಕೋರಿದ್ದಾರೆ ಎಂದು ವರದಿಯಾಗಿದೆ. ಇರಾನ್‌ನ ಅರೆಸೈನಿಕ ಕ್ರಾಂತಿಕಾರಿ ಗಾರ್ಡ್‌ನ ಸದಸ್ಯರು ಹೆಲಿಕಾಪ್ಟರ್‌ನಿಂದ ಇಳಿದು ಹಾರ್ಮುಜ್ ಜಲಸಂಧಿ ಬಳಿ ಎಂಎಸ್‌ಸಿ ಏರಿಸ್ ಹಗಡನ್ನು ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

MSC (ಮೆಡಿಟರೇನಿಯನ್ ಶಿಪ್ಪಿಂಗ್ ಕಂಪನಿ) 25 ಸಿಬ್ಬಂದಿಗಳ ಯೋಗಕ್ಷೇಮ ಮತ್ತು ಹಡಗಿನ ವಾಪಸಾತಿಗಾಗಿ ಸಂಬಂಧಿತ ಅಧಿಕಾರಿಗಳೊಂದಿಗೆ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದೆ.

ಇರಾನಿನ ಕ್ರಮದ ಕೆಲವು ಗಂಟೆಗಳ ನಂತರ, ಶ್ವೇತಭವನದ ರಾಷ್ಟ್ರೀಯ ಭದ್ರತಾ ಮಂಡಳಿಯ ವಕ್ತಾರ ಅಡ್ರಿಯೆನ್ನೆ ವ್ಯಾಟ್ಸನ್ ಹಡಗಿನ ಸಿಬ್ಬಂದಿ ಭಾರತೀಯ, ಫಿಲಿಪಿನೋ, ಪಾಕಿಸ್ತಾನಿ, ರಷ್ಯನ್ ಮತ್ತು ಎಸ್ಟೋನಿಯನ್ ಪ್ರಜೆಗಳನ್ನು ಒಳಗೊಂಡಿದೆ ಎಂದು ತಿಳಿಸಿದ್ದಾರೆ. 17 ಭಾರತೀಯರನ್ನು ಬಿಡುಗಡೆ ಮಾಡಲು ಇರಾನ್‌ನೊಂದಿಗೆ ಸಂಪರ್ಕದಲ್ಲಿದೆ ಎಂದು ಭಾರತದ ಅಧಿಕೃತ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT