ಇರಾನ್ ವಶದಲ್ಲಿರುವ ಇಸ್ರೇಲ್ ಹಡಗು 
ವಿದೇಶ

ಇರಾನ್ ವಶದಲ್ಲಿ ಇಸ್ರೇಲ್ ಹಡಗು: 17 ನಾವಿಕರ ಭೇಟಿಗೆ ಭಾರತೀಯ ಅಧಿಕಾರಿಗಳಿಗೆ ಅನುಮತಿ!

ಇರಾನ್‌ನ ಕಮಾಂಡೋಗಳು 17 ಭಾರತೀಯ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಇಸ್ರೇಲ್ ಮೂಲದ ಸರಕು ಸಾಗಣೆ ಹಡಗನ್ನು ಶನಿವಾರ ವಶಪಡಿಸಿಕೊಂಡಿದೆ.

ನವದೆಹಲಿ: ಇರಾನ್‌ನ ಕಮಾಂಡೋಗಳು 17 ಭಾರತೀಯ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಇಸ್ರೇಲ್ ಮೂಲದ ಸರಕು ಸಾಗಣೆ ಹಡಗನ್ನು ಶನಿವಾರ ವಶಪಡಿಸಿಕೊಂಡಿದೆ. ಹೀಗಾಗಿ ಈ 17 ಸಿಬ್ಬಂದಿಯನ್ನು ಭೇಟಿ ಮಾಡಲು ಭಾರತೀಯ ಅಧಿಕಾರಿಗಳಿಗೆ ಇರಾನ್ ಅನುಮತಿ ನೀಡಿದೆ.

ಹಾರ್ಮುಜ್ ಜಲಸಂಧಿ ಬಳಿ ಇರಾನ್ ಮಿಲಿಟರಿ ವಶಪಡಿಸಿಕೊಂಡ ಸರಕು ಹಡಗಿನ 17 ಭಾರತೀಯ ಸಿಬ್ಬಂದಿಯನ್ನು ಭೇಟಿ ಮಾಡಲು ಟೆಹ್ರಾನ್ ಭಾರತೀಯ ಅಧಿಕಾರಿಗಳಿಗೆ ಅವಕಾಶ ನೀಡಲಿದೆ ಎಂದು ಇರಾನ್ ವಿದೇಶಾಂಗ ಸಚಿವ ಹೊಸೈನ್ ಅಮೀರ್-ಅಬ್ದೊಲ್ಲಾಹಿಯಾನ್ ಹೇಳಿದ್ದಾರೆ.

ಅಮೀರ್-ಅಬ್ದುಲ್ಲಾಹಿಯಾನ್ ಅವರು ಭಾನುವಾರ ದೂರವಾಣಿ ಮಾತುಕತೆ ವೇಳೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರಿಗೆ ಈ ಮಾಹಿತಿ ನೀಡಿದ್ದಾರೆ ಎಂದು ಇರಾನ್‌ ಹೇಳಿಕೆಯಲ್ಲಿ ತಿಳಿಸಿದೆ. ಮಾತುಕತೆ ವೇಳೆ ಜೈಶಂಕರ್ ಅವರು ಹಡಗು ಎಂಎಸ್‌ಸಿ ಏರೀಸ್‌ನಲ್ಲಿರುವ ಭಾರತೀಯರನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ ಎಂದು ವರದಿಯಾಗಿದೆ. ನಾವು ವಶಪಡಿಸಿಕೊಂಡ ಹಡಗಿನ ವಿವರಗಳನ್ನು ನೀಡಲಾಗುತ್ತದೆ. ಶೀಘ್ರದಲ್ಲೇ ಭಾರತ ಸರ್ಕಾರದ ಪ್ರತಿನಿಧಿಗಳು ಹೇಳಿದ ಹಡಗಿನ ಸಿಬ್ಬಂದಿಯನ್ನು ಭೇಟಿ ಮಾಡಲು ಅವಕಾಶ ನೀಡಲಾಗುತ್ತದೆ ಎಂದು ಅಮೀರ್-ಅಬ್ದುಲ್ಲಾಹಿಯಾನ್ ಅವರು ತಿಳಿಸಿರುವುದಾಗಿ ಇರಾನ್ ಮಾಧ್ಯಮ ವರದಿ ಮಾಡಿದೆ.

ಜೈಶಂಕರ್ ಅವರು 17 ಭಾರತೀಯ ಸಿಬ್ಬಂದಿಗಳ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ ಮತ್ತು ಈ ನಿಟ್ಟಿನಲ್ಲಿ ಇರಾನ್‌ನಿಂದ ಸಹಾಯವನ್ನು ಕೋರಿದ್ದಾರೆ ಎಂದು ವರದಿಯಾಗಿದೆ. ಇರಾನ್‌ನ ಅರೆಸೈನಿಕ ಕ್ರಾಂತಿಕಾರಿ ಗಾರ್ಡ್‌ನ ಸದಸ್ಯರು ಹೆಲಿಕಾಪ್ಟರ್‌ನಿಂದ ಇಳಿದು ಹಾರ್ಮುಜ್ ಜಲಸಂಧಿ ಬಳಿ ಎಂಎಸ್‌ಸಿ ಏರಿಸ್ ಹಗಡನ್ನು ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

MSC (ಮೆಡಿಟರೇನಿಯನ್ ಶಿಪ್ಪಿಂಗ್ ಕಂಪನಿ) 25 ಸಿಬ್ಬಂದಿಗಳ ಯೋಗಕ್ಷೇಮ ಮತ್ತು ಹಡಗಿನ ವಾಪಸಾತಿಗಾಗಿ ಸಂಬಂಧಿತ ಅಧಿಕಾರಿಗಳೊಂದಿಗೆ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದೆ.

ಇರಾನಿನ ಕ್ರಮದ ಕೆಲವು ಗಂಟೆಗಳ ನಂತರ, ಶ್ವೇತಭವನದ ರಾಷ್ಟ್ರೀಯ ಭದ್ರತಾ ಮಂಡಳಿಯ ವಕ್ತಾರ ಅಡ್ರಿಯೆನ್ನೆ ವ್ಯಾಟ್ಸನ್ ಹಡಗಿನ ಸಿಬ್ಬಂದಿ ಭಾರತೀಯ, ಫಿಲಿಪಿನೋ, ಪಾಕಿಸ್ತಾನಿ, ರಷ್ಯನ್ ಮತ್ತು ಎಸ್ಟೋನಿಯನ್ ಪ್ರಜೆಗಳನ್ನು ಒಳಗೊಂಡಿದೆ ಎಂದು ತಿಳಿಸಿದ್ದಾರೆ. 17 ಭಾರತೀಯರನ್ನು ಬಿಡುಗಡೆ ಮಾಡಲು ಇರಾನ್‌ನೊಂದಿಗೆ ಸಂಪರ್ಕದಲ್ಲಿದೆ ಎಂದು ಭಾರತದ ಅಧಿಕೃತ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT