ದುಬೈನಲ್ಲಿ ಪ್ರವಾಹ 
ವಿದೇಶ

ದುಬೈನಲ್ಲಿ ಪ್ರವಾಹ: ಪ್ರಯಾಣ ಮುಂದೂಡುವಂತೆ ಭಾರತೀಯರಿಗೆ ರಾಯಭಾರ ಕಚೇರಿ ಸಲಹೆ

ದುಬೈ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ವಾರದ ದಾಖಲೆಯ ಮಳೆಯಿಂದ ಚೇತರಿಸಿಕೊಳ್ಳಲು ಯುನೈಟೆಡ್ ಅರಬ್ ಎಮಿರೇಟ್ಸ್ ಪ್ರಯತ್ನಿಸುತ್ತಿದೆ.

ಅಬುಧಾಬಿ: ದುಬೈನಲ್ಲಿ ಈ ವಾರ ಭಾರೀ ಮಳೆಯಾಗಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಪರಿಸ್ಥಿತಿ ಸಹಜ ಸ್ಥಿತಿಗೆ ಬರುವವರೆಗೆ ಅನಿವಾರ್ಯವಲ್ಲದ ಪ್ರಯಾಣವನ್ನು ಮುಂದೂಡುವಂತೆ ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುವ ಅಥವಾ ಅದರ ಮೂಲಕ ಹಾದು ಹೋಗುವ ವಿಮಾನಗಳಲ್ಲಿ ಪ್ರಯಾಣಿಸುವ ಭಾರತೀಯರಿಗೆ ಯುಎಇಯಲ್ಲಿರುವ ಭಾರತೀಯ ರಾಯಭಾರ ಕಚೇರಿ ಶುಕ್ರವಾರ ಸಲಹೆ ನೀಡಿದೆ.

ದುಬೈ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ವಾರದ ದಾಖಲೆಯ ಮಳೆಯಿಂದ ಚೇತರಿಸಿಕೊಳ್ಳಲು ಯುನೈಟೆಡ್ ಅರಬ್ ಎಮಿರೇಟ್ಸ್ ಪ್ರಯತ್ನಿಸುತ್ತಿದೆ.

ಯುಎಇ ಅಧಿಕಾರಿಗಳು ವಿಮಾನ ನಿಲ್ದಾಣದ ಕಾರ್ಯಾಚರಣೆಯನ್ನು ಸಾಮಾನ್ಯ ಸ್ಥಿತಿಗೆ ತರಲು ಹಗಲಿರುಳು ಶ್ರಮಿಸುತ್ತಿದ್ದಾರೆ. ನಿಮಾನಗಳ ನಿರ್ಗಮನ ದಿನಾಂಕ ಮತ್ತು ಸಮಯದ ಕುರಿತು ಆಯಾ ವಿಮಾನಯಾನ ಸಂಸ್ಥೆಗಳಿಂದ ಅಂತಿಮ ದೃಢೀಕರಣದ ನಂತರವೇ ಪ್ರಯಾಣಿಕರು ವಿಮಾನ ನಿಲ್ದಾಣಕ್ಕೆ ಆಗಮಿಸಬೇಕು ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ಸಲಹೆ ನೀಡಿದ್ದಾರೆ.

ಈ ವಾರದ ಆರಂಭದಲ್ಲಿ ಸುರಿದ ಭಾರೀ ಮಳೆಯಿಂದಾಗಿ ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಒಳಬರುವ ವಿಮಾನಗಳ ಸಂಖ್ಯೆಯನ್ನು ತಾತ್ಕಾಲಿಕವಾಗಿ ಸೀಮಿತಗೊಳಿಸಿದೆ ಎಂದು ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.

"ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುವ ಅಥವಾ ಆ ಮಾರ್ಗದಲ್ಲಿ ಹಾದು ಹೋಗುವ ವಿಮಾನಗಳಲ್ಲಿ ಪ್ರಯಾಣಿಸುವ ಭಾರತೀಯ ಪ್ರಯಾಣಿಕರು ವಿಮಾನಗಳ ಕಾರ್ಯಾಚರಣೆ ಸಹಜ ಸ್ಥಿತಿಗೆ ಮರಳುವವರೆಗೆ ಅನಿವಾರ್ಯವಲ್ಲದ ಪ್ರಯಾಣವನ್ನು ಮರುಹೊಂದಿಸಲು ಸೂಚಿಸಲಾಗಿದೆ" ಎಂದು ರಾಯಭಾರ ಕಚೇರಿ ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT