ಮಹಮದ್ ಮುಯಿಜು 
ವಿದೇಶ

Maldives Election: ಭಾರತ ವಿರೋಧಿ ನಿಲುವಿನ ಮಹಮದ್ ಮುಯಿಜುಗೆ ಬಹುಮತ, ಮತ್ತೆ ಅಧಿಕಾರಕ್ಕೆ!

ಭಾರತ ವಿರೋಧಿ ಮನಸ್ಥಿತಿಯ ಅಧ್ಯಕ್ಷ ಮೊಹಮ್ಮದ್‌ ಮುಯಿಜು (Mohamed Muizzu) ಮಾಲ್ಡೀವ್ಸ್‌ನಲ್ಲಿ ನಡೆದ ಚುನಾವಣೆಯಲ್ಲಿ (Maldives Election) ಭಾರಿ ಬಹುಮತದಲ್ಲಿ ಆರಿಸಿ ಬಂದಿದ್ದು, ಮತ್ತೆ ಸರ್ಕಾರ ರಚನೆ ಮಾಡಲಿದ್ದಾರೆ.

ಮಾಲೆ: ಭಾರತ ವಿರೋಧಿ ಮನಸ್ಥಿತಿಯ ಅಧ್ಯಕ್ಷ ಮೊಹಮ್ಮದ್‌ ಮುಯಿಜು (Mohamed Muizzu) ಮಾಲ್ಡೀವ್ಸ್‌ನಲ್ಲಿ ನಡೆದ ಚುನಾವಣೆಯಲ್ಲಿ (Maldives Election) ಭಾರಿ ಬಹುಮತದಲ್ಲಿ ಆರಿಸಿ ಬಂದಿದ್ದು, ಮತ್ತೆ ಸರ್ಕಾರ ರಚನೆ ಮಾಡಲಿದ್ದಾರೆ.

ಮಾಲ್ಡೀವ್ಸ್‌ನ ಸಂಸತ್ತಿಗೆ (ಮಜ್ಲಿಸ್) ನಡೆದ ಚುನಾವಣೆಯಲ್ಲಿ ಚೀನಾ ಪರ (Pro China) ಆಡಳಿತ ನೀಡುತ್ತಿರುವ ಅಧ್ಯಕ್ಷ ಮೊಹಮ್ಮದ್‌ ಮುಯಿಜು ಪಕ್ಷ ಪೀಪಲ್ಸ್ ನ್ಯಾಷನಲ್ ಕಾಂಗ್ರೆಸ್ (ಪಿಎನ್‌ಸಿ) ಸ್ಪಷ್ಟ ಬಹುಮತವನ್ನು ಪಡೆದುಕೊಂಡಿದೆ.

ಆಡಳಿತ ಪಕ್ಷವಾಗಿರುವ ಪೀಪಲ್ಸ್ ನ್ಯಾಷನಲ್ ಕಾಂಗ್ರೆಸ್ ಮಾಲ್ಡೀವ್ಸ್‌ನ 93 ಸ್ಥಾನಗಳ ಪೈಕಿ 86ರಲ್ಲಿ ಸ್ಪರ್ಧಿಸಿತ್ತು. ಇದೀಗ ಫಲಿತಾಂಶ ಪ್ರಕಟ ಬಳಿಕ ಮಾಲ್ಡೀವ್ಸ್ ಸಂಸತ್ತಿನಲ್ಲಿ PNC ಬಹುಮತವನ್ನು ಪಡೆದುಕೊಂಡಿದೆ.

ಮೂಲಗಳ ಪ್ರಕಾರ 86 ಸ್ಥಾನಗಳ ಪೈಕಿ ಪಿಎನ್‌ಸಿ 66 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಪ್ರಮುಖ ವಿರೋಧ ಪಕ್ಷವಾದ ಮಾಲ್ಡೀವಿಯನ್ ಡೆಮಾಕ್ರಟಿಕ್ ಪಾರ್ಟಿ (MDP) ಕೇವಲ 12 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಸ್ವತಂತ್ರ ಅಭ್ಯರ್ಥಿಗಳು 8 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಮಾಲ್ಡೀವ್ಸ್ ಡೆವಲಪ್ಮೆಂಟ್ ಅಲಯನ್ಸ್ ಎರಡು ಸ್ಥಾನಗಳಲ್ಲಿ ಗೆಲುವು ಪಡೆದಿದೆ.

ಮುಯಿಜುಗೆ ಅನಿವಾರ್ಯವಾಗಿದ್ದ ಗೆಲುವು

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ವಿಪಕ್ಷ ನಾಯಕ ಮೊಹಮ್ಮದ್‌ ಸೋಲಿಹ್ ಅವರನ್ನು ಸೋಲಿಸುವ ಮೂಲಕ ಮುಯಿಝು ಅಧ್ಯಕ್ಷರಾದರು. ಸೊಲಿಹ್ ಅವರ ಪಕ್ಷ ಮಾಲ್ಡೀವಿಯನ್ ಡೆಮಾಕ್ರಟಿಕ್ ಪಕ್ಷವು ಪ್ರಸ್ತುತ ಸಂಸತ್ತಿನಲ್ಲಿ ಬಹುಮತವನ್ನು ಹೊಂದಿತ್ತು.

ಇದು ಮುಯಿಜುಗೆ ಹೊಸ ವಿಧೇಯಕಗಳನ್ನು ತರಲು ಅಡ್ಡಿಯುಂಟುಮಾಡಿತ್ತು. ಚೀನಾ ಪರವಾದ ಹೊಸ ಕಾನೂನುಗಳನ್ನು ಮಾಡಲು ಹಾಲಿ ಅಧ್ಯಕ್ಷ ಮೊಹಮ್ಮದ್‌ ಮುಯಿಜು ಪಕ್ಷಕ್ಕೆ ಸಂಸತ್ತಿನ ಚುನಾವಣೆಯಲ್ಲಿ ಗೆಲ್ಲುವುದು ಅನಿವಾರ್ಯವಾಗಿತ್ತು. ಇದೀಗ ನಿರೀಕ್ಷೆಯಂತೆಯೇ ಮುಯಿಜು ಜಯಭೇರಿ ಭಾರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್