ಸಾಂದರ್ಭಿಕ ಚಿತ್ರ 
ವಿದೇಶ

ಬಾಂಗ್ಲಾ ದಂಗೆ: ಭಾರತೀಯ ಸಾಂಸ್ಕೃತಿಕ ಕೇಂದ್ರ ಧ್ವಂಸ, 4 ಹಿಂದೂ ದೇವಾಲಯಗಳಿಗೆ ಹಾನಿ!

ದೇಶಾದ್ಯಂತ ಕನಿಷ್ಠ 4 ಹಿಂದೂ ದೇವಾಲಯಗಳಿಗೆ ಸಣ್ಣ ಪ್ರಮಾಣದ ಹಾನಿಯಾಗಿದೆ ಎಂಬ ವರದಿಗಳು ಬಂದಿವೆ ಎಂದು ಹಿಂದೂ ಬೌದ್ಧ ಕ್ರಿಶ್ಚಿಯನ್ ಯೂನಿಟಿ ಕೌನ್ಸಿಲ್ ನಾಯಕಿ ಕಾಜೋಲ್ ದೇಬನಾಥ್ ತಿಳಿಸಿದ್ದಾರೆ.

ಢಾಕಾ: ಹಿಂಸಾಚಾರದಲ್ಲಿ ಬೇಯುತ್ತಿರುವ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಉದ್ರಿಕ್ತರ ಗುಂಪೊಂದು ಸೋಮವಾರ ಭಾರತೀಯ ಸಾಂಸ್ಕೃತಿಕ ಕೇಂದ್ರವನ್ನು ಧ್ವಂಸಗೊಳಿಸಿದ್ದು, ನಾಲ್ಕು ಹಿಂದೂ ದೇವಾಲಯಗಳಿಗೆ ಹಾನಿಯಾಗಿದೆ ಎಂದು ಸಮುದಾಯದ ಮುಖಂಡರೊಬ್ಬರು ತಿಳಿಸಿದ್ದಾರೆ.

ದೇಶಾದ್ಯಂತ ಕನಿಷ್ಠ 4 ಹಿಂದೂ ದೇವಾಲಯಗಳಿಗೆ ಸಣ್ಣ ಪ್ರಮಾಣದ ಹಾನಿಯಾಗಿದೆ ಎಂಬ ವರದಿಗಳು ಬಂದಿವೆ ಎಂದು ಹಿಂದೂ ಬೌದ್ಧ ಕ್ರಿಶ್ಚಿಯನ್ ಯೂನಿಟಿ ಕೌನ್ಸಿಲ್ ನಾಯಕಿ ಕಾಜೋಲ್ ದೇಬನಾಥ್ ತಿಳಿಸಿದ್ದಾರೆ.

ಪ್ರಧಾನಿ ಶೇಖ್ ಹಸೀನಾ ಪದಚ್ಯುತಿ ನಂತರ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ಕೆಲವು ಹಿಂದೂ ಸಮುದಾಯದ ಮುಖಂಡರು ಭಯಭೀತರಾಗಿದ್ದಾರೆ. ಢಾಕಾದ ಧನ್ಮಂಡಿ ಪ್ರದೇಶದಲ್ಲಿರುವ ಇಂದಿರಾಗಾಂಧಿ ಸಾಂಸ್ಕೃತಿಕ ಕೇಂದ್ರವನ್ನು ಧ್ವಂಸಗೊಳಿಸಲಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಬಂಗಬಂಧು ಸ್ಮಾರಕ ಮ್ಯೂಸಿಯಂ ಸೇರಿದಂತೆ ಢಾಕಾದಲ್ಲಿನ ಹಲವು ಕಡೆಗಳಲ್ಲಿ ಪ್ರತಿಭಟನಾಕಾರರು ಬೆಂಕಿ ಹಚ್ಚಿದ್ದಾರೆ. 1975 ರಲ್ಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವಾಗ ಹತ್ಯೆಗೀಡಾದ ಹಸೀನಾ ಅವರ ತಂದೆ ಶೇಖ್ ಮುಜಿಬುರ್ ರೆಹಮಾನ್ ಅವರ ಸ್ಮರಣಾರ್ಥ ಈ ಮ್ಯೂಸಿಯಂ ಸ್ಥಾಪಿಸಲಾಗಿದೆ.

ಮಾರ್ಚ್ 2010 ರಲ್ಲಿ ಔಪಚಾರಿಕವಾಗಿ ಉದ್ಘಾಟನೆಗೊಂಡ ಇಂದಿರಾ ಗಾಂಧಿ ಭಾರತೀಯ ಸಾಂಸ್ಕೃತಿಕ ಕೇಂದ್ರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು, ವಿಚಾರಗೋಷ್ಠಿಗಳು, ಕಾರ್ಯಾಗಾರ ಆಯೋಜಿಸುವ ಮೂಲಕ ಭಾರತ ಮತ್ತು ಬಾಂಗ್ಲಾದೇಶದ ನಡುವಿನ ದ್ವಿಪಕ್ಷೀಯ ಸಾಂಸ್ಕೃತಿಕ ವಿನಿಮಯವನ್ನು ಪ್ರೋತ್ಸಾಹಿಸಲಾಗುತಿತ್ತು.

ಯೋಗ, ಹಿಂದಿ, ಭಾರತೀಯ ಶಾಸ್ತ್ರೀಯ ಗಾಯನ, ಸಂಗೀತ ಮತ್ತು ಕಥಕ್ ಮತ್ತು ಮಣಿಪುರಿಯಂತಹ ಭಾರತೀಯ ನೃತ್ಯಗಳಿಗೆ ಭಾರತ ಮೂಲದ ವೃತ್ತಿಪರರು ಮತ್ತು ತರಬೇತುದಾರರು ಇಲ್ಲಿ ತರಬೇತಿ ನೀಡುತ್ತಿದ್ದರು. ಭಾರತೀಯ ಕಲೆ, ಸಂಸ್ಕೃತಿ, ರಾಜಕೀಯ, ಅರ್ಥಶಾಸ್ತ್ರ ಮತ್ತು ಕಾದಂಬರಿ ಕ್ಷೇತ್ರಗಳಲ್ಲಿ 21,000 ಕ್ಕೂ ಹೆಚ್ಚು ಪುಸ್ತಕಗಳನ್ನು ಹೊಂದಿರುವ ಗ್ರಂಥಾಲಯ ಈ ಕೇಂದ್ರದಲ್ಲಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

Pak ಸಚಿವನಿಗೆ ಮುಖಭಂಗ: ನೆತನ್ಯಾಹು ವಿರುದ್ಧ ಮಾತಾಡ್ತಿದ್ದಂತೆ ಶೋ ನಿಲ್ಲಿಸಿ ಆಸಿಫ್‌ನನ್ನು ಹೊರಕಹಿಸಿದ ಆ್ಯಂಕರ್, Video!

1st ODI: ಮಿಚೆಲ್ ಸ್ಫೋಟಕ ಭರ್ಜರಿ ಬ್ಯಾಟಿಂಗ್, ಭಾರತಕ್ಕೆ ಗೆಲ್ಲಲು ಬೃಹತ್ ಗುರಿ ನೀಡಿದ ಕಿವೀಸ್

ಕೇರಳದಲ್ಲಿ ಕಾನೂನು ಸುವ್ಯವಸ್ಥೆಗೆ ಬೆದರಿಕೆ: SDPI, ಜಮಾತ್, ಸಂಘಟನೆಗಳ ಪಾತ್ರ ಪ್ರಶ್ನಿಸಿದ ಅಮಿತ್ ಶಾ!

ಹೊಂದಿಕೊಳ್ಳಲು ಸಾಧ್ಯವಿಲ್ಲ ಎಂದು ಯಾರು ಹೇಳಿದ್ದು?': ಅಮೆರಿಕ ವ್ಯಾಪಾರ ಒಪ್ಪಂದದ ಅನಿಶ್ಚಿತತೆ ನಡುವೆಯೇ ಹೊಸ ಮಾರುಕಟ್ಟೆಗಳತ್ತ ಭಾರತ ಕಣ್ಣು!

SCROLL FOR NEXT