ಸಾಂದರ್ಭಿಕ ಚಿತ್ರ 
ವಿದೇಶ

ಬಾಂಗ್ಲಾ ದಂಗೆ: ಭಾರತೀಯ ಸಾಂಸ್ಕೃತಿಕ ಕೇಂದ್ರ ಧ್ವಂಸ, 4 ಹಿಂದೂ ದೇವಾಲಯಗಳಿಗೆ ಹಾನಿ!

ದೇಶಾದ್ಯಂತ ಕನಿಷ್ಠ 4 ಹಿಂದೂ ದೇವಾಲಯಗಳಿಗೆ ಸಣ್ಣ ಪ್ರಮಾಣದ ಹಾನಿಯಾಗಿದೆ ಎಂಬ ವರದಿಗಳು ಬಂದಿವೆ ಎಂದು ಹಿಂದೂ ಬೌದ್ಧ ಕ್ರಿಶ್ಚಿಯನ್ ಯೂನಿಟಿ ಕೌನ್ಸಿಲ್ ನಾಯಕಿ ಕಾಜೋಲ್ ದೇಬನಾಥ್ ತಿಳಿಸಿದ್ದಾರೆ.

ಢಾಕಾ: ಹಿಂಸಾಚಾರದಲ್ಲಿ ಬೇಯುತ್ತಿರುವ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಉದ್ರಿಕ್ತರ ಗುಂಪೊಂದು ಸೋಮವಾರ ಭಾರತೀಯ ಸಾಂಸ್ಕೃತಿಕ ಕೇಂದ್ರವನ್ನು ಧ್ವಂಸಗೊಳಿಸಿದ್ದು, ನಾಲ್ಕು ಹಿಂದೂ ದೇವಾಲಯಗಳಿಗೆ ಹಾನಿಯಾಗಿದೆ ಎಂದು ಸಮುದಾಯದ ಮುಖಂಡರೊಬ್ಬರು ತಿಳಿಸಿದ್ದಾರೆ.

ದೇಶಾದ್ಯಂತ ಕನಿಷ್ಠ 4 ಹಿಂದೂ ದೇವಾಲಯಗಳಿಗೆ ಸಣ್ಣ ಪ್ರಮಾಣದ ಹಾನಿಯಾಗಿದೆ ಎಂಬ ವರದಿಗಳು ಬಂದಿವೆ ಎಂದು ಹಿಂದೂ ಬೌದ್ಧ ಕ್ರಿಶ್ಚಿಯನ್ ಯೂನಿಟಿ ಕೌನ್ಸಿಲ್ ನಾಯಕಿ ಕಾಜೋಲ್ ದೇಬನಾಥ್ ತಿಳಿಸಿದ್ದಾರೆ.

ಪ್ರಧಾನಿ ಶೇಖ್ ಹಸೀನಾ ಪದಚ್ಯುತಿ ನಂತರ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ಕೆಲವು ಹಿಂದೂ ಸಮುದಾಯದ ಮುಖಂಡರು ಭಯಭೀತರಾಗಿದ್ದಾರೆ. ಢಾಕಾದ ಧನ್ಮಂಡಿ ಪ್ರದೇಶದಲ್ಲಿರುವ ಇಂದಿರಾಗಾಂಧಿ ಸಾಂಸ್ಕೃತಿಕ ಕೇಂದ್ರವನ್ನು ಧ್ವಂಸಗೊಳಿಸಲಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಬಂಗಬಂಧು ಸ್ಮಾರಕ ಮ್ಯೂಸಿಯಂ ಸೇರಿದಂತೆ ಢಾಕಾದಲ್ಲಿನ ಹಲವು ಕಡೆಗಳಲ್ಲಿ ಪ್ರತಿಭಟನಾಕಾರರು ಬೆಂಕಿ ಹಚ್ಚಿದ್ದಾರೆ. 1975 ರಲ್ಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವಾಗ ಹತ್ಯೆಗೀಡಾದ ಹಸೀನಾ ಅವರ ತಂದೆ ಶೇಖ್ ಮುಜಿಬುರ್ ರೆಹಮಾನ್ ಅವರ ಸ್ಮರಣಾರ್ಥ ಈ ಮ್ಯೂಸಿಯಂ ಸ್ಥಾಪಿಸಲಾಗಿದೆ.

ಮಾರ್ಚ್ 2010 ರಲ್ಲಿ ಔಪಚಾರಿಕವಾಗಿ ಉದ್ಘಾಟನೆಗೊಂಡ ಇಂದಿರಾ ಗಾಂಧಿ ಭಾರತೀಯ ಸಾಂಸ್ಕೃತಿಕ ಕೇಂದ್ರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು, ವಿಚಾರಗೋಷ್ಠಿಗಳು, ಕಾರ್ಯಾಗಾರ ಆಯೋಜಿಸುವ ಮೂಲಕ ಭಾರತ ಮತ್ತು ಬಾಂಗ್ಲಾದೇಶದ ನಡುವಿನ ದ್ವಿಪಕ್ಷೀಯ ಸಾಂಸ್ಕೃತಿಕ ವಿನಿಮಯವನ್ನು ಪ್ರೋತ್ಸಾಹಿಸಲಾಗುತಿತ್ತು.

ಯೋಗ, ಹಿಂದಿ, ಭಾರತೀಯ ಶಾಸ್ತ್ರೀಯ ಗಾಯನ, ಸಂಗೀತ ಮತ್ತು ಕಥಕ್ ಮತ್ತು ಮಣಿಪುರಿಯಂತಹ ಭಾರತೀಯ ನೃತ್ಯಗಳಿಗೆ ಭಾರತ ಮೂಲದ ವೃತ್ತಿಪರರು ಮತ್ತು ತರಬೇತುದಾರರು ಇಲ್ಲಿ ತರಬೇತಿ ನೀಡುತ್ತಿದ್ದರು. ಭಾರತೀಯ ಕಲೆ, ಸಂಸ್ಕೃತಿ, ರಾಜಕೀಯ, ಅರ್ಥಶಾಸ್ತ್ರ ಮತ್ತು ಕಾದಂಬರಿ ಕ್ಷೇತ್ರಗಳಲ್ಲಿ 21,000 ಕ್ಕೂ ಹೆಚ್ಚು ಪುಸ್ತಕಗಳನ್ನು ಹೊಂದಿರುವ ಗ್ರಂಥಾಲಯ ಈ ಕೇಂದ್ರದಲ್ಲಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT