ಢಾಕಾದಲ್ಲಿ ಸ್ಮಾರಕದ ಮೇಲೇರಿದ ಉದ್ರಿಕ್ತ ಪ್ರತಿಭಟನಾಕಾರರು 
ವಿದೇಶ

ಜೀವ ಭಯದಲ್ಲಿ ಭಾರತಕ್ಕೆ ಶೇಕ್ ಹಸೀನಾ ಪರಾರಿ; ಬಾಂಗ್ಲಾದೇಶ ಸೇನೆ ವಶಕ್ಕೆ!

ಶೇಕ್ ಹಸೀನಾ ಢಾಕಾ ತೊರೆದ ನಂತರ ಅವರ ಅರಮನೆಗೆ ಮುತ್ತಿಗೆ ಹಾಕಿದ ಪ್ರತಿಭಟನಾಕಾರರರು, ಪಿಠೋಪಕರಣಗಳು, ಗಾಜುಗಳನ್ನು ಪುಡಿ ಪುಡಿ ಮಾಡಿ, ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ಢಾಕಾ: ನೆರೆಯ ಬಾಂಗ್ಲಾದೇಶದಲ್ಲಿನ ಹಿಂಸಾಚಾರ, ಪ್ರಕ್ಷುಬ್ಧತೆಗೆ ಬೆದರಿದ ಶೇಕ್ ಹಸೀನಾ ಜೀವ ಭಯದಲ್ಲಿ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ, ಭಾರತಕ್ಕೆ ಪರಾರಿಯಾದ ನಂತರ ಸೇನೆಯು ಮಧ್ಯಂತರ ಸರ್ಕಾರವನ್ನು ಸ್ಥಾಪಿಸಲಿದೆ ಎಂದು ಅಲ್ಲಿನ ಸೇನಾ ಮುಖ್ಯಸ್ಥ ವಾಕರ್-ಉಜ್-ಝಮಾನ್ ಘೋಷಿಸಿದ್ದಾರೆ.

ರಾಜೀನಾಮೆಗೆ ಒತ್ತಡ ಹೆಚ್ಚಾದ ನಂತರ ಶೇಕ್ ಹಸೀನಾ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ದೇಶದಿಂದ ಪರಾರಿಯಾಗಿದ್ದಾರೆ. ಢಾಕಾ ತೊರೆದ ನಂತರ ಅವರು ಸಿ -130 ಸೇನಾ ವಿಮಾನದಲ್ಲಿ ಗಾಜಿಯಾಬಾದ್‌ನ ಹಿಂಡನ್ ವಾಯುನೆಲೆಗೆ ಬಂದಿಳಿದಿದ್ದಾರೆ.

ಭಾರತೀಯ ವಾಯುಪಡೆಯ C-17 ಮತ್ತು C-130J ಸೂಪರ್ ಹರ್ಕ್ಯುಲಸ್ ವಿಮಾನ ಹ್ಯಾಂಗರ್‌ಗಳ ಬಳಿ ಅವರ ವಿಮಾನವನ್ನು ನಿಲ್ಲಿಸಲಾಗುತ್ತದೆ. ಆ ವಿಮಾನ ಭಾರತೀಯ ವಾಯುಪ್ರದೇಶದ ಪ್ರವೇಶದಿಂದ ಗಾಜಿಯಾಬಾದ್‌ನ ಹಿಂಡನ್ ವಾಯುನೆಲೆಗೆ ಬರುವವರೆಗೂ ಭಾರತೀಯ ವಾಯುಪಡೆ ಮತ್ತು ಭದ್ರತಾ ಏಜೆನ್ಸಿಗಳು ಮೇಲ್ವಿಚಾರಣೆ ಮಾಡಿವೆ ಎಂದು ಮೂಲಗಳಿಂದ ತಿಳಿದುಬಂದಿದೆ ಎಂದು ಎಎನ್ ಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಈ ಮಧ್ಯೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಸೇನಾ ಮುಖ್ಯಸ್ಥ, ವಾಕರ್-ಉಜ್-ಝಮಾನ್, ಶಾಂತಿ ಕಾಪಾಡಲು ಜನತೆಗೆ ಕರೆ ನೀಡಿದರು. ಗಲಭೆ ಸಂಬಂಧಿತ ಪ್ರತಿ ಸಾವಿಗೆ ಕಾರಣವಾದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಾರ್ವಜನಿಕರಿಗೆ ಭರವಸೆ ನೀಡಿದರು. ಇಂದು ರಾತ್ರಿಯೊಳಗೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಮರು ಸ್ಥಾಪಿಸಲು ಮತ್ತು ಪರಿಹಾರವನ್ನು ಕಂಡುಕೊಳ್ಳಲು ಮಿಲಿಟರಿ ಬದ್ಧವಾಗಿದೆ ಎಂದು ಅವರು ಒತ್ತಿ ಹೇಳಿದರು.

"ಸೇನೆಯಲ್ಲಿ ನಂಬಿಕೆ ಇಡಿ. ಎಲ್ಲಾ ಹತ್ಯೆಗಳನ್ನು ತನಿಖೆ ಮಾಡುತ್ತೇವೆ, ತಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಗುಂಡಿನ ದಾಳಿಯಲ್ಲಿ ಸೇನೆ ಮತ್ತು ಪೊಲೀಸರು ಪಾಲ್ಗೊಳ್ಳಬಾರದು ಎಂದು ಆದೇಶಿಸಿದ್ದೇನೆ. ಈಗ ಶಾಂತವಾಗಿದ್ದು, ನಮಗೆ ನೆರವಾಗಬೇಕಾಗಿರುವುದು ವಿದ್ಯಾರ್ಥಿಗಳ ಕರ್ತವ್ಯ ಎಂದರು.

ಶೇಕ್ ಹಸೀನಾ ಢಾಕಾ ತೊರೆದ ನಂತರ ಅವರ ಅರಮನೆಗೆ ಮುತ್ತಿಗೆ ಹಾಕಿದ ಪ್ರತಿಭಟನಾಕಾರರರು, ಪಿಠೋಪಕರಣಗಳು, ಗಾಜುಗಳನ್ನು ಪುಡಿ ಪುಡಿ ಮಾಡಿ, ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಇದು ಒಂದು ತಿಂಗಳಿಗೂ ಹೆಚ್ಚು ಕಾಲ ನಡೆದ ಸರ್ಕಾರದ ವಿರೋಧಿ ಪ್ರತಿಭಟನೆಯ ಪರಾಕಾಷ್ಠೆಯಾಗಿದೆ. ಹಸೀನಾ ಅವರ ಅಧಿಕೃತ ನಿವಾಸದ ಗೇಟ್‌ಗಳನ್ನು ಮುರಿದು ಒಳಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ.

ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸೇನಾ ಮುಖ್ಯಸ್ಥರು, ಬಾಂಗ್ಲಾದೇಶ ರಾಷ್ಟ್ರೀಯ ಪಕ್ಷ (ಬಿಎನ್‌ಪಿ), ಜಾತಿಯಾ ಪಕ್ಷ, ಜಮಾತ್-ಎ-ಇಸ್ಲಾಮಿಯ ಪ್ರತಿನಿಧಿಗಳನ್ನು ಭೇಟಿಯಾಗಿರುವುದಾಗಿ ದೃಢಪಡಿಸಿದರು. ಶಿಕ್ಷಕರಾದ ಅಫಿಸ್ ನಜ್ರುಲ್ ಮತ್ತು ಜೊನಾಯೆತ್ ಸಾಕಿ ಕೂಡ ಸಭೆಯಲ್ಲಿ ಉಪಸ್ಥಿತರಿದ್ದರು ಎಂದು ಬಾಂಗ್ಲಾದೇಶದ ಮಾಧ್ಯಮ ಮೂಲಗಳನ್ನು ಉಲ್ಲೇಖಿಸಿ ANI ಸುದ್ದಿಸಂಸ್ಥೆ ಈ ಮಾಹಿತಿಯನ್ನು ಹಂಚಿಕೊಂಡಿದೆ.

ಮಧ್ಯಂತರ ಸರ್ಕಾರದ ಸದಸ್ಯರ ಪಟ್ಟಿ

ಈಗ ಬಂಗಭಬನ್ ಗೆ (ರಾಷ್ಟ್ರಧ್ಯಕ್ಷರ ಕಚೇರಿ) ಹೋಗುತ್ತೇವೆ. ಮಧ್ಯಂತರ ಸರ್ಕಾರ ರಚನೆ ಕುರಿತು ವಿಸ್ತೃತ ಚರ್ಚೆ ನಡೆಯಲಿದೆ. ವಿದ್ಯಾರ್ಥಿಗಳು ಶಾಂತಚಿತ್ತರಾಗಿರಿ. ದೇಶದಾದ್ಯಂತ ಕರ್ಫ್ಯೂ ವಿಧಿಸುವ ಅಥವಾ ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸುವ ಅಗತ್ಯವಿಲ್ಲ ಎಂದು ಸೇನಾ ಮುಖ್ಯಸ್ಥರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಪ್ರಕರಣ: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT