ವಿದ್ಯಾರ್ಥಿಗಳ ಪ್ರತಿಭಟನೆ TNIE
ವಿದೇಶ

Bangladesh: 1 ಗಂಟೆ ಅಂತಿಮ ಗಡುವು; ಬೆದರಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಾಜಿನಾಮೆ ಸಲ್ಲಿಕೆ!

ಕಳೆದ ವರ್ಷವಷ್ಟೇ ಒಬೈದುಲ್ ಹಸನ್ ಅವರನ್ನು ಶೇಖ್ ಹಸೀನಾ ನೇಮಕ ಮಾಡಿದ್ದರು. ಹಸನ್ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರಿಗೆ ನಿಷ್ಠಾವಂತರಾಗಿದ್ದರು ಎಂದು ಹೇಳಲಾಗುತ್ತದೆ.

ಢಾಕಾ: ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ ಹಾಗೂ 1 ಗಂಟೆ ಅಂತಿಮ ಗಡುವು ಬೆನ್ನಲ್ಲೇ ಬಾಂಗ್ಲಾದೇಶದ ಮುಖ್ಯ ನ್ಯಾಯಮೂರ್ತಿ ಒಬೈದುಲ್ ಹಸನ್ ರಾಜೀನಾಮೆ ನೀಡಿದ್ದಾರೆ. ಪ್ರತಿಭಟನಾಕಾರರ ಗಡುವಿನ ನಂತರ ಒಬೈದುಲ್ ಹಸನ್ 'ತಾತ್ವಿಕವಾಗಿ' ರಾಜೀನಾಮೆ ನೀಡಲು ಒಪ್ಪಿಕೊಂಡರು.

ಕಳೆದ ವರ್ಷವಷ್ಟೇ ಒಬೈದುಲ್ ಹಸನ್ ಅವರನ್ನು ಶೇಖ್ ಹಸೀನಾ ನೇಮಕ ಮಾಡಿದ್ದರು. ಅವರು ಮಾಜಿ ಪ್ರಧಾನಿ ಶೇಖ್ ಹಸೀನಾ ಅವರಿಗೆ ನಿಷ್ಠಾವಂತರಾಗಿದ್ದರು ಎಂದು ಹೇಳಲಾಗುತ್ತದೆ. ಮುಖ್ಯ ನ್ಯಾಯಮೂರ್ತಿ ರಾಜೀನಾಮೆಯನ್ನು ಘೋಷಿಸುವ ಮೊದಲು ಕೋರ್ಟ್ ಆವರಣದಿಂದ ಪಲಾಯನ ಮಾಡಿದರು ಎಂದು ವರದಿಗಳು ಬಹಿರಂಗಪಡಿಸಿವೆ. ಶೇಖ್ ಹಸೀನಾ ಅವರ ನಿರ್ಗಮನದ ನಂತರ, ರಾಷ್ಟ್ರೀಯ ಪೊಲೀಸ್ ಮುಖ್ಯಸ್ಥ ಮತ್ತು ಕೇಂದ್ರ ಬ್ಯಾಂಕ್ ಗವರ್ನರ್ ಸೇರಿದಂತೆ ಬಾಂಗ್ಲಾದೇಶದ ಅನೇಕ ಉನ್ನತ ಅಧಿಕಾರಿಗಳನ್ನು ಕಚೇರಿಯಿಂದ ಹೊರಹಾಕಲಾಗಿದೆ.

ಕಳೆದ ವರ್ಷ ನೇಮಕಗೊಂಡ ಒಬೈದುಲ್ ಹಸನ್ ಅವರು ಈ ಹಿಂದೆ ಯುದ್ಧ ಅಪರಾಧಗಳ ನ್ಯಾಯಮಂಡಳಿ ಪ್ರಕರಣವನ್ನು ಆಲಿಸಿದ್ದರು. ಈ ವೇಳೆ ಶೇಖ್ ಹಸೀನಾ ಅವರ ವಿರೋಧಿಗಳನ್ನು ಗಲ್ಲಿಗೇರಿಸಲು ಆದೇಶ ನೀಡಲಾಗಿತ್ತು. ಇದು ಸಾಕಷ್ಟು ಟೀಕೆಗೆ ಒಳಗಾಗಿತ್ತು. ಅಂದಿನಿಂದ ಅವರು ಶೇಖ್ ಹಸೀನಾ ಅವರ ವಿರೋಧಿಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ಯೂನಸ್ ಸರ್ಕಾರದ ಭಾಗವಾಗಿರುವ ವಿದ್ಯಾರ್ಥಿ ನಾಯಕ ಆಸಿಫ್ ನಜ್ರುಲ್ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ವಿದ್ಯಾರ್ಥಿಗಳು ಮತ್ತು ಜನರ ದೊಡ್ಡ ಪ್ರಮಾಣದ ದಂಗೆಗೆ ಹಾನಿಯಾಗುವ ಯಾವುದನ್ನೂ ಯಾರೂ ಮಾಡಬಾರದು ಎಂದು ಹೇಳಿದ್ದಾರೆ.

ಮುಖ್ಯ ನ್ಯಾಯಮೂರ್ತಿ ಹಸನ್ ಅವರು ಸುಪ್ರೀಂ ಕೋರ್ಟ್‌ನ ಎರಡೂ ವಿಭಾಗಗಳ ಎಲ್ಲಾ ನ್ಯಾಯಾಧೀಶರೊಂದಿಗೆ ಪೂರ್ಣ ನ್ಯಾಯಾಲಯದ ಸಭೆಯನ್ನು ಕರೆದಿದ್ದರು. ಆದರೆ, ಪ್ರತಿಭಟನಾನಿರತ ವಿದ್ಯಾರ್ಥಿಗಳು ಫುಲ್ ಕೋರ್ಟ್ ಸಭೆಯನ್ನು 'ನ್ಯಾಯಾಂಗ ದಂಗೆ' ಎಂದು ಪರಿಗಣಿಸಿದ್ದರು. ಹಸನ್ ಹೊಸದಾಗಿ ರಚನೆಯಾದ ಮಧ್ಯಂತರ ಸರ್ಕಾರದ ವಿರುದ್ಧ ಕೆಲವು ನಿರ್ಧಾರಗಳನ್ನು ನೀಡಬಹುದು ಎಂದು ಅವರು ಭಾವಿಸಿದ್ದರು. ಹೊಸದಾಗಿ ರಚನೆಯಾದ ಮಧ್ಯಂತರ ಸರ್ಕಾರವನ್ನು ಸಂಪರ್ಕಿಸದೆ ಮುಖ್ಯ ನ್ಯಾಯಾಧೀಶರು ಕರೆದ ಪೂರ್ಣ ನ್ಯಾಯಾಲಯದ ಸಭೆಯ ಬಗ್ಗೆ ತಿಳಿದ ನಂತರ ಬಾಂಗ್ಲಾದೇಶದಲ್ಲಿ ಪ್ರತಿಭಟನೆಗಳು ಭುಗಿಲೆದ್ದವು. ನ್ಯಾಯಾಲಯದ ನ್ಯಾಯಾಧೀಶರು ಪಿತೂರಿಯ ಭಾಗವಾಗಿದ್ದಾರೆ ಎಂದು ವಿದ್ಯಾರ್ಥಿ ಪ್ರತಿಭಟನಾಕಾರರು ಆರೋಪಿಸಿದರು.

ಉದ್ವಿಗ್ನತೆ ಹೆಚ್ಚಾಗುತ್ತಿದ್ದಂತೆ, ನಿಗದಿತ ಪೂರ್ಣ ನ್ಯಾಯಾಲಯದ ಸಭೆಯನ್ನು ಇದ್ದಕ್ಕಿದ್ದಂತೆ ರದ್ದುಗೊಳಿಸಲಾಯಿತು. ಪ್ರತಿಭಟನಾಕಾರರು ಸುಪ್ರೀಂ ಕೋರ್ಟ್‌ಗೆ ಮುತ್ತಿಗೆ ಹಾಕಲು ಪ್ರಾರಂಭಿಸಿದರು. ಮುಖ್ಯ ನ್ಯಾಯಮೂರ್ತಿಗೆ ಪದಚ್ಯುತಿಗೆ ಒಂದು ಗಂಟೆ ಕಾಲಾವಕಾಶ ನೀಡಿದರು. ಸುಪ್ರೀಂ ಕೋರ್ಟ್ ಸಂಕೀರ್ಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯ ನ್ಯಾಯಾಧೀಶರು, ಬದಲಾಗುತ್ತಿರುವ ಪರಿಸ್ಥಿತಿಗಳ ನಡುವೆ ದೇಶದಾದ್ಯಂತ ಸುಪ್ರೀಂ ಕೋರ್ಟ್, ಹೈಕೋರ್ಟ್ ಮತ್ತು ಕೆಳ ನ್ಯಾಯಾಲಯಗಳ ನ್ಯಾಯಾಧೀಶರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಎಂದು 'ಡೈಲಿ ಸ್ಟಾರ್' ವರದಿ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Asia Cup 2025: UAE ವಿರುದ್ಧ ಭಾರತಕ್ಕೆ 9 ವಿಕೆಟ್ ಗಳ ಜಯ

ಸ್ಲಂ ಬೋರ್ಡ್ ಅಡಿ 42,000 ಮನೆಗಳ ನಿರ್ಮಿಸಲಾಗುತ್ತಿದ್ದು, ಮೂಲಸೌಲಭ್ಯಗಳನ್ನು ಕಲ್ಪಿಸಲು ಸರ್ಕಾರದಿಂದ ಅನುದಾನ: ಸಿಎಂ

ನೇಪಾಳ ಬಿಕ್ಕಟ್ಟು: ಭಾರತದಲ್ಲಿ ಕಟ್ಟೆಚ್ಚರ; ಸಹಾಯವಾಣಿ ಆರಂಭ; ಕಠ್ಮಂಡುವಿಗೆ ವಿಮಾನ, ಬಸ್ ಸೇವೆ ರದ್ದು!

ಮಂಗಳೂರು: ನಕಲಿ ಆಧಾರ್ ಕಾರ್ಡ್‌ ತಯಾರಿಸಿ ಸರ್ಕಾರಿ ಇಲಾಖೆಗಳು, ನ್ಯಾಯಾಲಯಗಳಿಗೆ ವಂಚನೆ; ವ್ಯಕ್ತಿಯ ಬಂಧನ

2,929 ಕೋಟಿ ರೂ ವಂಚನೆ ಆರೋಪ: Anil Ambani ವಿರುದ್ಧ ಹೊಸ ಪ್ರಕರಣ ದಾಖಲು

SCROLL FOR NEXT