ಬಾಂಗ್ಲಾ ಕರೆನ್ಸಿ online desk
ವಿದೇಶ

ಬಾಂಗ್ಲಾದೇಶ: ಟಕಾ ನೋಟುಗಳಲ್ಲಿ ಮುಜೀಬುರ್ ರೆಹಮಾನ್ ಭಾವಚಿತ್ರಕ್ಕೆ ಕತ್ತರಿ!

ನೊಬೆಲ್ ಪ್ರಶಸ್ತಿ ವಿಜೇತ ಡಾ ಮುಹಮ್ಮದ್ ಯೂನಸ್ ಅವರು ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ಮುಖ್ಯ ಸಲಹೆಗಾರರಾಗಿ ಅಧಿಕಾರ ವಹಿಸಿಕೊಂಡರು.

ಢಾಕಾ: ಬಾಂಗ್ಲಾದೇಶ ಬ್ಯಾಂಕ್ ಜುಲೈ ದಂಗೆಯ ಫೀಚರ್ ಗಳನ್ನು ಒಳಗೊಂಡಂತೆ ಹೊಸ ನೋಟುಗಳನ್ನು ಮುದ್ರಿಸುತ್ತಿದೆ ಎಂದು ಢಾಕಾ ಟ್ರಿಬ್ಯೂನ್ ಪತ್ರಿಕೆ ಗುರುವಾರ ವರದಿ ಮಾಡಿದೆ. ಆಗಸ್ಟ್ 5 ರಂದು ಆಗಿನ ಪ್ರಧಾನಿ ಶೇಖ್ ಹಸೀನಾ ಅವರನ್ನು ಭಾರತಕ್ಕೆ ಪಲಾಯನ ಮಾಡಲು ಒತ್ತಾಯಿಸಿದ ವಿದ್ಯಾರ್ಥಿಗಳ ನೇತೃತ್ವದ ಪ್ರತಿಭಟನೆಯನ್ನು ಉಲ್ಲೇಖಿಸಲಾಗಿದೆ.

ನೊಬೆಲ್ ಪ್ರಶಸ್ತಿ ವಿಜೇತ ಡಾ ಮುಹಮ್ಮದ್ ಯೂನಸ್ ಅವರು ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ಮುಖ್ಯ ಸಲಹೆಗಾರರಾಗಿ ಅಧಿಕಾರ ವಹಿಸಿಕೊಂಡರು.

ಕೇಂದ್ರೀಯ ಬ್ಯಾಂಕ್ ಪ್ರಕಾರ, ಮಧ್ಯಂತರ ಸರ್ಕಾರದ ಸೂಚನೆಗಳ ಮೇರೆಗೆ ಟಕಾ 20, 100, 500 ಮತ್ತು 1,000 ರ ನೋಟುಗಳನ್ನು ಮುದ್ರಿಸಲಾಗುತ್ತಿದೆ. ಹೊಸ ಕರೆನ್ಸಿ ನೋಟುಗಳು 'ಬಂಗಬಂಧು' ಶೇಖ್ ಮುಜಿಬುರ್ ರೆಹಮಾನ್ ಅವರ ಚಿತ್ರವನ್ನು ಒಳಗೊಂಡಿರುವುದಿಲ್ಲ ಎಂದು ಬ್ಯಾಂಕ್ ನ್ನು ಉಲ್ಲೇಖಿಸಿ ಪತ್ರಿಕೆ ವರದಿ ಮಾಡಿದೆ.

ಧಾರ್ಮಿಕ ರಚನೆಗಳು, ಬಂಗಾಳಿ ಸಂಪ್ರದಾಯಗಳು ಮತ್ತು ಜುಲೈ ದಂಗೆಯ ಸಮಯದಲ್ಲಿ ಚಿತ್ರಿಸಿದ 'ಗೀಚುಬರಹ'ಗಳನ್ನು ಕರೆನ್ಸಿ ನೋಟುಗಳಲ್ಲಿ ಸೇರಿಸಲಾಗುವುದು ಎಂದು ಪತ್ರಿಕೆ ಹೇಳಿದೆ.

'ಮುಂದಿನ ಆರು ತಿಂಗಳೊಳಗೆ ಹೊಸ ನೋಟು ಮಾರುಕಟ್ಟೆಗೆ ಬಿಡುಗಡೆಯಾಗಬಹುದು ಎಂದು ನಾನು ಭಾವಿಸುತ್ತೇನೆ' ಎಂದು ಬಾಂಗ್ಲಾದೇಶ ಬ್ಯಾಂಕ್ ಕಾರ್ಯನಿರ್ವಾಹಕ ನಿರ್ದೇಶಕ ಹುಸ್ನೇರಾ ಶಿಖಾ ಹೇಳಿದ್ದಾರೆ. ವಿವಾದಾಸ್ಪದ ಉದ್ಯೋಗ ಕೋಟಾದ ವಿರುದ್ಧ ನಡೆದ ಪ್ರತಿಭಟನೆಯ ಸಮಯದಲ್ಲಿ, ರಾಷ್ಟ್ರಪಿತ ಎಂದು ಕರೆಯಲ್ಪಡುವ ಶೇಖ್ ಮುಜೀಬ್ ಅವರ ಪ್ರತಿಮೆಗಳು ದಾಳಿಗೆ ಒಳಗಾಯಿತು. ಅವರ ಮಗಳು, ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಭಾರತಕ್ಕೆ ಆಗಮಿಸಿ ಆಶ್ರಯ ಪಡೆದಿದ್ದಾರೆ.

ಶೇಖ್ ಹಸೀನಾ ಅವರು ಇತ್ತೀಚಿನ ಹೇಳಿಕೆಗಳಲ್ಲಿ ಡಾ ಯೂನಸ್ ಅವರನ್ನು ನೇರವಾಗಿ ಗುರಿಯಾಗಿಸಿದ್ದಾರೆ, ಅವರು ಹಿಂದೂಗಳು ಸೇರಿದಂತೆ ಅಲ್ಪಸಂಖ್ಯಾತರನ್ನು ರಕ್ಷಿಸುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಬಾಂಗ್ಲಾದೇಶದ ಅಂತರಾಷ್ಟ್ರೀಯ ಅಪರಾಧಗಳ ನ್ಯಾಯಮಂಡಳಿಯು ಆಕೆಯ ಹೇಳಿಕೆಗಳನ್ನು ದ್ವೇಷದ ಭಾಷಣ ಎಂದು ಬಣ್ಣಿಸಿದೆ ಮತ್ತು ದೇಶದ ನಾಯಕರು ಯೂನಸ್ ಸರ್ಕಾರದ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT