ಬಶರ್‌ ಅಸ್ಸಾದ್  
ವಿದೇಶ

ಸಿರಿಯಾ ಬಿಕ್ಕಟ್ಟು: ಡಮಾಸ್ಕಸ್​ಗೆ ಬಂಡುಕೋರರ ಪ್ರವೇಶ, ಅಧ್ಯಕ್ಷ ಬಶರ್‌ ಅಸ್ಸಾದ್ ದೇಶದಿಂದ ಪಲಾಯನ!

ಬಶರ್ ಅಲ್-ಅಸ್ಸಾದ್ ರಷ್ಯಾದ ಸರಕು ವಿಮಾನದಲ್ಲಿ ಸಿರಿಯಾವನ್ನು ತೊರೆದಿದ್ದಾರೆ ಮತ್ತು ಅಸ್ಸಾದ್ ಅವರ ವಿಮಾನವು ರಾಡಾರ್‌ನಿಂದ ಕಾಣೆಯಾಗಿದೆ.

ಬೈರತ್: ಸಿರಿಯಾದಲ್ಲಿ ಅಧ್ಯಕ್ಷ ಬಶರ್ ಅಲ್​-ಅಸ್ಸಾದ್ ಆಡಳಿತ ಅಂತ್ಯಗೊಂಡಿದೆ ಎಂದು ಸಿರಿಯಾದ ಬಂಡಾಯ ಗುಂಪು ಹೇಳಿಕೊಂಡಿದೆ. ಬಂಡುಕೋರರು ಡಮಾಸ್ಕಸ್​ ಪ್ರವೇಶಿಸಿದ ಬಳಿಕ ಸಿರಿಯಾ ಅಧ್ಯಕ್ಷ ದೇಶ ತೊರೆದು ಬೇರೆಡೆಗೆ ಪಲಾಯನ ಮಾಡಿದ್ದಾರೆ ಎಂದು ರಾಯ್ಟರ್ಸ್​ ವರದಿ ಮಾಡಿದೆ.

ಈ ಕುರಿತು ‘ಅಸೋಸಿಯೇಟ್‌ ಪ್ರೆಸ್‌’ ಜೊತೆ ಮಾತನಾಡಿದ ಸಿರಿಯಾದ ಮಾನವ ಹಕ್ಕುಗಳ ವೀಕ್ಷಣಾಲಯದ ಮುಖ್ಯಸ್ಥ ರಾಮಿ ಅಬ್ದುಲ್‌ ರೆಹಮಾನ್, ‘ಅಸ್ಸಾದ್ ಅವರು ಇಂದು ಮುಂಜಾನೆ ವಿಮಾನದ ಮೂಲಕ ತೆರಳಿದ್ದಾರೆ’ ಎಂದು ಹೇಳಿದರು. ಅಸ್ಸಾದ್ ದೇಶದಿಂದ ಪಲಾಯನಗೈದಿದ್ದಾರೆ ಎಂಬ ವದಂತಿಯನ್ನು ಸರ್ಕಾರ ನಿರಾಕರಿಸಿದೆ. ಅಸ್ಸಾದ್ ರಷ್ಯಾ ಅಥವಾ ಟೆಹರಾನ್‌ಗೆ ಹೋಗಿರಬಹುದು ಎಂದು ಹೇಳಲಾಗುತ್ತಿದೆ. ಆದರೆ, ಈ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಬಶರ್ ಅಲ್-ಅಸ್ಸಾದ್ ರಷ್ಯಾದ ಸರಕು ವಿಮಾನದಲ್ಲಿ ಸಿರಿಯಾವನ್ನು ತೊರೆದಿದ್ದಾರೆ ಮತ್ತು ಅಸ್ಸಾದ್ ಅವರ ವಿಮಾನವು ರಾಡಾರ್‌ನಿಂದ ಕಾಣೆಯಾಗಿದೆ.

ಸಿರಿಯಾದ ಪ್ರಧಾನಿ ಮೊಹಮ್ಮದ್ ಗಾಜಿ ಜಲಾಲಿ ಅವರು ತಮ್ಮ ಮನೆಯಿಂದಲೇ ವೀಡಿಯೊ ಹೇಳಿಕೆಯನ್ನು ಬಿಡುಗಡೆ ಮಾಡಿದರು ಮತ್ತು ಅವರು ದೇಶದಲ್ಲಿಯೇ ಉಳಿದು ಅಧಿಕಾರದ ಸುಗಮ ಹಸ್ತಾಂತರಕ್ಕೆ ಶ್ರಮಿಸುವುದಾಗಿ ಹೇಳಿದ್ದಾರೆ. ಬಂಡುಕೋರರ ಗುಂಪು ಸಿರಿಯಾದಲ್ಲಿ ಆಕ್ರಮಣವನ್ನು ಘೋಷಿಸಿದೆ. ಅಸ್ಸಾದ್ ಸಹೋದರ ಮಹೇರ್ ಅಲ್-ಅಸ್ಸಾದ್ ಕೂಡ ಪರಾರಿಯಾಗಿದ್ದಾರೆ. ಬಂಡುಕೋರರು ಎಲ್ಲಾ ಕಡೆಯಿಂದ ರಾಜಧಾನಿ ಡಮಾಸ್ಕಸ್ ಪ್ರವೇಶಿಸಿದ್ದಾರೆ. ಬಂಡುಕೋರರು ಡಮಾಸ್ಕಸ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ವಶಪಡಿಸಿಕೊಂಡಿದ್ದಾರೆ. ಸೇನಾ ಪ್ರಧಾನ ಕಛೇರಿಯನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಂಡುಕೋರ ಗುಂಪುಗಳಿಗೆ ಅಮೆರಿಕ ಮತ್ತು ಇರಾನ್ ಬೆಂಬಲವಿದೆ. ಅಸ್ಸಾದ್ ಆಡಳಿತ ಅಂತ್ಯಗೊಂಡಿದೆ ಎಂದು ಬಂಡುಕೋರ ಗುಂಪುಗಳು ಅಧಿಕೃತ ಹೇಳಿಕೆಯಲ್ಲಿ ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ