ಬಶರ್‌ ಅಸ್ಸಾದ್  
ವಿದೇಶ

ಸಿರಿಯಾ ಬಿಕ್ಕಟ್ಟು: ಡಮಾಸ್ಕಸ್​ಗೆ ಬಂಡುಕೋರರ ಪ್ರವೇಶ, ಅಧ್ಯಕ್ಷ ಬಶರ್‌ ಅಸ್ಸಾದ್ ದೇಶದಿಂದ ಪಲಾಯನ!

ಬಶರ್ ಅಲ್-ಅಸ್ಸಾದ್ ರಷ್ಯಾದ ಸರಕು ವಿಮಾನದಲ್ಲಿ ಸಿರಿಯಾವನ್ನು ತೊರೆದಿದ್ದಾರೆ ಮತ್ತು ಅಸ್ಸಾದ್ ಅವರ ವಿಮಾನವು ರಾಡಾರ್‌ನಿಂದ ಕಾಣೆಯಾಗಿದೆ.

ಬೈರತ್: ಸಿರಿಯಾದಲ್ಲಿ ಅಧ್ಯಕ್ಷ ಬಶರ್ ಅಲ್​-ಅಸ್ಸಾದ್ ಆಡಳಿತ ಅಂತ್ಯಗೊಂಡಿದೆ ಎಂದು ಸಿರಿಯಾದ ಬಂಡಾಯ ಗುಂಪು ಹೇಳಿಕೊಂಡಿದೆ. ಬಂಡುಕೋರರು ಡಮಾಸ್ಕಸ್​ ಪ್ರವೇಶಿಸಿದ ಬಳಿಕ ಸಿರಿಯಾ ಅಧ್ಯಕ್ಷ ದೇಶ ತೊರೆದು ಬೇರೆಡೆಗೆ ಪಲಾಯನ ಮಾಡಿದ್ದಾರೆ ಎಂದು ರಾಯ್ಟರ್ಸ್​ ವರದಿ ಮಾಡಿದೆ.

ಈ ಕುರಿತು ‘ಅಸೋಸಿಯೇಟ್‌ ಪ್ರೆಸ್‌’ ಜೊತೆ ಮಾತನಾಡಿದ ಸಿರಿಯಾದ ಮಾನವ ಹಕ್ಕುಗಳ ವೀಕ್ಷಣಾಲಯದ ಮುಖ್ಯಸ್ಥ ರಾಮಿ ಅಬ್ದುಲ್‌ ರೆಹಮಾನ್, ‘ಅಸ್ಸಾದ್ ಅವರು ಇಂದು ಮುಂಜಾನೆ ವಿಮಾನದ ಮೂಲಕ ತೆರಳಿದ್ದಾರೆ’ ಎಂದು ಹೇಳಿದರು. ಅಸ್ಸಾದ್ ದೇಶದಿಂದ ಪಲಾಯನಗೈದಿದ್ದಾರೆ ಎಂಬ ವದಂತಿಯನ್ನು ಸರ್ಕಾರ ನಿರಾಕರಿಸಿದೆ. ಅಸ್ಸಾದ್ ರಷ್ಯಾ ಅಥವಾ ಟೆಹರಾನ್‌ಗೆ ಹೋಗಿರಬಹುದು ಎಂದು ಹೇಳಲಾಗುತ್ತಿದೆ. ಆದರೆ, ಈ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಬಶರ್ ಅಲ್-ಅಸ್ಸಾದ್ ರಷ್ಯಾದ ಸರಕು ವಿಮಾನದಲ್ಲಿ ಸಿರಿಯಾವನ್ನು ತೊರೆದಿದ್ದಾರೆ ಮತ್ತು ಅಸ್ಸಾದ್ ಅವರ ವಿಮಾನವು ರಾಡಾರ್‌ನಿಂದ ಕಾಣೆಯಾಗಿದೆ.

ಸಿರಿಯಾದ ಪ್ರಧಾನಿ ಮೊಹಮ್ಮದ್ ಗಾಜಿ ಜಲಾಲಿ ಅವರು ತಮ್ಮ ಮನೆಯಿಂದಲೇ ವೀಡಿಯೊ ಹೇಳಿಕೆಯನ್ನು ಬಿಡುಗಡೆ ಮಾಡಿದರು ಮತ್ತು ಅವರು ದೇಶದಲ್ಲಿಯೇ ಉಳಿದು ಅಧಿಕಾರದ ಸುಗಮ ಹಸ್ತಾಂತರಕ್ಕೆ ಶ್ರಮಿಸುವುದಾಗಿ ಹೇಳಿದ್ದಾರೆ. ಬಂಡುಕೋರರ ಗುಂಪು ಸಿರಿಯಾದಲ್ಲಿ ಆಕ್ರಮಣವನ್ನು ಘೋಷಿಸಿದೆ. ಅಸ್ಸಾದ್ ಸಹೋದರ ಮಹೇರ್ ಅಲ್-ಅಸ್ಸಾದ್ ಕೂಡ ಪರಾರಿಯಾಗಿದ್ದಾರೆ. ಬಂಡುಕೋರರು ಎಲ್ಲಾ ಕಡೆಯಿಂದ ರಾಜಧಾನಿ ಡಮಾಸ್ಕಸ್ ಪ್ರವೇಶಿಸಿದ್ದಾರೆ. ಬಂಡುಕೋರರು ಡಮಾಸ್ಕಸ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ವಶಪಡಿಸಿಕೊಂಡಿದ್ದಾರೆ. ಸೇನಾ ಪ್ರಧಾನ ಕಛೇರಿಯನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಂಡುಕೋರ ಗುಂಪುಗಳಿಗೆ ಅಮೆರಿಕ ಮತ್ತು ಇರಾನ್ ಬೆಂಬಲವಿದೆ. ಅಸ್ಸಾದ್ ಆಡಳಿತ ಅಂತ್ಯಗೊಂಡಿದೆ ಎಂದು ಬಂಡುಕೋರ ಗುಂಪುಗಳು ಅಧಿಕೃತ ಹೇಳಿಕೆಯಲ್ಲಿ ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT