ಜಿಮ್ಮಿ ಕಾರ್ಟರ್ 
ವಿದೇಶ

ಅಮೆರಿಕದ ಮಾಜಿ ಅಧ್ಯಕ್ಷ, ಶತಾಯುಷಿ ಜಿಮ್ಮಿ ಕಾರ್ಟರ್ ನಿಧನ; ಭಾರತದ ಹಳ್ಳಿಗೆ ಇಡಲಾಗಿದೆ ಇವರ ಹೆಸರು!

ಭಾರತಕ್ಕೆ ಭೇಟಿ ನೀಡಿದ್ದ ಅಮೆರಿಕದ ಮೂರನೇ ಅಧ್ಯಕ್ಷ ಜಿಮ್ಮಿ ಕಾರ್ಟರ್ ಅವರ ಗೌರವಾರ್ಥವಾಗಿ ಹರಿಯಾಣದ ಗ್ರಾಮಕ್ಕೆ ಕಾರ್ಟರ್ ಪುರಿ ಎಂದು ಹೆಸರಿಡಲಾಗಿತ್ತು. 100ನೇ ವಯಸ್ಸಿನಲ್ಲಿ ಅವರು ನಿಧನರಾಗಿದ್ದಾರೆ

ವಾಷಿಂಗ್ಟನ್: ಅಮೆರಿಕದ 39ನೇ ಅಧ್ಯಕ್ಷರಾಗಿದ್ದ ಶತಾಯುಷಿ ಜಿಮ್ಮಿ ಕಾರ್ಟರ್ ನಿಧನರಾಗಿದ್ದಾರೆ. ಜಾರ್ಜಿಯಾದ ಪ್ಲೇನ್ಸ್ ನಲ್ಲಿರುವ ಅವರ ನಿವಾಸದಲ್ಲಿ ಕಾರ್ಟರ್ ನಿಧನರಾದರು ಎಂದು ಕಾರ್ಟರ್ ಸೆಂಟರ್ ತಿಳಿಸಿದೆ.

ಭಾರತಕ್ಕೆ ಭೇಟಿ ನೀಡಿದ್ದ ಅಮೆರಿಕದ ಮೂರನೇ ಅಧ್ಯಕ್ಷ ಜಿಮ್ಮಿ ಕಾರ್ಟರ್ ಅವರ ಗೌರವಾರ್ಥವಾಗಿ ಹರಿಯಾಣದ ಗ್ರಾಮಕ್ಕೆ ಕಾರ್ಟರ್ ಪುರಿ ಎಂದು ಹೆಸರಿಡಲಾಗಿದೆ. 100ನೇ ವಯಸ್ಸಿನಲ್ಲಿ ಅವರು ನಿಧನರಾಗಿದ್ದಾರೆ. ಅಮೆರಿಕದ ಇತಿಹಾಸದಲ್ಲಿ ಅತ್ಯಂತ ಹೆಚ್ಚುಕಾಲ ಬದುಕಿದ ಅಧ್ಯಕ್ಷರಾಗಿದ್ದಾರೆ. ಇಂದು ಅಮೆರಿಕ ಮತ್ತು ಜಗತ್ತು ಅಸಾಧಾರಣ ನಾಯಕ, ರಾಜಕಾರಣಿ ಮತ್ತು ಮಾನವತಾವಾದಿಯನ್ನು ಕಳೆದುಕೊಂಡಿದೆ ಎಂದು ಅಮೆರಿಕದ ಅಧ್ಯಕ್ಷ ಜೋ ಬೈಡನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಜಾಕ್, ಚಿಪ್, ಚಿಫ್, ಆ್ಯಮಿ ಎಂಬ ನಾಲ್ವರು ಮಕ್ಕಳನ್ನು ಅಗಲಿರುವ ಜಿಮ್ಮಿ ಅವರಿಗೆ 11 ಮಂದಿ ಮೊಮ್ಮಕ್ಕಳು, 14 ಮಂದಿ ಮರಿ ಮೊಮ್ಮಕ್ಕಳಿದ್ದಾರೆ. ನನ್ನ ತಂದೆ ಕೇವಲ ನನಗೆ ಮಾತ್ರವಲ್ಲ, ಶಾಂತಿ, ಮಾನವ ಹಕ್ಕುಗಳು ಮತ್ತು ಸ್ವಾರ್ಥ ರಹಿತ ಪ್ರೀತಿ ಬಯಸುವ ಎಲ್ಲರಿಗೂ ಹೀರೋ, ಅವರು ಜನರನ್ನು ಒಟ್ಟುಗೊಡಿಸಿದ ರೀತಿಯಿಂದಾಗಿ ಜಗತ್ತು ನಮ್ಮ ಕುಟುಂಬವಾಗಿದೆ. ಈ ನಂಬಿಕೆಗಳನ್ನು ಮುಂದುವರೆಸುವ ಮೂಲಕ ಅವರ ಸ್ಮರಣೆಯನ್ನು ಗೌರವಿಸುವ ಎಲ್ಲರಿಗೂ ಧನ್ಯವಾದ ಹೇಳುತ್ತೇವೆ' ಎಂದು ಮಗ ಚಿಪ್ ಕಾರ್ಟರ್ ಹೇಳಿದ್ದಾರೆ.

ಕಾರ್ಟರ್ ಅವರನ್ನು ಸೈದ್ಧಾಂತಿಕ ಹಾಗೂ ರಾಜಕೀಯವಾಗಿ ವಿರೋಧಿಸುತ್ತಿದ್ದ ಚುನಾಯಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೂಡಾ ಕಾರ್ಟರ್ ಅವರು ನಮ್ಮ ದೇಶದ ಬಗ್ಗೆ ನೈಜ ಪ್ರೇಮ ಹಾಗೂ ಗೌರವ ಇಟ್ಟುಕೊಂಡಿದ್ದರು. ಅಮೆರಿಕವನ್ನು ಒಂದು ಅತ್ಯುತ್ತಮವಾಗಿಸುವ ನಿಟ್ಟಿನಲ್ಲಿ ಅವರು ಶ್ರಮಿಸಿದ್ದಾರೆ. ಅದಕ್ಕಾಗಿ ಅವರಿಗೆ ಅತ್ಯುನ್ನತ ಗೌರವ ನೀಡುತ್ತೇನೆ. ಅವರು ಒಳ್ಳೆಯ ವ್ಯಕ್ತಿಯಾಗಿದ್ದರು ಎಂದು ಹೇಳಿದ್ದಾರೆ.

ಕಾರ್ಟರ್ ಭಾರತ ಭೇಟಿ

ಕಾರ್ಟರ್ ಅವರನ್ನು ಭಾರತದ ಸ್ನೇಹಿತ ಎಂದು ಪರಿಗಣಿಸಲಾಗಿತ್ತು. 1977ರಲ್ಲಿ ತುರ್ತುಪರಿಸ್ಥಿತಿಯನ್ನು ತೆಗೆದುಹಾಕಿ, ಜನತಾ ಪಕ್ಷ ಗೆದ್ದ ಭಾರತಕ್ಕೆ ಭೇಟಿ ನೀಡಿದ ಮೊದಲ ಅಮೇರಿಕನ್ ಅಧ್ಯಕ್ಷರಾಗಿದ್ದರು.

ಭಾರತಕ್ಕೆ ಭೇಟಿ ನೀಡಿದ್ದ ಅಮೆರಿಕದ ಮೂರನೇ ಅಧ್ಯಕ್ಷ ಜಿಮ್ಮಿ ಕಾರ್ಟರ್ ಅವರ ಗೌರವಾರ್ಥವಾಗಿ ಹರಿಯಾಣದ ಗ್ರಾಮಕ್ಕೆ ಕಾರ್ಟರ್ ಪುರಿ ಎಂದು ಹೆಸರಿಡಲಾಗಿದೆ.

ಜನವರಿ 3, 1978 ರಂದು, ಜಿಮ್ಮಿ ಕಾರ್ಟರ್, ಆಗಿನ ಪ್ರಥಮ ಮಹಿಳೆ ರೊಸಾಲಿನ್ ಕಾರ್ಟರ್ ಜೊತೆಗೆ, ದೆಹಲಿಯಿಂದ ಒಂದು ಗಂಟೆ ದೂರದಲ್ಲಿರುವ ಹರಿಯಾಣದ ಹಳ್ಳಿಯಾದ ದೌಲತ್‌ಪುರ ನಾಸಿರಾಬಾದ್‌ಗೆ ಬಂದಿದ್ದರು.

ಕಾರ್ಟರ್ ಸೆಂಟರ್, ಶ್ರೀ ಕಾರ್ಟರ್ ಸ್ಥಾಪಿಸಿದ ಎನ್‌ಜಿಒ ಪ್ರಕಾರ, ಅವರ ಭೇಟಿ ಯಶಸ್ವಿಯಾಗಿದ್ದರಿಂದ ಅಲ್ಲಿನ ನಿವಾಸಿಗಳು ಅಧ್ಯಕ್ಷರ ಗೌರವಾರ್ಥವಾಗಿ ಪ್ರದೇಶವನ್ನು 'ಕಾರ್ಟರ್‌ಪುರಿ' ಎಂದು ಮರುನಾಮಕರಣ ಮಾಡಿದರು.

ಅಲ್ಲಿನ ಜನರು ಕಾರ್ಟರ್ ಅವರ ಉಳಿದ ಅವಧಿಯವರೆಗೆ ಶ್ವೇತಭವನದೊಂದಿಗೆ ಸಂಪರ್ಕದಲ್ಲಿದ್ದರು.

ಅಂದಿನಿಂದ 'ಕಾರ್ಟರ್‌ಪುರಿ'ಯಲ್ಲಿ ಜನವರಿ 3 ರಂದು ರಜೆ ಘೋಷಿಸಲಾಯಿತು.

ಶ್ರೀ ಕಾರ್ಟರ್ 2002 ರಲ್ಲಿ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಗೆದ್ದಾಗ, ಗ್ರಾಮಸ್ಥರು ಬೃಹತ್ ಮೆರವಣಿಗೆ ನಡೆಸಿ ಸಂಭ್ರಮಿಸಿದರು.

ಜನವರಿ 2, 1978 ರಂದು ಭಾರತೀಯ ಸಂಸತ್ತನ್ನು ಉದ್ದೇಶಿಸಿ ಮಾತನಾಡಿದ್ದ ಕಾರ್ಟರ್ ಸರ್ವಾಧಿಕಾರಿ ಆಡಳಿತವನ್ನು ವಿರೋಧಿಸಿದ್ದರು. ಅಭಿವೃದ್ಧಿಶೀಲ ರಾಷ್ಟ್ರಗಳಲ್ಲಿ ಎದುರಿಸುತ್ತಿರುವ ಸಮಸ್ಯೆಗಳ ವಿಶಿಷ್ಟವಾದವು. ಮುಂದೆ ಇರುವ ಕಾರ್ಯಗಳ ಬಗ್ಗೆ ನೆನಪಿಸಿಕೊಳ್ಳಬೇಕು. ಸರ್ವಾಧಿಕಾರಿ ಮಾರ್ಗವಲ್ಲ ಎಂದು ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

SCROLL FOR NEXT