ಹಡಗು ರಕ್ಷಿಸಿದ ಭಾರತೀಯ ನೌಕಾಪಡೆ 
ವಿದೇಶ

ಸೊಮಾಲಿಯಾ ಕಡಲ್ಗಳ್ಳರ ದಾಳಿಯಿಂದ ಇರಾನ್-ಪಾಕ್ ಪ್ರಜೆಗಳಿದ್ದ ಹಡಗು ರಕ್ಷಿಸಿದ ಭಾರತೀಯ ನೌಕಾಪಡೆ!

ಸೊಮಾಲಿಯಾದ ಪೂರ್ವ ಕರಾವಳಿಯಲ್ಲಿ ಇರಾನ್ ಧ್ವಜದ ಮೀನುಗಾರಿಕಾ ಹಡಗಿನ ಮೇಲೆ ಕಡಲ್ಗಳ್ಳರ ಸಂಭಾವ್ಯ ದಾಳಿಯೊಂದನ್ನು ಭಾರತೀಯ ನೌಕಾಪಡೆ ವಿಫಲಗೊಳಿಸಿದೆ.

ನವದೆಹಲಿ: ಸೊಮಾಲಿಯಾದ ಪೂರ್ವ ಕರಾವಳಿಯಲ್ಲಿ ಇರಾನ್ ಧ್ವಜದ ಮೀನುಗಾರಿಕಾ ಹಡಗಿನ ಮೇಲೆ ಕಡಲ್ಗಳ್ಳರ ಸಂಭಾವ್ಯ ದಾಳಿಯೊಂದನ್ನು ಭಾರತೀಯ ನೌಕಾಪಡೆ ವಿಫಲಗೊಳಿಸಿದೆ.

ಭಾರತೀಯ ಯುದ್ಧನೌಕೆ ಐಎನ್‌ಎಸ್ ಶಾರದಾ ನೌಕೆ ಎಫ್‌ವಿ ಒಮರಿಲ್ ನೌಕೆಯನ್ನು ರಕ್ಷಣೆ ಮಾಡಿದ್ದು, 11 ಇರಾನ್ ಮತ್ತು ಎಂಟು ಪಾಕಿಸ್ತಾನಿ ಸಿಬ್ಬಂದಿಗಳಿದ್ದ ಮೀನುಗಾರಿಕಾ ಹಡಗಿನ ಮೇಲೆ ಕಡಲ್ಗಳ್ಳರು ದಾಳಿಗೆ ಮುಂದಾಗಿದ್ದರು. ಆದರೆ ನೌಕಾಪಡೆಯ ಪ್ರವೇಶದೊಂದಿಗೆ ಈ ದಾಳಿ ವಿಫಲವಾಗಿದೆ ಎಂದು ಹೇಳಲಾಗಿದೆ.

"ಇರಾನ್ ಮೂಲದ ಎಫ್‌ವಿ ಒಮರಿಲ್ ಹಡಗನ್ನು ಏಳು ಕಡಲ್ಗಳ್ಳರು ದಾಳಿ ಮಾಡಿ ಅದನ್ನು ವಶಕ್ಕೆ ಪಡೆಯಲು ಯತ್ನಿಸಿದ್ದರು. ಅವರು ಸಿಬ್ಬಂದಿಯನ್ನು ಒತ್ತೆಯಾಳುಗಳಾಗಿ ತೆಗೆದುಕೊಂಡಿದ್ದರು. ಈ ವಿಚಾರ ತಿಳಿದ ಕೂಡಲೇ ಐಎನ್‌ಎಸ್ ಶಾರದಾ ಶುಕ್ರವಾರ ಮುಂಜಾನೆ ಹಡಗನ್ನು ತಡೆಯಿತು.

ಹಡಗಿನ ಜೊತೆಗೆ ಸಿಬ್ಬಂದಿಯನ್ನು ಸುರಕ್ಷಿತವಾಗಿ ಬಿಡುಗಡೆ ಮಾಡಲು ಕಡಲ್ಗಳ್ಳರಿಗೆ ಸೂಚಿಸಲಾಗಿತ್ತು. ಈ ಹಡಗಿನಲ್ಲಿ 11 ಇರಾನ್ ಮತ್ತು ಎಂಟು ಪಾಕಿಸ್ತಾನಿ ಸಿಬ್ಬಂದಿಯನ್ನು ಯಶಸ್ವಿಯಾಗಿ ಬಿಡುಗಡೆ ಮಾಡಿದೆ ಎಂದು ಭಾರತೀಯ ನೌಕಾಪಡೆಯ ವಕ್ತಾರ ಕಮಾಂಡರ್ ವಿವೇಕ್ ಮಧ್ವಾಲ್ ಹೇಳಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT