ನೇಪಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ 
ವಿದೇಶ

ಭಾರತದ ಜೊತೆ ವಿದ್ಯುತ್ ಖರೀದಿ ಒಪ್ಪಂದ: ನೇಪಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಭಾರತದೊಂದಿಗೆ ಇತ್ತೀಚೆಗೆ ಸಹಿ ಮಾಡಿದ ದೀರ್ಘಾವಧಿಯ ವಿದ್ಯುತ್ ಒಪ್ಪಂದದ ವಿಚಾರಕ್ಕೆ ಸಂಬಂಧಿಸಿದಂತೆ ನೇಪಾಳದ ಸುಪ್ರೀಂ ಕೋರ್ಟ್ ಅಲ್ಲಿನ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಕಠ್ಮಂಡು: ಭಾರತದೊಂದಿಗೆ ಇತ್ತೀಚೆಗೆ ಸಹಿ ಮಾಡಿದ ದೀರ್ಘಾವಧಿಯ ವಿದ್ಯುತ್ ಒಪ್ಪಂದದ ವಿಚಾರಕ್ಕೆ ಸಂಬಂಧಿಸಿದಂತೆ ನೇಪಾಳದ ಸುಪ್ರೀಂ ಕೋರ್ಟ್ ಅಲ್ಲಿನ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಭಾರತ-ನೇಪಾಳ ನಡುವಿನ ದೀರ್ಘಾವಧಿಯ ವಿದ್ಯುತ್ ಒಪ್ಪಂದದ ವಿಚಾರಕ್ಕೆ ಸಂಬಂಧಿಸಿದಂತೆ ನೇಪಾಳ ಸರ್ಕಾರಕ್ಕೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದು, ಒಪ್ಪಂದಕ್ಕೆ ಬಹುಪಾಲು ಸಂಸತ್ ಸದಸ್ಯರ ಅನುಮೋದನೆ ಅಗತ್ಯವಿದೆಯೇ ಎಂದು ಪ್ರಶ್ನಿಸಿದೆ. ಷೋಕಾಸ್ ನೋಟಿಸ್‌ನಲ್ಲಿ, ಒಪ್ಪಂದವು ನೈಸರ್ಗಿಕ ಸಂಪನ್ಮೂಲಗಳ ವಿತರಣೆ ಮತ್ತು ಅವುಗಳ ಬಳಕೆಗೆ ಸಂಬಂಧಿಸಿದೆಯೇ ಮತ್ತು ಸಂಸತ್ತಿನ ಬಹುಪಾಲು ಸದಸ್ಯರ ಅನುಮೋದನೆಯ ಅಗತ್ಯವಿದ್ದರೆ ಅದನ್ನು ಸ್ಪಷ್ಟಪಡಿಸುವಂತೆ ಸುಪ್ರೀಂ ಕೋರ್ಟ್ ಸರ್ಕಾರವನ್ನು ಕೇಳಿದೆ. ಅಲ್ಲಗೆ ಮಧ್ಯಂತರ ಆದೇಶಗಳನ್ನು ನೀಡಬೇಕೆ ಎಂದು ನಿರ್ಧರಿಸಲು ಸುಪ್ರೀಂ ಕೋರ್ಟ್ ಎರಡೂ ಕಡೆಯಿಂದ ವಿಚಾರಣೆಗೆ ಕರೆದಿದೆ.

ಮುಂದಿನ ಹತ್ತು ವರ್ಷಗಳಲ್ಲಿ ಭಾರತಕ್ಕೆ 10,000 ಮೆಗಾವ್ಯಾಟ್ ವಿದ್ಯುತ್ ರಫ್ತು ಮಾಡಲು ಅನುಕೂಲವಾಗುವಂತೆ ನೇಪಾಳ ವಿದ್ಯುತ್ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿತು. ಜನವರಿಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಹಿಮಾಲಯ ದೇಶಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಒಪ್ಪಂದಕ್ಕೆ ಸಹಿ ಹಾಕಲಾಯಿತು.

ಇದೀಗ ನೇಪಾಳ ಸರ್ಕಾರದ ಮಾಜಿ ಕಾರ್ಯದರ್ಶಿ ಸೂರ್ಯ ನಾಥ್ ಉಪಾಧ್ಯಾಯ ಅವರು ಸಲ್ಲಿಸಿದ ರಿಟ್ ಅರ್ಜಿಗೆ ಪ್ರತಿಕ್ರಿಯೆಯಾಗಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ನಹಕುಲ್ ಸುಬೇದಿ ಅವರ ಏಕ ಪೀಠವು ಮಂಗಳವಾರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ ಎಂದು ಸುಪ್ರೀಂ ಕೋರ್ಟ್‌ನ ವಕ್ತಾರ ವೇದ್ ಪ್ರಸಾದ್ ಉಪ್ರೇತಿ ತಿಳಿಸಿದ್ದಾರೆ.

ನೇಪಾಳ-ಭಾರತದ ಶ್ರೇಷ್ಠ ವ್ಯಕ್ತಿಗಳ ಗುಂಪಿನ ಸದಸ್ಯರೂ ಆದ ಉಪಾಧ್ಯಾಯ ಅವರು ಸಂಸತ್ತಿನ ಮೂಲಕ ದ್ವಿಪಕ್ಷೀಯ ಒಪ್ಪಂದವನ್ನು ಅನುಮೋದಿಸುವ ಅಗತ್ಯವನ್ನು ಒತ್ತಿ ಹೇಳಿದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT