ಸೈಯದ್ ಮಜಾಹಿರ್ ಅಲಿ 
ವಿದೇಶ

ಚಿಕಾಗೋದಲ್ಲಿ ಭಾರತೀಯ ವಿದ್ಯಾರ್ಥಿಯನ್ನು ಬೆನ್ನಟ್ಟಿ ದಾಳಿ ಮಾಡಿ, ಫೋನ್ ಕದ್ದೊಯ್ದ ದಾಳಿಕೋರರು!

ಹೈದರಾಬಾದ್‌ನ ವಿದ್ಯಾರ್ಥಿಯೊಬ್ಬ ತನ್ನ ಮನೆಯ ಬಳಿ ನಾಲ್ವರು ಶಸ್ತ್ರಸಜ್ಜಿತ ದರೋಡೆಕೋರರಿಂದ ಹಲ್ಲೆಗೊಳಗಾಗಿ ಗಾಯಗೊಂಡಿದ್ದಾನೆ.

ಚಿಕಾಗೋ: ಹೈದರಾಬಾದ್‌ನ ವಿದ್ಯಾರ್ಥಿಯೊಬ್ಬ ತನ್ನ ಮನೆಯ ಬಳಿ ನಾಲ್ವರು ಶಸ್ತ್ರಸಜ್ಜಿತ ದರೋಡೆಕೋರರಿಂದ ಹಲ್ಲೆಗೊಳಗಾಗಿ ಗಾಯಗೊಂಡಿದ್ದಾನೆ. 

ದರೋಡೆಕೋರರು ಯುವಕನು ಮೇಲೆ ಹಲ್ಲೆ ನಡೆಸಿ ಫೋನ್ ಕಿತ್ತುಕೊಂಡಿದ್ದಾರೆ. ತೀವ್ರ ರಕ್ತಸ್ರಾವದಿಂದ ಬಳಲುತ್ತಿರುವ ವಿದ್ಯಾರ್ಥಿಯನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಈ ದಾಳಿಯು ಆತಂಕವನ್ನು ಹುಟ್ಟುಹಾಕಿದೆ. ವಿಶೇಷವಾಗಿ ಈ ವರ್ಷ ಅಮೆರಿಕಾದಲ್ಲಿ ನಾಲ್ವರು ಭಾರತೀಯ ಮೂಲದ ವಿದ್ಯಾರ್ಥಿಗಳು ಸಾವನ್ನಪ್ಪಿದ ವರದಿ ಬೆನ್ನಲ್ಲೇ ಈ ದಾಳಿ ನಡೆದಿದೆ.

ಹೈದರಾಬಾದ್‌ನ ಲಂಗರ್ ಹೌಜ್ ನಿವಾಸಿ ಸೈಯದ್ ಮಜಾಹಿರ್ ಅಲಿ, ಇಂಡಿಯಾನಾ ವೆಸ್ಲಿಯನ್ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಪಡೆಯಲು ಅಮೆರಿಕಕ್ಕೆ ತೆರಳಿದ್ದನು. ಮಂಗಳವಾರ ಮುಂಜಾನೆ (ಸೆಂಟ್ರಲ್ ಸ್ಟ್ಯಾಂಡರ್ಡ್ ಟೈಮ್) ಚಿಕಾಗೋದ ಕ್ಯಾಂಪ್‌ಬೆಲ್ ಅವೆನ್ಯೂನಲ್ಲಿರುವ ಆತನ ಮನೆಯ ಬಳಿ ಅಲಿಯನ್ನು ಅವರ ಮೂವರು ದಾಳಿಕೋರರು ಹಿಂಬಾಲಿಸುತ್ತಿರುವುದನ್ನು ಸಿಸಿಟಿವಿ ದೃಶ್ಯಾವಳಿಯಲ್ಲಿ ಕಾಣಬಹುದು.

ಮಜಾಹಿರ್ ಅಲಿ ಹಣೆ, ಮೂಗು ಮತ್ತು ಬಾಯಿಯಲ್ಲಿ ರಕ್ತ ಹರಿಯುತ್ತಿದ್ದು ನಾಲ್ಕು ಜನರು ನನ್ನ ಮೇಲೆ ದಾಳಿ ಮಾಡಿದರು. ನಾನು ನನ್ನ ಕೈಯಲ್ಲಿ ಆಹಾರದ ಪ್ಯಾಕೆಟ್‌ನೊಂದಿಗೆ ಮನೆಗೆ ಮರಳುತ್ತಿದ್ದೆ. ನಾನು ನನ್ನ ಮನೆಯ ಬಳಿ ಬಂದಾಗ ನಾಲ್ಕು ಜನರು ನನ್ನ ಮೇಲೆ ದಾಳಿ ಮಾಡಿದರು. ಈ ವೇಳೆ ಸಹಾಯಕ್ಕಾಗಿ ನಾನು ಕೂಗಿಕೊಂಡೆ ಎಂದು ಹೇಳಿದ್ದಾರೆ.

ಕಳೆದ ವಾರ, ಓಹಿಯೋದ ಲಿಂಡರ್ ಸ್ಕೂಲ್ ಆಫ್ ಬ್ಯುಸಿನೆಸ್‌ನಲ್ಲಿ ವಿದ್ಯಾರ್ಥಿಯಾಗಿದ್ದ 19 ವರ್ಷದ ಶ್ರೇಯಸ್ ರೆಡ್ಡಿ ಬೆನಿಗರ್ ಶವವಾಗಿ ಪತ್ತೆಯಾಗಿದ್ದರು. ಅದೇ ವಾರದ ಆರಂಭದಲ್ಲಿ, ಪರ್ಡ್ಯೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ನೀಲ್ ಆಚಾರ್ಯ ಶವವಾಗಿ ಪತ್ತೆಯಾಗಿದ್ದರು. ಜನವರಿ 16ರಂದು ಜಾರ್ಜಿಯಾದ ಲಿಥೋನಿಯಾದಲ್ಲಿ ಹರಿಯಾಣದ ವಿವೇಕ್ ಸೈನಿ ಅವರನ್ನು ನಿರಾಶ್ರಿತ ವ್ಯಕ್ತಿಯೊಬ್ಬರು ಹೊಡೆದು ಸಾಯಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT