ಸೈಯದ್ ಮಜಾಹಿರ್ ಅಲಿ 
ವಿದೇಶ

ಚಿಕಾಗೋದಲ್ಲಿ ಭಾರತೀಯ ವಿದ್ಯಾರ್ಥಿಯನ್ನು ಬೆನ್ನಟ್ಟಿ ದಾಳಿ ಮಾಡಿ, ಫೋನ್ ಕದ್ದೊಯ್ದ ದಾಳಿಕೋರರು!

ಹೈದರಾಬಾದ್‌ನ ವಿದ್ಯಾರ್ಥಿಯೊಬ್ಬ ತನ್ನ ಮನೆಯ ಬಳಿ ನಾಲ್ವರು ಶಸ್ತ್ರಸಜ್ಜಿತ ದರೋಡೆಕೋರರಿಂದ ಹಲ್ಲೆಗೊಳಗಾಗಿ ಗಾಯಗೊಂಡಿದ್ದಾನೆ.

ಚಿಕಾಗೋ: ಹೈದರಾಬಾದ್‌ನ ವಿದ್ಯಾರ್ಥಿಯೊಬ್ಬ ತನ್ನ ಮನೆಯ ಬಳಿ ನಾಲ್ವರು ಶಸ್ತ್ರಸಜ್ಜಿತ ದರೋಡೆಕೋರರಿಂದ ಹಲ್ಲೆಗೊಳಗಾಗಿ ಗಾಯಗೊಂಡಿದ್ದಾನೆ. 

ದರೋಡೆಕೋರರು ಯುವಕನು ಮೇಲೆ ಹಲ್ಲೆ ನಡೆಸಿ ಫೋನ್ ಕಿತ್ತುಕೊಂಡಿದ್ದಾರೆ. ತೀವ್ರ ರಕ್ತಸ್ರಾವದಿಂದ ಬಳಲುತ್ತಿರುವ ವಿದ್ಯಾರ್ಥಿಯನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಈ ದಾಳಿಯು ಆತಂಕವನ್ನು ಹುಟ್ಟುಹಾಕಿದೆ. ವಿಶೇಷವಾಗಿ ಈ ವರ್ಷ ಅಮೆರಿಕಾದಲ್ಲಿ ನಾಲ್ವರು ಭಾರತೀಯ ಮೂಲದ ವಿದ್ಯಾರ್ಥಿಗಳು ಸಾವನ್ನಪ್ಪಿದ ವರದಿ ಬೆನ್ನಲ್ಲೇ ಈ ದಾಳಿ ನಡೆದಿದೆ.

ಹೈದರಾಬಾದ್‌ನ ಲಂಗರ್ ಹೌಜ್ ನಿವಾಸಿ ಸೈಯದ್ ಮಜಾಹಿರ್ ಅಲಿ, ಇಂಡಿಯಾನಾ ವೆಸ್ಲಿಯನ್ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಪಡೆಯಲು ಅಮೆರಿಕಕ್ಕೆ ತೆರಳಿದ್ದನು. ಮಂಗಳವಾರ ಮುಂಜಾನೆ (ಸೆಂಟ್ರಲ್ ಸ್ಟ್ಯಾಂಡರ್ಡ್ ಟೈಮ್) ಚಿಕಾಗೋದ ಕ್ಯಾಂಪ್‌ಬೆಲ್ ಅವೆನ್ಯೂನಲ್ಲಿರುವ ಆತನ ಮನೆಯ ಬಳಿ ಅಲಿಯನ್ನು ಅವರ ಮೂವರು ದಾಳಿಕೋರರು ಹಿಂಬಾಲಿಸುತ್ತಿರುವುದನ್ನು ಸಿಸಿಟಿವಿ ದೃಶ್ಯಾವಳಿಯಲ್ಲಿ ಕಾಣಬಹುದು.

ಮಜಾಹಿರ್ ಅಲಿ ಹಣೆ, ಮೂಗು ಮತ್ತು ಬಾಯಿಯಲ್ಲಿ ರಕ್ತ ಹರಿಯುತ್ತಿದ್ದು ನಾಲ್ಕು ಜನರು ನನ್ನ ಮೇಲೆ ದಾಳಿ ಮಾಡಿದರು. ನಾನು ನನ್ನ ಕೈಯಲ್ಲಿ ಆಹಾರದ ಪ್ಯಾಕೆಟ್‌ನೊಂದಿಗೆ ಮನೆಗೆ ಮರಳುತ್ತಿದ್ದೆ. ನಾನು ನನ್ನ ಮನೆಯ ಬಳಿ ಬಂದಾಗ ನಾಲ್ಕು ಜನರು ನನ್ನ ಮೇಲೆ ದಾಳಿ ಮಾಡಿದರು. ಈ ವೇಳೆ ಸಹಾಯಕ್ಕಾಗಿ ನಾನು ಕೂಗಿಕೊಂಡೆ ಎಂದು ಹೇಳಿದ್ದಾರೆ.

ಕಳೆದ ವಾರ, ಓಹಿಯೋದ ಲಿಂಡರ್ ಸ್ಕೂಲ್ ಆಫ್ ಬ್ಯುಸಿನೆಸ್‌ನಲ್ಲಿ ವಿದ್ಯಾರ್ಥಿಯಾಗಿದ್ದ 19 ವರ್ಷದ ಶ್ರೇಯಸ್ ರೆಡ್ಡಿ ಬೆನಿಗರ್ ಶವವಾಗಿ ಪತ್ತೆಯಾಗಿದ್ದರು. ಅದೇ ವಾರದ ಆರಂಭದಲ್ಲಿ, ಪರ್ಡ್ಯೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ನೀಲ್ ಆಚಾರ್ಯ ಶವವಾಗಿ ಪತ್ತೆಯಾಗಿದ್ದರು. ಜನವರಿ 16ರಂದು ಜಾರ್ಜಿಯಾದ ಲಿಥೋನಿಯಾದಲ್ಲಿ ಹರಿಯಾಣದ ವಿವೇಕ್ ಸೈನಿ ಅವರನ್ನು ನಿರಾಶ್ರಿತ ವ್ಯಕ್ತಿಯೊಬ್ಬರು ಹೊಡೆದು ಸಾಯಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT