ಇಮ್ರಾನ್ ಖಾನ್. 
ವಿದೇಶ

ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆ: ಜೈಲಿನಿಂದಲೇ ಅಂಚೆ ಮತಪತ್ರದ ಮೂಲಕ ಇಮ್ರಾನ್ ಖಾನ್ ಮತ ಚಲಾವಣೆ

ತೀವ್ರ ಆರ್ಥಿಕ ಬಿಕ್ಕಟ್ಟಿನಿಂದ ತತ್ತರಿಸಿರುವ ಪಾಕಿಸ್ತಾನದಲ್ಲಿ ಗುರುವಾರ ಸಾರ್ವತ್ರಿಕ ಚುನಾವಣೆ ಆರಂಭಗೊಂಡಿದ್ದು, ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್‌ ಖಾನ್ ಸೇರಿದಂತೆ ಇತರ ಪ್ರಮುಖ ಬಂಧಿತ ರಾಜಕೀಯ ವ್ಯಕ್ತಿಗಳು ಅಂಚೆ ಮತಪತ್ರದ ಮೂಲಕ ಜೈಲಿನಿಂದಲೇ ಮತ ಚಲಾಯಿಸಿದ್ದಾರೆ ಎಂದು ವರದಿಗಳಿಂದ ತಿಳಿದುಬಂದಿದೆ.

ಇಸ್ಲಾಮಾಬಾದ್‌: ತೀವ್ರ ಆರ್ಥಿಕ ಬಿಕ್ಕಟ್ಟಿನಿಂದ ತತ್ತರಿಸಿರುವ ಪಾಕಿಸ್ತಾನದಲ್ಲಿ ಗುರುವಾರ ಸಾರ್ವತ್ರಿಕ ಚುನಾವಣೆ ಆರಂಭಗೊಂಡಿದ್ದು, ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್‌ ಖಾನ್ ಸೇರಿದಂತೆ ಇತರ ಪ್ರಮುಖ ಬಂಧಿತ ರಾಜಕೀಯ ವ್ಯಕ್ತಿಗಳು ಅಂಚೆ ಮತಪತ್ರದ ಮೂಲಕ ಜೈಲಿನಿಂದಲೇ ಮತ ಚಲಾಯಿಸಿದ್ದಾರೆ ಎಂದು ವರದಿಗಳಿಂದ ತಿಳಿದುಬಂದಿದೆ.

ಅಂಚೆ ಮೂಲಕ ಮತ ಚಲಾಯಿಸಿದ ರಾಜಕೀಯ ನಾಯಕರಲ್ಲಿ ಮಾಜಿ ವಿದೇಶಾಂಗ ಸಚಿವ ಶಾ ಮಹಮ್ಮದ್‌ ಖುರೇಷಿ, ಪಂಜಾಬ್ ಮಾಜಿ ಮುಖ್ಯಮಂತ್ರಿ ಚೌಧರಿ ಪರ್ವೇಜ್ ಇಲಾಹಿ, ಅವಾಮಿ ಮುಸ್ಲಿಂ ಲೀಗ್ ಮುಖ್ಯಸ್ಥ ಶೇಖ್ ರಶೀದ್ ಮತ್ತು ಮಾಜಿ ಸಚಿವ ಫವಾದ್ ಚೌಧರಿ ಅವರು ಸೇರಿದ್ದಾರೆ ಎಂದು ಅಡಿಯಾಲಾ ಜೈಲಿನ ಮೂಲಗಳು ತಿಳಿಸಿವೆ.

ಗಣಕೀಕೃತ ರಾಷ್ಟ್ರೀಯ ಗುರುತಿನ ಚೀಟಿ(ಸಿಎನ್‌ಐಸಿ) ಹೊಂದದೆ ಇರುವ ಕಾರಣ ಅಡಿಯಾಲಾ ಜೈಲಿನಲ್ಲಿರುವ 7 ಸಾವಿರ ಕೈದಿಗಳಲ್ಲಿ 100ಕ್ಕಿಂತಲೂ ಕಡಿಮೆ ಕೈದಿಗಳು ಮತ ಚಲಾಯಿಸಲು ಅರ್ಹತೆ ಪಡೆದಿದ್ದರು ಎಂದು ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ.

ಗುರುವಾರ ಬೆಳಿಗ್ಗೆ 8 ಗಂಟೆಗೆ ಮತದಾನ ಪ್ರಕ್ರಿಯೆ ಆರಂಭವಾಗಿ ಸಂಜೆ 5 ಗಂಟೆಗೆ ಮುಕ್ತಾಯಗೊಳ್ಳಲಿದೆ. ಚುನಾವಣೆ ಇರುವ ಕಾರಣ ದೇಶದಾದ್ಯಂತ ಸಾರ್ವತ್ರಿಕ ರಜೆ ಘೋಷಿಸಲಾಗಿದೆ.

ಪಾಕಿಸ್ತಾನ ಚುನಾವಣಾ ಆಯೋಗದ ಪ್ರಕಾರ, ‘4,807 ಪುರುಷರು, 312 ಮಹಿಳೆಯರು ಮತ್ತು ಇಬ್ಬರು ಲಿಂಗತ್ವ ಅಲ್ಪಸಂಖ್ಯಾತರು ಸೇರಿ 5,121 ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದಾರೆ.

ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಅವರು ಜೈಲಿನಲ್ಲಿ ಇರುವ ಕಾರಣ ಮಾಜಿ ಪ್ರಧಾನಿ ನವಾಜ್‌ ಷರೀಫ್‌ ಅವರ ಪಾಕಿಸ್ತಾನ್‌ ಮುಸ್ಲಿಂ ಲೀಗ್‌–ನವಾಜ್(ಪಿಎಂಎಲ್‌–ಎನ್‌)  ಪಕ್ಷವು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮುವ ಸಾಧ್ಯತೆ ಹೆಚ್ಚಾಗಿದೆ. 74 ವರ್ಷದ ಷರೀಫ್‌ ದಾಖಲೆಯ ನಾಲ್ಕನೇ ಬಾರಿಗೆ ಪ್ರಧಾನಿ ಪಟ್ಟಕ್ಕೇರುವ ಉಮೇದಿನಲ್ಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT