ಇಮ್ರಾನ್ ಖಾನ್ ಬೆಂಬಲಿಗರ ಪ್ರತಿಭಟನೆ 
ವಿದೇಶ

ಪಾಕಿಸ್ತಾನ ಚುನಾವಣೆ: ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಇಮ್ರಾನ್ ಖಾನ್ ಪಕ್ಷ ಕರೆ

ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಅಧ್ಯಕ್ಷ ಬ್ಯಾರಿಸ್ಟರ್ ಗೋಹರ್ ಅಲಿ ಖಾನ್ ಅವರು ಭಾನುವಾರ ಚುನಾವಣಾಧಿಕಾರಿಗಳ (ಆರ್‌ಒ) ವಿರುದ್ಧ ರಾಷ್ಟ್ರ ವ್ಯಾಪಿ ಶಾಂತಿಯುತ ಪ್ರತಿಭಟನೆಗೆ ಕರೆ ನೀಡಿದ್ದಾರೆ ಎಂದು ಪಾಕಿಸ್ತಾನ ಮೂಲದ ದಿ ಎಕ್ಸ್‌ಪ್ರೆಸ್ ಟ್ರಿಬ್ಯೂನ್ ವರದಿ ಮಾಡಿದೆ.

ಇಸ್ಲಾಮಾಬಾದ್: ಪಾಕಿಸ್ತಾನ ಸಾರ್ವತ್ರಿಕ ಚುನಾವಣೆ ಫಲಿತಾಂಶ ಪ್ರಕಟವಾಗಿ ಮೂರು ದಿನ ಕಳೆದಿದ್ದರೂ ಸರ್ಕಾರ ರಚನೆ ಸಾಧ್ಯವಾಗಿಲ್ಲ. ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಅಧ್ಯಕ್ಷ ಬ್ಯಾರಿಸ್ಟರ್ ಗೋಹರ್ ಅಲಿ ಖಾನ್ ಅವರು ಭಾನುವಾರ ಚುನಾವಣಾಧಿಕಾರಿಗಳ (ಆರ್‌ಒ) ವಿರುದ್ಧ ರಾಷ್ಟ್ರ ವ್ಯಾಪಿ ಶಾಂತಿಯುತ ಪ್ರತಿಭಟನೆಗೆ ಕರೆ ನೀಡಿದ್ದಾರೆ ಎಂದು ಪಾಕಿಸ್ತಾನ ಮೂಲದ ದಿ ಎಕ್ಸ್‌ಪ್ರೆಸ್ ಟ್ರಿಬ್ಯೂನ್ ವರದಿ ಮಾಡಿದೆ.

ಫೆಬ್ರವರಿ 8 ರ ಚುನಾವಣೆಯ ನಂತರ 'ಗುಲಾಮಗಿರಿ ಸ್ವೀಕಾರಾರ್ಹವಲ್ಲ' ಎಂಬ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ದೃಷ್ಟಿಯಲ್ಲಿ ಪಾಕಿಸ್ತಾನದ ಜನರು ಸಂಪೂರ್ಣ ವಿಶ್ವಾಸ ಹೊಂದಿದ್ದಾರೆ. ಮತ ಎಣಿಕೆ ದಿನದಂದು ಎದುರಿಸಿದ ಸವಾಲುಗಳ ಹೊರತಾಗಿಯೂ, ಜನರು ಪಿಟಿಐ ಪರವಾಗಿ ಸ್ಪಷ್ಟ ಮತ್ತು ಪಾರದರ್ಶಕ ಜನಾದೇಶವನ್ನು ಪ್ರದರ್ಶಿಸಿದ್ದಾರೆ ಎಂದು ಗೋಹರ್ ಅಲಿಖಾನ್ ಹೇಳಿದ್ದಾರೆ. 

ಆರ್‌ಒಗಳು ಮತ್ತೊಮ್ಮೆ ತಮ್ಮ ಅಧಿಕಾರವನ್ನು ಕಸಿದುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದು, ಚುನಾವಣಾ ಫಲಿತಾಂಶಗಳನ್ನು ತಿರುಚುವ ಮೂಲಕ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ ಪ್ರಯತ್ನಗಳನ್ನು ಖಂಡಿಸಿದರು. ಅಂತಹ ಯಾವುದೇ ಕ್ರಮವು ಪಾಕಿಸ್ತಾನಕ್ಕೆ ಹಾನಿಕರ ಮತ್ತು ಜನರಿಗೆ ಸ್ವೀಕಾರಾರ್ಹವಲ್ಲ, 'ತಮ್ಮ ಮತದಾನದ ಹಕ್ಕುಗಳ ಉಲ್ಲಂಘನೆಯನ್ನು ಯಾರು ಸಹಿಸುವುದಿಲ್ಲ' ಎಂದು ಅಲಿ ಖಾನ್ ಎಚ್ಚರಿಸಿದ್ದಾರೆ.

'ಜನಾದೇಶವನ್ನು ರಕ್ಷಿಸುವ ಮೂಲಭೂತ ಉದ್ದೇಶಕ್ಕಾಗಿ ಸಾಂವಿಧಾನಿಕ, ಪ್ರಜಾಪ್ರಭುತ್ವ ಮತ್ತು ರಾಜಕೀಯ ಹಕ್ಕುಗಳನ್ನು' ಬಳಸಿಕೊಳ್ಳುವ ಪ್ರಾಮುಖ್ಯತೆಯನ್ನು ಅವರು ಎತ್ತಿ ತೋರಿಸಿದರು ಎಂದು ಎಕ್ಸ್‌ಪ್ರೆಸ್ ಟ್ರಿಬ್ಯೂನ್ ವರದಿ ಮಾಡಿದೆ.

ಕೇಂದ್ರ, ಪಂಜಾಬ್ ಮತ್ತು ಖೈಬರ್ ಪಖ್ತುಂಖ್ವಾದಲ್ಲಿ ಸ್ಪಷ್ಟ ಬಹುಮತ ಗಳಿಸುವುದು 'ಪಿಟಿಐನ ಸಾಂವಿಧಾನಿಕ ಮತ್ತು ಪ್ರಜಾಸತ್ತಾತ್ಮಕ ಹಕ್ಕು' ಎಂದು ಪಿಟಿಐ ಅಧ್ಯಕ್ಷರು ಪ್ರತಿಪಾದಿಸಿದ್ದಾರೆ.'ಜನಾದೇಶದ ಸಂಪೂರ್ಣ ಗೌರವವನ್ನು ಕಾಪಾಡುವುದು ಪಾಕಿಸ್ತಾನದ ಹಿತದೃಷ್ಟಿಯಿಂದ ಮತ್ತು ಎಲ್ಲಾ ಸಂದರ್ಭಗಳಲ್ಲಿಯೂ ಅದನ್ನು ಕಾಪಾಡಿಕೊಳ್ಳಬೇಕು' ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT