ಅಮೆರಿಕಾದಲ್ಲಿ ಭಾರತೀಯ ಮೂಲದ ಕುಟುಂಬದ ಶವಪತ್ತೆ 
ವಿದೇಶ

ಅಮೆರಿಕದಲ್ಲಿ ಭಾರತೀಯ ಮೂಲದ ದಂಪತಿ, ಅವಳಿ ಮಕ್ಕಳು ಶವವಾಗಿ ಪತ್ತೆ!

ಅಮೆರಿಕದಲ್ಲಿ ಕೇರಳ ಮೂಲದ ದಂಪತಿ ಹಾಗೂ ಅವರ  ಅವಳಿ ಮಕ್ಕಳು ಶವವಾಗಿ ಪತ್ತೆಯಾಗಿದ್ದಾರೆ. ಆನಂದ್ ಸುಜಿತ್ ಹೆನ್ರಿ ಹಾಗೂ ಪತ್ನಿ ಆಲಿಸ್ ಪ್ರಿಯಾಂಕಾ ಮತ್ತು 4 ವರ್ಷದ ಇಬ್ಬರು ಅವಳಿ ಮಕ್ಕಳು ಮೃತಪಟ್ಟಿದ್ದಾರೆ.

ನವದೆಹಲಿ: ಅಮೆರಿಕದಲ್ಲಿ ಕೇರಳ ಮೂಲದ ದಂಪತಿ ಹಾಗೂ ಅವರ  ಅವಳಿ ಮಕ್ಕಳು ಶವವಾಗಿ ಪತ್ತೆಯಾಗಿದ್ದಾರೆ. ಆನಂದ್ ಸುಜಿತ್ ಹೆನ್ರಿ ಹಾಗೂ ಪತ್ನಿ ಆಲಿಸ್ ಪ್ರಿಯಾಂಕಾ ಮತ್ತು 4 ವರ್ಷದ ಇಬ್ಬರು ಅವಳಿ ಮಕ್ಕಳು ಮೃತಪಟ್ಟಿದ್ದಾರೆ.

ಸಂಬಂಧಿಕರು ಕರೆ ಮಾಡಿದಾಗ ರಿಸೀವ್ ಮಾಡದ ಕಾರಣ ಅವರು ಮನೆಗೆ ಬಂದಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಮನೆಗೆ ಬಂದು ತಪಾಸಣೆ ನಡೆಸಿದಾಗ ದಂಪತಿ ಶವ ಬಾತ್​ ರೂಮ್​ನಲ್ಲಿ ಕಂಡುಬಂದಿದೆ. ಇಬ್ಬರು ಮಕ್ಕಳು ಕೋಣೆಯಲ್ಲಿ ಶವವಾಗಿದ್ದರು.

ಸ್ಯಾನ್ ಮಾಟಿಯೊ ಪೊಲೀಸರ ಪ್ರಕಾರ, ಇಬ್ಬರು ಗುಂಡೇಟಿನಿಂದ ಸಾವನ್ನಪ್ಪಿದ್ದಾರೆ. ಇನ್ನಿಬ್ಬರ ಸಾವಿಗೆ ಕಾರಣ ತಿಳಿದು ಬಂದಿಲ್ಲ. ಪೊಲೀಸರು ಪ್ರಕರಣವನ್ನು ಕೊಲೆ- ಆತ್ಮಹತ್ಯೆ ಎಂದು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಆನಂದ್ ಮತ್ತು ಆಲಿಸ್ ಇಬ್ಬರೂ ಐಟಿ ವೃತ್ತಿಪರರಾಗಿದ್ದು, ಕಳೆದ ಒಂಬತ್ತು ವರ್ಷಗಳಿಂದ ಅಮೇರಿಕಾದಲ್ಲಿ ನೆಲೆಸಿದ್ದರು. ಆನಂದ್ ಸಾಫ್ಟ್‌ವೇರ್ ಇಂಜಿನಿಯರ್ ಮತ್ತು ಆಲಿಸ್ ಹಿರಿಯ ವಿಶ್ಲೇಷಕರಾಗಿದ್ದರು. ಅವರು ಎರಡು ವರ್ಷಗಳ ಹಿಂದೆ ನ್ಯೂಜೆರ್ಸಿಯಿಂದ ಸ್ಯಾನ್ ಮಾಟಿಯೊ ಕೌಂಟಿಗೆ ತೆರಳಿದ್ದರು.

ಸಾಫ್ಟ್‌ವೇರ್ ಎಂಜಿನಿಯರ್ ಆನಂದ್ ಮತ್ತು ಹಿರಿಯ ವಿಶ್ಲೇಷಕ ಆಲಿಸ್ ಎರಡು ವರ್ಷಗಳ ಹಿಂದೆ ನ್ಯೂಜೆರ್ಸಿಯಿಂದ ಸ್ಯಾನ್ ಮ್ಯಾಟಿಯೊ ಕೌಂಟಿಗೆ ಸ್ಥಳಾಂತರಗೊಂಡಿದ್ದರು. ನೆರೆಹೊರೆಯವರು ಹಾಗೂ ಸಹೋದ್ಯೋಗಿಗಳು ಇವರು ನಮಗೆ ಉತ್ತಮ ಸ್ನೇಹಿತರಾಗಿದ್ದರು, ಒಳ್ಳೆಯವರು ಎಂದೇ ಹೇಳಿದ್ದಾರೆ.

ನ್ಯಾಯಾಲಯದ ದಾಖಲೆ ಪ್ರಕಾರ ಆನಂದ್ ಡಿಸೆಂಬರ್ 2016ರಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಬಳಿಕ ಅದಲ್ಲಿಗೇ ನಿಂತಿತ್ತು. ಸ್ಯಾನ್ ಮ್ಯಾಟಿಯೊ ಕೌಂಟಿಯ ಕ್ರಿಮಿನಲ್ ಇನ್ವೆಸ್ಟಿಗೇಷನ್ ಬ್ಯೂರೋ (CIB) ಪ್ರಕರಣವನ್ನು ಕೈಗೆತ್ತಿಕೊಂಡಿದೆ. ಮೃತದೇಹಗಳನ್ನು ಸ್ಯಾನ್ ಮ್ಯಾಟಿಯೊ ಕೌಂಟಿ ಕರೋನರ್ ಅವರ ವಶಕ್ಕೆ ತೆಗೆದುಕೊಳ್ಳಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT