ರಷ್ಯಾ ವಿಪಕ್ಷ ನಾಯಕ ಅಲೆಕ್ಸಿ ನವಲ್ನಿ  PTI
ವಿದೇಶ

ರಷ್ಯಾ ವಿಪಕ್ಷ ನಾಯಕ, ಪುಟಿನ್ ಟೀಕಾಕಾರ ಅಲೆಕ್ಸಿ ನವಲ್ನಿ ಜೈಲಿನಲ್ಲಿ ನಿಧನ

ರಷ್ಯಾ ವಿಪಕ್ಷ ನಾಯಕ, ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಟೀಕಾಕಾರ ಅಲೆಕ್ಸಿ ನವಲ್ನಿ ಜೈಲಿನಲ್ಲಿ ಮೃತಪಟ್ಟಿದ್ದಾರೆ.

ಮಾಸ್ಕೋ: ರಷ್ಯಾ ವಿಪಕ್ಷ ನಾಯಕ, ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಟೀಕಾಕಾರ ಅಲೆಕ್ಸಿ ನವಲ್ನಿ ಜೈಲಿನಲ್ಲಿ ಮೃತಪಟ್ಟಿದ್ದಾರೆ. ಅಲ್ ಜಝೀರ ಈ ಬಗ್ಗೆ ಶುಕ್ರವಾರ (ಫೆ.16 ರಂದು) ರಷ್ಯಾದ ಸರ್ಕಾರಿ ಮಾಧ್ಯಮವನ್ನು ಉಲ್ಲೇಖಿಸಿ ವರದಿ ಪ್ರಕಟಿಸಿದೆ. ಯಮಲೋ-ನೆನೆಟ್ಸ್ ಪ್ರಾಂತ್ಯದಲ್ಲಿ ರಷ್ಯಾ ವಿಪಕ್ಷ ನಾಯಕ ಜೈಲು ಶಿಕ್ಷೆ ಅನುಭವಿಸುತ್ತಿದ್ದರು.

ವಾಕಿಂಗ್ ಬಳಿಕ ಅಲೆಕ್ಸಿ ನವಲ್ನಿ ಅಸ್ವಸ್ಥರಾದರು ತಕ್ಷಣವೇ ಪ್ರಜ್ಞಾಹೀನರಾದರು. ತಕ್ಷಣವೇ ವೈದ್ಯಕೀಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರಾದರೂ ಅವರು ಬದುಕಿ ಉಳಿಯಲಿಲ್ಲ ಎಂದು ಜೈಲಿನ ಅಧಿಕಾರಿಗಳು ಹೇಳಿದ್ದಾರೆ. ಜೈಲು ಶಿಕ್ಷೆಗೆ ಗುರಿಯಾಗಿದ್ದ ಖೈದಿಯ ಸಾವನ್ನು ವೈದ್ಯರು ದೃಢಪಡಿಸಿದ್ದಾರೆ. ಸಾವಿಗೆ ನಿಖರ ಕಾರಣಗಳು ತಿಳಿದುಬಂದಿಲ್ಲ.

ಈ ಜನವರಿಯಲ್ಲಿ ಹೊಸ ವರ್ಷದ ಸಂದರ್ಭದಲ್ಲಿ, ಅವರು ಸಾಮಾಜಿಕ ಮಾಧ್ಯಮದ ಹೇಳಿಕೆ ಬಿಡುಗಡೆ ಮಾಡಿದ್ದ ಅಲೆಕ್ಸಿ ನವಲ್ನಿ, ತಾವು ಜೈಲಿನಲ್ಲಿ ಒಂಟಿತನವನ್ನು ಅನುಭವಿಸುತ್ತಿಲ್ಲ ಮತ್ತು 'ಉತ್ತಮ' ಮನಸ್ಥಿತಿಯಲ್ಲಿರುವುದಾಗಿ ಹೇಳಿದ್ದರು. ಆದರೆ ತಮ್ಮ ಕುಟುಂಬ ಮತ್ತು ಸ್ನೇಹಿತರೊಂದಿಗೆ ವೈಯಕ್ತಿಕವಾಗಿ ಸಮಯ ಕಳೆಯುವುದನ್ನು ಕಳೆದುಕೊಳ್ಳುತ್ತಿರುವುದಾಗಿ ತಿಳಿಸಿದ್ದರು. ಉಗ್ರವಾದದ ಆರೋಪದ ಹಿನ್ನೆಲೆಯಲ್ಲಿ ರಷ್ಯಾ ಕೋರ್ಟ್ ಅವರಿಗೆ 19 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. 2021 ರ ಜನವರಿಯಿಂದ ಅವರು ಜೈಲುವಾಸ ಅನುಭವಿಸುತ್ತಿದ್ದರು. ತಮ್ಮ ವಿರುದ್ಧದ ಆರೋಪಗಳು ರಾಜಕೀಯ ಪ್ರೇರಿತವಾದದ್ದು ಎಂದು ಅಲೆಕ್ಸಿ ನವಲ್ನಿ ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!