ವಾಜಿಮಾದಲ್ಲಿ ನೆಲದಲ್ಲಿ ಬಿರುಕು ಕಾಣಿಸಿಕೊಂಡಿರುವ ಚಿತ್ರ 
ವಿದೇಶ

ಜಪಾನಿನಲ್ಲಿ ಭೂಕಂಪ, ಸುನಾಮಿ ಎಚ್ಚರಿಕೆ: ಮಾಹಿತಿ ಬಯಸುವವರಿಗೆ ನೆರವಾಗಲು ನಿಯಂತ್ರಣ ಕೊಠಡಿ ಸ್ಥಾಪಿಸಿದ ಭಾರತ

ಪ್ರಬಲ ಭೂಕಂಪಗಳ ಸರಣಿಯಿಂದ ತತ್ತರಿಸಿರುವ ಜಪಾನ್ ಸೋಮವಾರ ಸುನಾಮಿ ಎಚ್ಚರಿಕೆ ನೀಡಿದೆ. ರಿಕ್ಟರ್ ಮಾಪಕದಲ್ಲಿ 7.6 ರ ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಹೇಳಲಾಗಿದೆ.

ನವದೆಹಲಿ: ಪ್ರಬಲ ಭೂಕಂಪಗಳ ಸರಣಿಯಿಂದ ತತ್ತರಿಸಿರುವ ಜಪಾನ್ ಸೋಮವಾರ ಸುನಾಮಿ ಎಚ್ಚರಿಕೆ ನೀಡಿದೆ. ರಿಕ್ಟರ್ ಮಾಪಕದಲ್ಲಿ 7.6 ರ ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಹೇಳಲಾಗಿದೆ. ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಟೋಕಿಯೊದಲ್ಲಿನ ಭಾರತೀಯ ರಾಯಭಾರ ಕಚೇರಿಯು ಭೂಕಂಪ ಮತ್ತು ಸುನಾಮಿಯ ಅಪಾಯದ ಬಗ್ಗೆ ಮಾಹಿತಿ ನೀಡಲು ತುರ್ತು ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಿದೆ.

ಜಪಾನ್‌ನಲ್ಲಿ 46,260ಕ್ಕೂ ಹೆಚ್ಚು ಭಾರತೀಯರು ವಾಸಿಸುತ್ತಿದ್ದಾರೆ ಎಂದು ಹೇಳಲಾಗಿದೆ. ಸ್ವದೇಶಕ್ಕೆ ಮರಳಲು ಬಯಸುವ ಭಾರತದ ಕುಟುಂಬಗಳು ಅಥವಾ ಜಪಾನ್‌ನಲ್ಲಿ ಸಹಾಯವನ್ನು ಬಯಸುವವರು ಸಹ ನಿಯಂತ್ರಣ ಕೊಠಡಿಯನ್ನು ಸಂಪರ್ಕಿ ಸಬಹುದು. ಸ್ಥಳಾಂತರ ಆದೇಶಗಳನ್ನು ನಿಕಟವಾಗಿ ಅನುಸರಿಸುವಂತೆ ಜಪಾನ್‌ನ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರು ಜನರನ್ನು ಕೇಳಿಕೊಂಡಿದ್ದಾರೆ.

ಭೂಕಂಪವು ಸಮುದ್ರದಲ್ಲಿ ಉಬ್ಬರವಿಳಿತಕ್ಕೆ ಕಾರಣವಾಗಿದ್ದು, ಕೆಲವು ಜಪಾನ್‌ನ ಸಮುದ್ರದುದ್ದಕ್ಕೂ ಸುಮಾರು ಒಂದು ಮೀಟರ್ ಎತ್ತರದಲ್ಲಿವೆ ಎಂದು ವರದಿಗಳು ತಿಳಿಸಿವೆ. ಈ ಅಲೆಗಳು 3 ಮೀಟರ್ ಎತ್ತರದವರೆಗೆ (10 ಅಡಿಗಿಂತ ಸ್ವಲ್ಪ ಕಡಿಮೆ) ಏರಬಹುದು ಎಂದು ಸುನಾಮಿ ಎಚ್ಚರಿಕೆಯಲ್ಲಿ ಹೇಳಲಾಗಿದೆ. 

ಜಪಾನ್ ನ ಹವಾಮಾನ ಏಜೆನ್ಸಿ ಇಶಿಕಾವಾ, ನಿಗಾಟಾ ಮತ್ತು ಟೊಯಾಮಾ ಸುತ್ತಮುತ್ತಲಿನ ಕರಾವಳಿ ಪ್ರದೇಶಗಳಿಗೆ ಸುನಾಮಿ ಎಚ್ಚರಿಕೆ ನೀಡಿದೆ. ಈಶಾನ್ಯ ಜಪಾನ್‌ನ ಕೆಲವು ಭಾಗಗಳಲ್ಲಿ ಮಾರ್ಚ್ 2011 ರ ಭೂಕಂಪ ಮತ್ತು ಸುನಾಮಿಯ ನಂತರ ಕಂಡುಬಂದ ಮೊದಲ ಎಚ್ಚರಿಕೆಯಾಗಿದೆ. ಭೂಕಂಪದ ಪರಿಣಾಮ ಪ್ರದೇಶಗಳಲ್ಲಿ ಕೆಲವು ಮನೆಗಳಿಗೆ ಹಾನಿಯಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT