ಪತ್ರಕರ್ತರ ಸಾವು 
ವಿದೇಶ

ಗಾಜಾದಲ್ಲಿ ಪತ್ರಕರ್ತರ ಸಾವಿನ ಸಂಖ್ಯೆ ಹೆಚ್ಚಳಕ್ಕೆ ವಿಶ್ವಸಂಸ್ಥೆ ಕಳವಳ!

ಇಸ್ರೇಲ್ ನಡೆಸಿದ ದಾಳಿಯಲ್ಲಿ ಇಬ್ಬರು ಅಲ್ ಜಜೀರಾ ವರದಿಗಾರರು ಮೃತಪಟ್ಟಿದ್ದು ಗಾಜಾದಲ್ಲಿ ನಡೆಯುತ್ತಿರುವ ಯುದ್ಧದಲ್ಲಿ ಪತ್ರಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಸಾವನ್ನಪ್ಪುತ್ತಿರುವ ಬಗ್ಗೆ ವಿಶ್ವಸಂಸ್ಥೆ ಕಳವಳ ವ್ಯಕ್ತಪಡಿಸಿದೆ.

ಜಿನೀವಾ: ಇಸ್ರೇಲ್ ನಡೆಸಿದ ದಾಳಿಯಲ್ಲಿ ಇಬ್ಬರು ಅಲ್ ಜಜೀರಾ ವರದಿಗಾರರು ಮೃತಪಟ್ಟಿದ್ದು ಗಾಜಾದಲ್ಲಿ ನಡೆಯುತ್ತಿರುವ ಯುದ್ಧದಲ್ಲಿ ಪತ್ರಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಸಾವನ್ನಪ್ಪುತ್ತಿರುವ ಬಗ್ಗೆ ವಿಶ್ವಸಂಸ್ಥೆ ಕಳವಳ ವ್ಯಕ್ತಪಡಿಸಿದೆ.

ತನ್ನ ಇಬ್ಬರು ಪ್ಯಾಲೆಸ್ತೀನ್ ಪತ್ರಕರ್ತರನ್ನು ದಕ್ಷಿಣದ ನಗರ ರಫಾದಲ್ಲಿ ಹತ್ಯೆ ಮಾಡಲಾಗಿದೆ. ಇದು ಇಸ್ರೇಲಿ "ಉದ್ದೇಶಿತ ಹತ್ಯೆ" ಎಂದು ಅಲ್ ಜಜೀರಾ ಹೇಳಿಕೊಂಡಿದೆ.

ಗಾಜಾದಲ್ಲಿ ಮಾಧ್ಯಮ ವರದಿಗಾರರು ಹೆಚ್ಚಿನ ಸಂಖ್ಯೆಯಲ್ಲಿ ಸಾವನ್ನಪ್ಪುತ್ತಿರುವ ಬಗ್ಗೆ ತುಂಬಾ ಕಳವಳವಿದೆ ಎಂದು ವಿಶ್ವಸಂಸ್ಥೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ. 

ಕಾರಿನ ಮೇಲೆ ನಡೆದ IDF ದಾಳಿಯಲ್ಲಿ  ಹಮ್ಜಾ ವೇಲ್ ದಹದೌಹ್ ಮತ್ತು ಮುಸ್ತಫಾ ಅಬು ತುರಿಯಾ ಮೃತಪಟ್ಟಿದ್ದು ಇದೇ ರೀತಿ ಮೃತಪಟ್ಟಿರುವ ಪತ್ರಕರ್ತರ ಹತ್ಯೆಗಳನ್ನು ಸಂಪೂರ್ಣ ಸ್ವತಂತ್ರವಾಗಿ ತನಿಖೆ ಮಾಡಬೇಕು. ಅಂತರರಾಷ್ಟ್ರೀಯ ಕಾನೂನಿನ ಕಟ್ಟುನಿಟ್ಟಾದ ಅನುಸರಣೆಯನ್ನು ಖಚಿತಪಡಿಸಿಕೊಳ್ಳಬೇಕು ಮತ್ತು ಉಲ್ಲಂಘನೆಗಳನ್ನು ಕಾನೂನು ಕ್ರಮ ಜರುಗಿಸಬೇಕು ಎಂದು ಅದು ಹೇಳಿದೆ.

ಎಎಫ್‌ಪಿ ಮತ್ತು ಇತರ ಸುದ್ದಿ ಸಂಸ್ಥೆಗಳಿಗೆ ಸ್ವತಂತ್ರ ವೀಡಿಯೊ ಪತ್ರಕರ್ತರಾಗಿ ಕೆಲಸ ಮಾಡಿದ ದಹದೌ ಮತ್ತು ತುರಿಯಾ ಅವರು ಗಾಜಾ ಪಟ್ಟಿಯಲ್ಲಿರುವ ಅಲ್ ಜಜೀರಾಗಾಗಿ ತಮ್ಮ ಕರ್ತವ್ಯವನ್ನು ನಿರ್ವಹಿಸಲು ಹೋಗುತ್ತಿದ್ದಾಗ ಹತ್ಯೆಯಾಗಿದ್ದಾರೆ. ಇನ್ನು ಮೂರನೇ ಫ್ರೀಲಾನ್ಸ್ ಪತ್ರಕರ್ತ ಹಝೆಮ್ ರಜಬ್ ಗಂಭೀರವಾಗಿ ಗಾಯಗೊಂಡಿದ್ದಾರೆ  ಎಂದು ನೆಟ್‌ವರ್ಕ್ ಹೇಳಿದೆ.

ಕಾರಿನ ಮೇಲೆ ರಾಕೆಟ್ ಮೂಲಕ ದಾಳಿ ನಡೆಸಲಾಯಿತು ಎಂದು ಪ್ರತ್ಯಕ್ಷದರ್ಶಿಗಳು ಎಎಫ್‌ಪಿಗೆ ತಿಳಿಸಿದ್ದಾರೆ. ಒಂದು ವಾಹನದ ಮುಂಭಾಗಕ್ಕೆ ಮತ್ತು ಇನ್ನೊಂದು ಚಾಲಕನ ಪಕ್ಕದಲ್ಲಿ ಕುಳಿತಿದ್ದ ದಹದೌಹ್‌ಗೆ ತಗುಲಿತ್ತು.

ಕಳೆದ ಅಕ್ಟೋಬರ್ 7ರ ಹಮಾಸ್ ನಡೆಸಿದ್ದ ದಾಳಿಯಲ್ಲಿ ಇಸ್ರೇಲ್‌ನಲ್ಲಿ ಸುಮಾರು 1,140 ಮಂದಿ ಮೃತಪಟ್ಟಿದ್ದರು. ನಂತರ ಗಾಜಾದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 20 ಸಾವಿರಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

SCROLL FOR NEXT