ನೆಲಕ್ಕೆ ಅಪ್ಪಳಿಸಿದ ಯುದ್ಧ ಕೈದಿಗಳಿಂದ್ದ ರಷ್ಯಾ ಯುದ್ಧ ವಿಮಾನ 
ವಿದೇಶ

ನೆಲಕ್ಕೆ ಅಪ್ಪಳಿಸಿದ ರಷ್ಯಾ ಯುದ್ಧ ವಿಮಾನ, 65 ಉಕ್ರೇನ್ ಯುದ್ಧ ಕೈದಿಗಳ ದಾರುಣ ಸಾವು!

ಯುದ್ಧ ಕೈದಿಗಳಿಂದ್ದ ರಷ್ಯಾ ಯುದ್ಧ ವಿಮಾನವೊಂದು ನೆಲಕ್ಕೆ ಅಪ್ಪಳಿಸಿದ್ದು, ಈ ದುರ್ಘಟನೆಯಲ್ಲಿ ಉಕ್ರೇನ್ ಸುಮಾರು 65 ಮಂದಿ ಯುದ್ಧ ಕೈದಿಗಳ ದಾರುಣ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

ಮಾಸ್ಕೋ: ಯುದ್ಧ ಕೈದಿಗಳಿಂದ್ದ ರಷ್ಯಾ ಯುದ್ಧ ವಿಮಾನವೊಂದು ನೆಲಕ್ಕೆ ಅಪ್ಪಳಿಸಿದ್ದು, ಈ ದುರ್ಘಟನೆಯಲ್ಲಿ ಉಕ್ರೇನ್ ಸುಮಾರು 65 ಮಂದಿ ಯುದ್ಧ ಕೈದಿಗಳ ದಾರುಣ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

65 ಉಕ್ರೇನ್ ಯುದ್ಧ ಕೈದಿಗಳನ್ನು (65 Ukrainian Prisoners) ಹೊತ್ತೊಯ್ಯುತ್ತಿದ್ದ ಸೇನಾ ಸಾರಿಗೆ ವಿಮಾನವು ಉಕ್ರೇನ್ ಗಡಿಯ ಬೆಲ್ಗೊರೊಡ್ ಪ್ರದೇಶದಲ್ಲಿ ಅಪಘಾತಕ್ಕೀಡಾಗಿದ್ದು, ವಿಮಾನದಲ್ಲಿದ್ದ ಎಲ್ಲರೂ ಸಾವಿಗೀಡಾಗಿದ್ದಾರೆ. ಈ ವಿಮಾನ ಪತನದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದ್ದು, ಐಎಲ್ - 76 ಸೇನಾ ಸಾರಿಗೆ ವಿಮಾನವು ಬೆಲ್ಗೊರೊಡ್ ಪ್ರದೇಶದಲ್ಲಿ ಮಾಸ್ಕೋ ಸ್ಥಳೀಯ ಕಾಲಾಮಾನ ಪ್ರಕಾರ 11 ಗಂಟೆಗೆ ಪತನವಾಯಿತು ಎಂದು ಮಾಸ್ಕೋ ರಕ್ಷಣಾ ಸಚಿವಾಲಯವು ರಷ್ಯಾದ ಸುದ್ದಿ ಸಂಸ್ಥೆಗೆ ತಿಳಿಸಿದೆ.

ಮೂಲಗಳ ಪ್ರಕಾರ ಪತನಕ್ಕೀಡಾದ ವಿಮಾನದಲ್ಲಿ ಉಕ್ರೇನ್‌ನ 65 ಯುದ್ಧ ಕೈದಿಗಳಿದ್ದರು. ಜತೆಗೆ ಆರು ಸಿಬ್ಬಂದಿ ಹಾಗೂ ಮೂರು ಎಸ್ಕಾರ್ಟ್ಸ್ ಪ್ರಯಾಣಿಸುತ್ತಿದ್ದರು. ವಿನಿಮಯಕ್ಕೆ ಯುದ್ಧ ಕೈದಿಗಳನ್ನು ಬೆಲ್ಗೆರೊಡ್ ಪ್ರದೇಶಕ್ಕೆ ಕರೆದುಕೊಂಡು ಹೋಗಲಾಗುತ್ತಿತ್ತು. ರಷ್ಯಾದ ರಕ್ಷಣಾ ಸಚಿವಾಲಯವು ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಉಕ್ರೇನ್ ವಿರುದ್ಧ ರಷ್ಯಾ ಆರೋಪ
ಈ ದುರ್ಘಟನೆಗೆ ಉಕ್ರೇನ್ ಕಾರಣ ಎಂದು ರಷ್ಯಾ ಆರೋಪಿಸಿದೆ. ವಿಮಾನವನ್ನು ಕೈವ್‌ (ಉಕ್ರೇನ್)ನಿಂದ ಹೊಡೆದುರುಳಿಸಲಾಗಿದೆ. ಇದಕ್ಕೆ ಪಾಶ್ಚಿಮಾತ್ಯ ರಾಷ್ಟ್ರಗಳ ಕ್ಷಿಪಣಿಗಳೇ ಕಾರಣ ಎಂದು ರಷ್ಯಾದ ಸಂಸತ್ತಿನ ಕೆಳಮನೆಯ ಸದಸ್ಯ ವ್ಯಾಚೆಸ್ಲಾವ್ ವೊಲೊಡಿನ್ ಆರೋಪಿಸಿದ್ದಾರೆ. ಅವರು ತಮ್ಮ ಸೈನಿಕರನ್ನು ತಾವೇ ಕೊಂದಿದ್ದಾರೆ. ಮಾನವೀಯ ಕಾರ್ಯಾಚರಣೆಯನ್ನು ನಡೆಸುತ್ತಿದ್ದ ನಮ್ಮ ಪೈಲಟ್‌ಗಳನ್ನು ಹೊಡೆದುರುಳಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಈಶಾನ್ಯದಲ್ಲಿರುವ ಕೊರೊಚಾನ್ಸ್ಕಿ ಜಿಲ್ಲೆಯಲ್ಲಿ ಈ ಅಪಘಾತ ಸಂಭವಿಸಿದ್ದು, ವಿಮಾನ ಪತನವಾದ ಸ್ಥಳಕ್ಕೆ ತನಿಖಾ ತಂಡವನ್ನು ಕಳುಹಿಸಲಾಗಿದೆ. ತುರ್ತು ಸೇವೆಗಳನ್ನು ಒದಗಿಸಲಾಗುತ್ತಿದೆ. ನನ್ನ ಪ್ರವಾಸದ ವೇಳಾಪಟ್ಟಿಯನ್ನು ಬದಲಿಸಿಕೊಂಡು, ಘಟನಾ ಸ್ಥಳಕ್ಕೆ ಹೋಗುತ್ತಿದ್ದೇನೆ ಎಂದು ಗ್ಲಾಡ್ಕೋವ್ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT