ಇಮ್ರಾನ್ ಖಾನ್(ಸಂಗ್ರಹ ಚಿತ್ರ) 
ವಿದೇಶ

ಸೈಫರ್ ಪ್ರಕರಣ: ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ 10 ವರ್ಷ ಜೈಲು ಶಿಕ್ಷೆ

ದೇಶದ ಗೌಪ್ಯತೆ ಸೋರಿಕೆ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಮಂಗಳವಾರ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ ಎಂದು ಸರ್ಕಾರಿ ಮಾಧ್ಯಮ ಮತ್ತು ಅವರ ಪಕ್ಷದ ವಕ್ತಾರರು ತಿಳಿಸಿದ್ದಾರೆ.

ಇಸ್ಲಾಮಾಬಾದ್: ದೇಶದ ಗೌಪ್ಯತೆ ಸೋರಿಕೆ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಮಂಗಳವಾರ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ ಎಂದು ಸರ್ಕಾರಿ ಮಾಧ್ಯಮ ಮತ್ತು ಅವರ ಪಕ್ಷದ ವಕ್ತಾರರು ತಿಳಿಸಿದ್ದಾರೆ.

ದೇಶದ ಗೌಪ್ಯತೆ ಸೋರಿಕೆಗೆ ಸಂಬಂಧಿಸಿದ ಸೈಫರ್ ಪ್ರಕರಣದಲ್ಲಿ ಪಾಕಿಸ್ತಾನ ತೆಹ್ರಿಕ್ - ಇ - ಇನ್ಸಾಫ್ ಪಕ್ಷದ ಮುಖ್ಯಸ್ಥ ಇಮ್ರಾನ್ ಖಾನ್ ಮತ್ತು ಉಪಾಧ್ಯಕ್ಷ( ಶಾ ಮಹಮೂದ್) ಖುರೇಷಿ ಅವರಿಗೆ ತಲಾ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ ಎಂದು ಪಕ್ಷದ ವಕ್ತಾರರು ಎಎಫ್‌ಪಿಗೆ ತಿಳಿಸಿದ್ದಾರೆ.

ಸಾರ್ವತ್ರಿಕ ಚುನಾವಣೆ ಹೊಸ್ತಿಲಲ್ಲಿ ಇರುವ ಪಾಕಿಸ್ತಾನದಲ್ಲಿ ಪಿಟಿಐ ಪಕ್ಷದ ದಿಗ್ಗಜ ನಾಯಕರು ಜೈಲು ಸೇರುವಂತಾಗಿದ್ದು, ರಾಜಕೀಯವಾಗಿ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿದೆ. 

ಇಮ್ರಾನ್ ಖಾನ್ ಅವರು ಪ್ರಧಾನಿ ಆಗಿದ್ದ ವೇಳೆ ಅಮೆರಿಕ ಸರ್ಕಾರದ ವಿದೇಶಾಂಗ ಇಲಾಖೆ ಹಾಗೂ ಪಾಕಿಸ್ತಾನದ ರಾಯಭಾರಿ ನಡುವೆ ನಡೆದಿದ್ದ ಮಾತುಕತೆಯ ವಿವರಗಳನ್ನು ಬಹಿರಂಗವಾಗಿ ದೇಶದ ಜನತೆ ಮುಂದೆ ಕಾರ್ಯಕ್ರಮವೊಂದರಲ್ಲಿ ವಿವರಿಸಿದ್ದರು.

ಸಾಮಾನ್ಯವಾಗಿ ಒಂದು ದೇಶ ಮತ್ತೊಂದು ದೇಶದ ಜೊತೆ ಅಧಿಕೃತ ವಿದೇಶಾಂಗ ವ್ಯವಹಾರದ ಮಾತುಕತೆ, ರಾಯಭಾರಿ ಮಟ್ಟದ ಸಂವಹನಗಳು ನಡೆದಾಗ ಅವು ಗುಪ್ತ ಲಿಪಿಯಲ್ಲಿ ಇರುತ್ತವೆ. ಅದನ್ನು ಸಾಮಾನ್ಯ ಭಾಷೆಗೆ ಪರಿವರ್ತಿಸಿ ಬಹಿರಂಗಗೊಳಿಸುವಂತಿಲ್ಲ. ಆದರೆ, ಇಮ್ರಾನ್ ಖಾನ್ ಈ ದಾಖಲೆಯನ್ನು ಬಹಿರಂಗ ಮಾಡುವ ಮೂಲಕ ಸರ್ಕಾರಿ ರಹಸ್ಯ ದಾಖಲೆ ಕಾಯ್ದೆ ಉಲ್ಲಂಘನೆ ಮಾಡಿದ್ಧಾರೆ ಎಂದು ಆರೋಪಿಸಲಾಗಿತ್ತು. ಈ ಸಂಬಂಧ ತನಿಖೆ ನಡೆಸಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಕೆ ಮಾಡಲಾಗಿತ್ತು. ಇದರ ಆಧಾರದ ಮೇಲೆ ಇದೀಗ ನ್ಯಾಯಾಲಯ ಇಮ್ರಾನ್‌ ಖಾನ್‌ಗೆ 10 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?