ಲಂಡನ್‌ನಲ್ಲಿ ಹೋಲ್ಬೋರ್ನ್ ಮತ್ತು ಸೇಂಟ್ ಪ್ಯಾನ್‌ಕ್ರಾಸ್ ಕ್ಷೇತ್ರಕ್ಕೆ ಚುನಾಯಿತರಾದ ನಂತರ ಬ್ರಿಟನ್‌ನ ಲೇಬರ್ ಪಕ್ಷದ ನಾಯಕ ಕೀರ್ ಸ್ಟಾರ್ಮರ್ ತಮ್ಮ ಬೆಂಬಲಿಗರಿಗೆ ಧನ್ಯವಾದ ಹೇಳಿದರು. 
ವಿದೇಶ

UK Polls: ಜನರು ಬದಲಾವಣೆಗೆ ಸಿದ್ಧರಾಗಿದ್ದಾರೆ, ಮತದಾರರಿಗೆ ಧನ್ಯವಾದಗಳು- ಲೇಬರ್ ಪಾರ್ಟಿ ನಾಯಕ ಸ್ಟಾರ್ಮರ್

61ರ ಹರೆಯದ ಸ್ಟಾರ್ಮರ್, ಹೊಲ್ಬೋರ್ನ್ ಮತ್ತು ಸೇಂಟ್ ಪ್ಯಾನ್‌ಕ್ರಾಸ್‌ನಿಂದ ಗೆದ್ದ ನಂತರ ತಮ್ಮ ಗೆಲುವಿನ ಭಾಷಣದಲ್ಲಿ, ಜನರು ನನಗೆ ಮತ ನೀಡಿದರೂ ನೀಡದಿದ್ದರೂ ಈ ಕ್ಷೇತ್ರದ ಪ್ರತಿಯೊಬ್ಬ ವ್ಯಕ್ತಿಗೆ ಸೇವೆ ಸಲ್ಲಿಸುತ್ತೇನೆ ಎಂದಿದ್ದಾರೆ.

ಲಂಡನ್: ಬ್ರಿಟನ್‌ನ ನೂತನ ಪ್ರಧಾನಿಯಾಗುವ ಹಾದಿಯಲ್ಲಿರುವ ಲೇಬರ್ ಪಕ್ಷದ ನಾಯಕ ಕೀರ್ ಸ್ಟಾರ್ಮರ್ ಅವರು ಮತದಾರರಿಗೆ ಧನ್ಯವಾದ ಅರ್ಪಿಸಿದ್ದಾರೆ. ದೇಶದ ಜನರು "ಬದಲಾವಣೆಗೆ ಸಿದ್ಧರಾಗಿದ್ದಾರೆ" ಎಂದು ಹೇಳಿದರು.

ಎಕ್ಸಿಟ್ ಪೋಲ್ ನಲ್ಲಿ ಅವರ ನೇತೃತ್ವದ ಲೇಬರ್ ಪಾರ್ಟಿ ಬಹುಮತದತ್ತ ದಾಪುಗಾಲಿರಿಸಲಿದೆ. 61ರ ಹರೆಯದ ಸ್ಟಾರ್ಮರ್, ಹೊಲ್ಬೋರ್ನ್ ಮತ್ತು ಸೇಂಟ್ ಪ್ಯಾನ್‌ಕ್ರಾಸ್‌ನಿಂದ ಗೆದ್ದ ನಂತರ ತಮ್ಮ ಗೆಲುವಿನ ಭಾಷಣದಲ್ಲಿ, ಜನರು ನನಗೆ ಮತ ನೀಡಿದರೂ ನೀಡದಿದ್ದರೂ ಈ ಕ್ಷೇತ್ರದ ಪ್ರತಿಯೊಬ್ಬ ವ್ಯಕ್ತಿಗೆ ಸೇವೆ ಸಲ್ಲಿಸುತ್ತೇನೆ ಎಂದಿದ್ದಾರೆ.

14 ವರ್ಷಗಳ ಕನ್ಸರ್ವೇಟಿವ್ ಆಡಳಿತವನ್ನು ಕೊನೆಗೊಳಿಸಲು ಮತ್ತು ಲೇಬರ್ ಪಕ್ಷಕ್ಕೆ ಪ್ರಚಂಡ ವಿಜಯವನ್ನು ನೀಡಲು ಬ್ರಿಟನ್ನರು ಈ ಬಾರಿ ತೀರ್ಮಾನಿಸಿದ್ದಾರೆ ಎಂದು ತಮ್ಮ ಭಾಷಣದಲ್ಲಿ ಹೇಳಿದರು. ಎಕ್ಸಿಟ್ ಪೋಲ್ ಪ್ರಕಾರ, ಲೇಬರ್ ಪಕ್ಷ 410 ಸ್ಥಾನಗಳನ್ನು ಗೆಲ್ಲಬಹುದು. ಸರ್ಕಾರ ರಚನೆಗೆ ಸರಳ ಬಹುಮತಕ್ಕೆ ಬೇಕಾದ 326 ಗಡಿ ದಾಟಿ ಪ್ರಧಾನ ಮಂತ್ರಿ ರಿಷಿ ಸುನಕ್ ನೇತೃತ್ವದ ಟೋರಿಗಳು ಕೇವಲ 131 ಸ್ಥಾನಗಳಿಗೆ ಇಳಿಯಬಹುದು ಎಂದು ಎಕ್ಸಿಟ್ ಪೋಲ್ ಗಳು ಹೇಳಿವೆ.

ಇದುವರೆಗೆ ಹೊರಬಿದ್ದಿರುವ ಫಲಿತಾಂಶದಲ್ಲಿ, ಲೇಬರ್ ಪಕ್ಷವು 184 ಸ್ಥಾನಗಳನ್ನು ಗೆದ್ದುಕೊಂಡಿದೆ. ಕನ್ಸರ್ವೇಟಿವ್ಸ್ 32, ಲಿಬರಲ್ ಡೆಮೋಕ್ರಾಟ್‌ಗಳು 23, ಸ್ಕಾಟಿಷ್ ನ್ಯಾಷನಲ್ ಪಾರ್ಟಿ 3 ಮತ್ತು ಇತರರು 11 ಸ್ಥಾನಗಳನ್ನು ಗೆದ್ದಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!