ಮೋದಿ ಮತ್ತು ಪುಟಿನ್ 
ವಿದೇಶ

ಭಾರತಕ್ಕೆ ಮಹತ್ವದ ರಾಜತಾಂತ್ರಿಕ ಗೆಲುವು: ರಷ್ಯಾ ಸೇನೆಯಲ್ಲಿರುವ ಭಾರತೀಯರ ಶೀಘ್ರ ಬಿಡುಗಡೆ; ಪ್ರಧಾನಿ ಮೋದಿಗೆ Putin ಭರವಸೆ!

ರಷ್ಯಾದ ಸೇನೆಗಾಗಿ ಕೆಲಸ ಮಾಡುತ್ತಿರುವ ಎಲ್ಲಾ ಭಾರತೀಯರನ್ನು ರಷ್ಯಾ ಬಿಡುಗಡೆ ಮಾಡುತ್ತದೆ ಮತ್ತು ಹಿಂದಿರುಗಲು ನೆರವು ನೀಡುತ್ತದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಾಸ್ಕೋ: ರಷ್ಯಾ-ಉಕ್ರೇನ್ ಯುದ್ಧದಲ್ಲಿ ಅನಗತ್ಯವಾಗಿ ರಷ್ಯಾ ಪರವಾಗಿ ದುಡಿಯುತ್ತಿರುವ ಭಾರತ ಮೂಲದ ಸೈನಿಕರಿಗೆ ಸಿಹಿಸುದ್ದಿಯೊಂದು ದೊರೆತ್ತಿದ್ದು ಶೀಘ್ರ ಸೇನೆಯಿಂದ ಬಿಡುಗಡೆಗೊಳಿಸುವುದಾಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭರವಸೆ ನೀಡಿದ್ದಾರೆ.

ಹೌದು.. ಭಾರತಕ್ಕೆ ಮಹತ್ವದ ರಾಜತಾಂತ್ರಿಕ ಗೆಲುವು ದೊರೆತಿದ್ದು, ರಷ್ಯಾದ ಸೇನೆಗಾಗಿ ಕೆಲಸ ಮಾಡುತ್ತಿರುವ ಎಲ್ಲಾ ಭಾರತೀಯರನ್ನು ರಷ್ಯಾ ಬಿಡುಗಡೆ ಮಾಡುತ್ತದೆ ಮತ್ತು ಹಿಂದಿರುಗಲು ನೆರವು ನೀಡುತ್ತದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗಿನ ಸಂವಾದದಲ್ಲಿ ಪ್ರಧಾನಿ ಮೋದಿ ಈ ವಿಷಯವನ್ನು ಪ್ರಸ್ತಾಪಿಸಿದ್ದು, ಸೋಮವಾರ ಮಾಸ್ಕೋದ ಅಧ್ಯಕ್ಷರ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿ ಮಾಡಿದ್ದರು. ಪುಟಿನ್ ಪ್ರಧಾನಿ ಮೋದಿಯನ್ನು ಸ್ವಾಗತಿಸಿದರು ಮತ್ತು ಉಭಯ ನಾಯಕರು ಪರಸ್ಪರ ಆಲಂಗಿಸಿಕೊಂಡು ಉಭಯ ಕುಶಲೋಪರಿ ವಿಚಾರಿಸಿದರು.

ಸಭೆಗೆ ತೆರಳುವ ಮುನ್ನ ಉಭಯ ನಾಯಕರು ಪರಸ್ಪರ ಹಸ್ತಲಾಘವ ಮಾಡಿ ಆತ್ಮೀಯವಾಗಿ ಶುಭಾಶಯ ಕೋರಿದರು. ಅವರು ಖಾಸಗಿ ಸಭೆ ಮತ್ತು ರಾತ್ರಿಯ ಊಟವನ್ನೂ ಸಹ ಮಾಡಿದ್ದಾರೆ.

ಈ ಕುರಿತು ಟ್ವಿಟರ್ ನಲ್ಲಿ ಪೋಸ್ಟ್ ಮಾಡಿದ ಪ್ರಧಾನಿ ಮೋದಿ "ಈ ಸಂಜೆ ನೊವೊ-ಒಗರಿಯೋವೊದಲ್ಲಿ ನನಗೆ ಆತಿಥ್ಯ ವಹಿಸಿದ್ದಕ್ಕಾಗಿ ಅಧ್ಯಕ್ಷ ಪುಟಿನ್ ಅವರಿಗೆ ಕೃತಜ್ಞತೆಗಳು. ನಾಳೆಯೂ ನಮ್ಮ ಮಾತುಕತೆಗಳನ್ನು ಎದುರು ನೋಡುತ್ತಿದ್ದೇವೆ. ಇದು ಭಾರತ ಮತ್ತು ರಷ್ಯಾ ನಡುವಿನ ಸ್ನೇಹದ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುವಲ್ಲಿ ಖಂಡಿತವಾಗಿಯೂ ಬಹಳ ದೂರ ಹೋಗುತ್ತದೆ ಎಂದು ಹೇಳಿದ್ದಾರೆ.

ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದ ಕಾಂಗ್ರೆಸ್

ರಷ್ಯಾದ ಸೈನ್ಯದಲ್ಲಿ ಕೆಲಸ ಮಾಡುವ ಭಾರತೀಯರ ಸಮಸ್ಯೆಯನ್ನು ಪ್ರತಿಪಕ್ಷಗಳು ಪ್ರಸ್ತಾಪಿಸಿದ್ದವು. ಈ ವಿಷಯದ ಬಗ್ಗೆ ಸರ್ಕಾರದ ನಿಲುವನ್ನು ಕಾಂಗ್ರೆಸ್ ಪ್ರಶ್ನಿಸಿತು. ಕಾಂಗ್ರೆಸ್ ರಾಜ್ಯಸಭಾ ಸಂಸದ ಜೈರಾಮ್ ರಮೇಶ್ ಪ್ರಧಾನಿಗೆ ಪ್ರಶ್ನೆಗಳ ಸುರಿಮಳೆ ಹರಿಸಿದ್ದು, "ಮಾಸ್ಕೋದಲ್ಲಿರುವ ಭಾರತೀಯ ರಾಯಭಾರ ಕಚೇರಿ ಪ್ರಕಾರ, ಕನಿಷ್ಠ 50 ಭಾರತೀಯ ಪ್ರಜೆಗಳು ರಷ್ಯಾದ ಸೈನ್ಯಕ್ಕೆ ಸೇರಿದ್ದಾರೆ.

ಕನಿಷ್ಠ ಇಬ್ಬರು ವ್ಯಕ್ತಿಗಳು ಈಗಾಗಲೇ ಯುದ್ಧದಲ್ಲಿ ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಲಾಗಿದೆ. ಬಡತನ ಮತ್ತು ನಿರುದ್ಯೋಗ ಬಿಕ್ಕಟ್ಟಿನಿಂದ ಪಾರಾಗುವ ಅವಕಾಶವನ್ನು ಹೊರತುಪಡಿಸಿ, ಪ್ರಧಾನ ಮಂತ್ರಿ ದೇಶೀಯವಾಗಿ ಅದನ್ನು ಕೈಗೆತ್ತಿಕೊಳ್ಳುತ್ತಾರೆಯೇ ಎಂದು ಪ್ರಶ್ನಿಸಿದ್ದರು. ಈ ಯುವಕರ ಕಾರಣ ಅವರು ಆದಷ್ಟು ಬೇಗ ಭಾರತಕ್ಕೆ ಸುರಕ್ಷಿತವಾಗಿ ಮರಳುತ್ತಾರೆಯೇ? ಎಂದು ಪ್ರಶ್ನಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT