ಆಸ್ಟ್ರಿಯಾ ಚಾನ್ಸೆಲರ್ ಕಾರ್ಲ್ ನೆಹಮ್ಮರ್ ಜೊತೆ ಪ್ರಧಾನಿ ಮೋದಿ 
ವಿದೇಶ

ಭಾರತ-ಆಸ್ಟ್ರಿಯಾ ಸಂಬಂಧ ಇನ್ನಷ್ಟು ಬಲವಾಗಲಿದೆ: ವಿಯೆನ್ನಾ ಭೇಟಿಗೆ ಪ್ರಧಾನಿ ಮೋದಿ ಹರ್ಷ

ಎರಡು ದಿನಗಳ ಭೇಟಿಗಾಗಿ ನಿನ್ನೆ ಸಂಜೆ ಮಾಸ್ಕೋದಿಂದ ವಿಯೆನ್ನಾಕ್ಕೆ ಮೋದಿ ಆಗಮಿಸಿದ್ದು, 40 ವರ್ಷಗಳ ನಂತರ ಭಾರತದ ಪ್ರಧಾನಿಯೊಬ್ಬರು ಇದೇ ಮೊದಲ ಬಾರಿಗೆ ಆಸ್ಟ್ರಿಯಾ ದೇಶಕ್ಕೆ ಭೇಟಿ ನೀಡುತ್ತಿದ್ದಾರೆ.

ವಿಯೆನ್ನಾ: ಭಾರತ-ಆಸ್ಟ್ರಿಯಾ ಸ್ನೇಹವು ಬಲವಾಗಿದೆ. ಮುಂಬರುವ ದಿನಗಳಲ್ಲಿ ಅದು ಇನ್ನಷ್ಟು ಗಟ್ಟಿಯಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಆಸ್ಟ್ರಿಯಾದ ಚಾನ್ಸೆಲರ್ ಕಾರ್ಲ್ ನೆಹಮ್ಮರ್ ಅವರನ್ನು ಇಂದು ಬುಧವಾರ ದ್ವಿಪಕ್ಷೀಯ ಮಾತುಕತೆಗೆ ಮುನ್ನ ಖಾಸಗಿಯಾಗಿ ಭೇಟಿಯಾದಾಗ ಹೇಳಿದ್ದಾರೆ.

ಎರಡು ದಿನಗಳ ಭೇಟಿಗಾಗಿ ನಿನ್ನೆ ಸಂಜೆ ಮಾಸ್ಕೋದಿಂದ ವಿಯೆನ್ನಾಕ್ಕೆ ಮೋದಿ ಆಗಮಿಸಿದ್ದು, 40 ವರ್ಷಗಳ ನಂತರ ಭಾರತದ ಪ್ರಧಾನಿಯೊಬ್ಬರು ಇದೇ ಮೊದಲ ಬಾರಿಗೆ ಆಸ್ಟ್ರಿಯಾ ದೇಶಕ್ಕೆ ಭೇಟಿ ನೀಡುತ್ತಿದ್ದಾರೆ. ಮೋದಿ ಅವರನ್ನು ಆಸ್ಟ್ರಿಯಾದ ವಿದೇಶಾಂಗ ಸಚಿವ ಅಲೆಕ್ಸಾಂಡರ್ ಶಾಲೆನ್‌ಬರ್ಗ್ ಅವರು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.

ಒಂದು ಫೋಟೋದಲ್ಲಿ ಪ್ರಧಾನಿ ಮೋದಿಯವರು ಆಸ್ಟ್ರಿಯಾ ಚಾನ್ಸೆಲರ್ ನೆಹಮ್ಮರ್ ಅವರನ್ನು ತಬ್ಬಿಕೊಳ್ಳುತ್ತಿರುವುದು ಕಂಡುಬಂದರೆ, ಇನ್ನೊಂದರಲ್ಲಿ ಆಸ್ಟ್ರಿಯಾದ ಚಾನ್ಸೆಲರ್ ಅವರು ಪ್ರಧಾನಿಯವರೊಂದಿಗೆ ಸೆಲ್ಫಿ ಕ್ಲಿಕ್ಕಿಸುತ್ತಿರುವುದು ಕಂಡುಬಂದಿದೆ. ಮೈಕ್ರೋಬ್ಲಾಗಿಂಗ್ ವೇದಿಕೆಗಳಲ್ಲಿ ನೆಹಮ್ಮರ್ ತಮ್ಮ ಮತ್ತು ಮೋದಿಯವರ ಫೋಟೋವನ್ನು ಪೋಸ್ಟ್ ಮಾಡಿ, ವಿಯೆನ್ನಾಕ್ಕೆ ಸುಸ್ವಾಗತ, ಪ್ರಧಾನಿ ಮೋದಿಯವರೇ, ನಿಮ್ಮನ್ನು ಆಸ್ಟ್ರಿಯಾಕ್ಕೆ ಸ್ವಾಗತಿಸಲು ಸಂತೋಷ ಮತ್ತು ಗೌರವವಾಗಿದೆ. ಆಸ್ಟ್ರಿಯಾ ಮತ್ತು ಭಾರತವು ಸ್ನೇಹಿತರು ಮತ್ತು ಪಾಲುದಾರರು. ನಿಮ್ಮ ಭೇಟಿ ಸಂದರ್ಭದಲ್ಲಿ ಹಲವು ವಿಷಯಗಳ ಕುರಿತು ಚರ್ಚೆಗೆ ಎದುರು ನೋಡುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ಶಿವಮೊಗ್ಗ: 10 ಕಿಲೋ ವ್ಯಾಟ್ FM ಟ್ರಾನ್ಸ್ಮಿಟರ್ ಕೇಂದ್ರ ಉದ್ಘಾಟನೆ! ಆಕಾಶವಾಣಿ, ದೂರದರ್ಶನ ಅಭಿವೃದ್ದಿಗೆ 2,500 ಕೋಟಿ ಹಣ ವೆಚ್ಚ- ಡಾ. ಎಲ್ ಮುರುಗನ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

SCROLL FOR NEXT