ಹಿಂಸಾಚಾರದ ದೃಶ್ಯ 
ವಿದೇಶ

ಬಾಂಗ್ಲಾದೇಶ ಹಿಂಸಾಚಾರ: 151 ಮಂದಿ ಸಾವು; ಉದ್ಯೋಗ ಕೋಟಾ ರದ್ದುಪಡಿಸಿದ ಸುಪ್ರೀಂ ಕೋರ್ಟ್; ಪ್ರತಿಭಟನೆ ಕೈಬಿಡುವಂತೆ ಸೂಚನೆ

ಪ್ರಧಾನ ಮಂತ್ರಿ ಶೇಖ್ ಹಸೀನಾ ಅವರ ಸರ್ಕಾರವು 2018 ರಲ್ಲಿ ಕೋಟಾ ವ್ಯವಸ್ಥೆಯನ್ನು ರದ್ದುಗೊಳಿಸಿತು. ಆದರೆ ಕೆಳ ನ್ಯಾಯಾಲಯವು ಕಳೆದ ತಿಂಗಳು ಅದನ್ನು ಮರುಸ್ಥಾಪಿಸಿತು. ಇದು ಹಿಂಸಾಚಾರಕ್ಕೆ ಕಾರಣವಾಯಿತು.

ತೀವ್ರ ಹಿಂಸಾಚಾರಕ್ಕೆ ಕಾರಣವಾಗಿದ್ದ ವಿವಾದಾತ್ಮಕ ಉದ್ಯೋಗ ಕೋಟಾ ವ್ಯವಸ್ಥೆಯನ್ನು ಬಾಂಗ್ಲಾದೇಶದ ಸುಪ್ರೀಂ ಕೋರ್ಟ್ ಹಿಂಪಡೆದಿದೆ. ಶೇಕಡ 56ರಷ್ಟಿದ್ದ ಒಟ್ಟಾರೆ ಮೀಸಲಾತಿ ಪ್ರಮಾಣವನ್ನು ಶೇ. 7ಕ್ಕೆ ಇಳಿಸಿದೆ. ಇನ್ನು ಪ್ರತಿಭಟನೆಗೆ ಕಾರಣವಾಗಿದ್ದ ಸ್ವಾತಂತ್ರ್ಯ ಯೋಧರ ಕುಟುಂಬದ ಮೀಸಲಾತಿಯನ್ನು ಕೋರ್ಟ್ ಕೈಬಿಟ್ಟಿಲ್ಲ. ಬದಲಿಗೆ ಶೇ. 30ರಷ್ಟಿದ್ದ ಮೀಸಲಾತಿಯನ್ನು ಶೇ. 5ಕ್ಕೆ ಸೀಮಿತಗೊಳಿಸಿ ಸುಪ್ರೀಂ ಕೋರ್ಟ್ ಆದೇಶಿಸಿದೆ.

ನಾಗರಿಕ ಸೇವಾ ಉದ್ಯೋಗಗಳಲ್ಲಿ ಶೇಕಡ 5ರಷ್ಟು ಸ್ವಾತಂತ್ರ್ಯ ಹೋರಾಟದ ಯೋಧರ ಮಕ್ಕಳಿಗೆ ಮತ್ತು ಶೇಕಡ 2ರಷ್ಟು ಇತರ ವರ್ಗಗಳಿಗೆ ಮೀಸಲಿಡಲಾಗುವುದು ಎಂದು ಅವರು ಹೇಳಿದರು. ಈ ಹಿಂದೆ, 30 ಪ್ರತಿಶತದಷ್ಟು ಉದ್ಯೋಗಗಳನ್ನು ಯುದ್ಧದ ಅನುಭವಿಗಳ ಸಂಬಂಧಿಕರಿಗೆ ಮೀಸಲಿಡಲಾಗಿತ್ತು. ಪ್ರಧಾನ ಮಂತ್ರಿ ಶೇಖ್ ಹಸೀನಾ ಅವರ ಸರ್ಕಾರವು 2018 ರಲ್ಲಿ ಕೋಟಾ ವ್ಯವಸ್ಥೆಯನ್ನು ರದ್ದುಗೊಳಿಸಿತು. ಆದರೆ ಕೆಳ ನ್ಯಾಯಾಲಯವು ಕಳೆದ ತಿಂಗಳು ಅದನ್ನು ಮರುಸ್ಥಾಪಿಸಿತು. ಇದು ಹಿಂಸಾಚಾರಕ್ಕೆ ಕಾರಣವಾಯಿತು. ಈ ನಿರ್ಧಾರದ ನಂತರ, ಪ್ರಧಾನಿ ಶೇಖ್ ಹಸೀನಾ ಅವರು ತಮ್ಮ ವಿದೇಶ ಪ್ರವಾಸವನ್ನು ರದ್ದುಗೊಳಿಸಿದರು.

ಬಾಂಗ್ಲಾದೇಶದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಮಕ್ಕಳಿಗೆ ಶೇ 30ರಷ್ಟು ಮೀಸಲಾತಿ ನೀಡುವುದನ್ನು ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಮೀಸಲಾತಿಯನ್ನು ಶೇಕಡಾ 10ಕ್ಕೆ ಇಳಿಸಿ ಅದನ್ನು ಮೆರಿಟ್ ಆಧಾರಿತ ವ್ಯವಸ್ಥೆಯಿಂದ ಬದಲಾಯಿಸಬೇಕು ಎಂಬುದು ಅವರ ಬೇಡಿಕೆಯಾಗಿದೆ. ಕೋಟಾ ವ್ಯವಸ್ಥೆಯು ಪ್ರಧಾನಿ ಶೇಖ್ ಹಸೀನಾ ಅವರ ಬೆಂಬಲಿಗರಿಗೆ ಅನುಕೂಲಕರವಾಗಿದೆ ಎಂದು ಪ್ರತಿಭಟನಾಕಾರರು ಹೇಳುತ್ತಾರೆ. ಅವರ ಅವಾಮಿ ಲೀಗ್ ಪಕ್ಷವು ಸ್ವಾತಂತ್ರ್ಯ ಚಳುವಳಿಯನ್ನು ಮುನ್ನಡೆಸಿತು.

ಹಿಂಸಾಚಾರದಲ್ಲಿ ಇಲ್ಲಿಯವರೆಗೆ 150 ಜನರು ಸಾವನ್ನಪ್ಪಿದ್ದಾರೆ ಮತ್ತು 2500ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಿಸಲು, ಸರ್ಕಾರವು ದೇಶಾದ್ಯಂತ ಕರ್ಫ್ಯೂವನ್ನು ವಿಸ್ತರಿಸಿದೆ. ಅನೇಕ ನಗರಗಳಲ್ಲಿ ಮೊಬೈಲ್ ಮತ್ತು ಇಂಟರ್ನೆಟ್ ಸೇವೆಗಳನ್ನು ನಿಷೇಧಿಸಲಾಗಿದೆ.

2018ರಲ್ಲಿ ಮೀಸಲಾತಿಗೆ ಸಂಬಂಧಿಸಿದಂತೆ ಇದೇ ರೀತಿಯ ಪ್ರತಿಭಟನೆಗಳು ನಡೆದಿದ್ದವು. ಇದಾದ ನಂತರ ಸರ್ಕಾರ ಕೋಟಾ ಪದ್ಧತಿಯನ್ನು ನಿಷೇಧಿಸಿತ್ತು. ವಿಮೋಚನಾ ಸಮರದಲ್ಲಿ ಪಾಲ್ಗೊಂಡಿದ್ದ ಸ್ವಾತಂತ್ರ್ಯ ಹೋರಾಟಗಾರರ ಕುಟುಂಬಗಳು ಹೈಕೋರ್ಟ್ ಮೊರೆ ಹೋಗಿದ್ದು, ನ್ಯಾಯಾಲಯವು ಅವರ ಪರವಾಗಿ ತೀರ್ಪು ನೀಡಿದೆ.

ಬಾಂಗ್ಲಾದೇಶದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಒಟ್ಟು ಶೇಕಡ 56ರಷ್ಟು ಮೀಸಲಾತಿ ಇದೆ. ಇದರಲ್ಲಿ ಶೇಕಡ 30ರಷ್ಟು ಮೀಸಲಾತಿಯನ್ನು 1971ರ ವಿಮೋಚನಾ ಯುದ್ಧದ ಸ್ವಾತಂತ್ರ್ಯ ಹೋರಾಟಗಾರರ ವಂಶಸ್ಥರಿಗೆ ಶೇಕಡ 10ರಷ್ಟು ಮಹಿಳೆಯರಿಗೆ ಶೇಕಡ 10ರಷ್ಟು ಹಿಂದುಳಿದ ಪ್ರದೇಶಗಳಿಂದ ಬರುವ ಜನರಿಗೆ ಶೇಕಡ 5ರಷ್ಟು ಜನಾಂಗೀಯ ಅಲ್ಪಸಂಖ್ಯಾತ ಗುಂಪುಗಳಿಗೆ ಮತ್ತು ಅಂಗವಿಕಲರಿಗೆ ಶೇಕಡ 1ರಷ್ಟು ಮೀಸಲಾತಿ ನೀಡಲಾಗಿದೆ.

ಬಾಂಗ್ಲಾದೇಶವು ಪ್ರಸ್ತುತ ಹಿಂಸಾಚಾರದ ಬೆಂಕಿಯಲ್ಲಿ ಉರಿಯುತ್ತಿದೆ ಮತ್ತು ಸರ್ಕಾರವು ವಿಧಿಸಿರುವ ಕರ್ಫ್ಯೂ ಮತ್ತು ನಿರ್ಬಂಧಗಳ ಹೊರತಾಗಿಯೂ, ಪರಿಸ್ಥಿತಿಯು ನಿರಂತರವಾಗಿ ಹದಗೆಡುತ್ತಿದೆ. ಇದೀಗ ಸುಪ್ರೀಂ ಕೋರ್ಟ್ ಆದೇಶದಿಂದ ಪ್ರತಿಭಟನೆ ನಿಲ್ಲುತ್ತಾ ಕಾದುನೋಡಬೇಕು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿದೇಶದಿಂದ ನವ ಮಂಗಳೂರು ಬಂದರಿಗೆ ಆಗಮಿಸಿದ ಎರಡು ತೈಲ ಹಡಗುಗಳು!

West Asia war: ತಾರಕಕ್ಕೇರಿದ ಅಮೆರಿಕಾ-ಇರಾನ್ ಸಂಘರ್ಷ; ಟ್ರಂಪ್ ಬೆದರಿಕೆಗೆ ಮಣಿಯದ ಟೆಹ್ರಾನ್, ವಿದ್ಯುತ್ ಸ್ಥಾವರ ನಾಶಪಡಿಸಿದರೆ ಭೀಕರ ಪ್ರತಿದಾಳಿ ಎಚ್ಚರಿಕೆ

ಐಪಿಎಲ್ 2026: 5 ಎಸೆತದಲ್ಲಿ 5 ಸಿಕ್ಸರ್.. ಇಂಟರ್ನೆಟ್ ಗೆ ಬೆಂಕಿ ಹಚ್ಚಿದ ಸನ್ ರೈಸರ್ಸ್ ಹೈದರಾಬಾದ್ ಬ್ಯಾಟರ್! Video

West Asia war: ಜಾಗತಿಕ ತೈಲ ಮಾರುಕಟ್ಟೆ ಅಸ್ಥಿರ; 48 ಗಂಟೆಗಳಲ್ಲಿ 'ಹಾರ್ಮುಜ್ ಜಲಸಂಧಿ' ತೆರೆಯದಿದ್ದರೆ ವಿದ್ಯುತ್ ಸ್ಥಾವರಗಳ ನಾಶ; ಇರಾನ್'ಗೆ ಟ್ರಂಪ್ ಕಠಿಣ ಎಚ್ಚರಿಕೆ

'ಇನ್ ಯಾವ್ friendship ಇಲ್ಲ': ಇರಾನ್ ಮಿಲಿಟರಿ ಅಧಿಕಾರಿಗಳು, ಸಿಬ್ಬಂದಿಗಳ ಹೊರದಬ್ಬಿದ Saudi Arabia

SCROLL FOR NEXT