ಮಕ್ಕಳ ರಕ್ಷಿಸಲು ತನ್ನ ಪ್ರಾಣ ಕೊಟ್ಟ ತಂದೆ 
ವಿದೇಶ

Australia: ಹಳಿ ಮೇಲೆ ಬಿದ್ದ ಮಕ್ಕಳ ರಕ್ಷಿಸಲು ತನ್ನ ಪ್ರಾಣ ಕೊಟ್ಟ ತಂದೆ!

ಕಾರ್ಲ್ಟನ್ ನಿಲ್ದಾಣದಲ್ಲಿ ಲಿಫ್ಟ್ ನಿಂದ ಇಳಿದು ಬರುವಾಗ ಅವರ ಅವಳಿ ಹೆಣ್ಣು ಮಕ್ಕಳಿದ್ದ ಪ್ರ್ಯಾಮ್ ಆಕಸ್ಮಿಕವಾಗಿ ರೈಲ್ವೆ ಹಳಿಗೆ ಬಿದ್ದಿದೆ. ಆಗ ಆನಂದ್ ಹೆಣ್ಣುಮಕ್ಕಳನ್ನು ಉಳಿಸಲು ಪ್ಲಾಟ್ ಫಾರ್ಮ್‌ನಿಂದ ರೈಲ್ವೆ ಹಳಿಯ ಇಳಿದಿದ್ದಾರೆ. ಅದೇ ವೇಳೆ ರೈಲು ಬಂದಿದೆ.

ಸಿಡ್ನಿ: ಆಸ್ಟ್ರೇಲಿಯಾದಲ್ಲಿ ಇನ್ಫೋಸಿಸ್ ಟೆಕ್ಕಿಯೊಬ್ಬರು ರೈಲ್ವೆ ಹಳಿಯ ಮೇಲೆ ಬಿದ್ದ ತನ್ನ ಅವಳಿ ಹೆಣ್ಣುಮಕ್ಕಳನ್ನು ರಕ್ಷಿಸಲು ಪ್ರಯತ್ನಿಸುವಾಗ ದುರಂತ ಸಾವಿಗೀಡಾಗಿದ್ದಾರೆ.

ಮೂಲಗಳ ಪ್ರಕಾರ 40 ವರ್ಷದ ಆನಂದ್ ರನ್ವಾಲ್ ಅವರು ಸಿಡ್ನಿಯ ಕಾರ್ಲ್ಟನ್ ನಿಲ್ದಾಣದಲ್ಲಿ ಲಿಫ್ಟ್ ನಿಂದ ಇಳಿದು ಬರುವಾಗ ಈ ದುರ್ಘಟನೆ ನಡೆದಿದ್ದು, ಈ ವೇಳೆ ಆನಂದ್ ರನ್ವಾಲ್ ಅವರು ದುರಂತ ಸಾವಿಗೀಡಾಗಿದ್ದಾರೆ.

ಮೂಲಗಳ ಪ್ರಕಾರ ಆನಂದ್ ರನ್ವಾಲ್ ಇನ್ಫೋಸಿಸ್ ಐಟಿ ಉದ್ಯೋಗಿಯಾಗಿದ್ದು, ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಕೆಲಸ ಮಾಡುತ್ತಿದ್ದರು. ಆನಂದ್ ತಮ್ಮ ಪತ್ನಿ ಮತ್ತು ಅವಳಿ ಹೆಣ್ಣುಮಕ್ಕಳೊಂದಿಗೆ ಕಾರ್ಲ್ಟನ್ ನಿಲ್ದಾಣದಲ್ಲಿ ಲಿಫ್ಟ್ ನಿಂದ ಇಳಿದು ಬರುವಾಗ ಅವರ ಅವಳಿ ಹೆಣ್ಣು ಮಕ್ಕಳಿದ್ದ ಪ್ರ್ಯಾಮ್ ಆಕಸ್ಮಿಕವಾಗಿ ರೈಲ್ವೆ ಹಳಿಗೆ ಬಿದ್ದಿದೆ. ಆಗ ಆನಂದ್ ಹೆಣ್ಣುಮಕ್ಕಳನ್ನು ಉಳಿಸಲು ಪ್ಲಾಟ್ ಫಾರ್ಮ್‌ನಿಂದ ರೈಲ್ವೆ ಹಳಿಯ ಇಳಿದಿದ್ದಾರೆ. ಅದೇ ವೇಳೆ ರೈಲು ಬಂದಿದೆ.

ಕೂಡಲೇ ಆನಂದ್ ತಮ್ಮ ಒಂದು ಮಗುವನ್ನು ರಕ್ಷಿಸಲು ಯಶಸ್ವಿಯಾಗಿದ್ದು ಕ್ಷಣಮಾತ್ರದಲ್ಲಿ ರೈಲು ಆನಂದ್ ಮತ್ತು ಅವರ ಮತ್ತೋರ್ವ ಮಗುವಿನ ಮೇಲೆ ಹರಿದು ಹೋಗಿದೆ. ಆನಂದ್ ಅವರ ಪತ್ನಿ ಮತ್ತು ಮಗಳನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಅವರಿಗೆ ಚಿಕಿತ್ಸೆ ನೀಡಿ ಡಿಸ್ಚಾರ್ಜ್ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಈ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದರಲ್ಲಿ ಕುಟುಂಬವು ಫುಟ್‌ಪಾತ್‌ನಲ್ಲಿ ನಡೆದುಕೊಂಡು ಹೋಗುತ್ತಿರುವುದನ್ನು ತೋರಿಸುತ್ತದೆ. ಆನಂದ್ ದಂಪತಿ ಲಿಫ್ಟ್ ಮೂಲಕ ಪ್ಲಾಟ್‌ಫಾರ್ಮ್‌ಗೆ ಬಂದಿದ್ದರು. ಈ ವೇಳೆ ಮಕ್ಕಳಿದ್ದ ಪ್ರ್ಯಾಮ್ ಕೈಜಾರಿ ಹಳಿ ಮೇಲೆ ಉರುತ್ತಾ ಹೋಗಿದೆ. ಆಗ ಆನಂದ್ ಅವರ ಪತ್ನಿ ಕಿರುಚಿದಾಗ ಆನಂದ್ ರೈಲು ಹಳಿಗಳ ಮೇಲೆ ಮಕ್ಕಳನ್ನು ರಕ್ಷಿಸಲು ಹಾರಿದ್ದಾರೆ. ಆ ವೇಳೆ ಈ ದುರ್ಘಟನೆ ಸಂಭವಿಸಿದೆ.

ಆನಂದ್ ಮತ್ತು ಅವರ ಕುಟುಂಬವು 2023ರ ಕೊನೆಯಲ್ಲಿ ಸಿಡ್ನಿಗೆ ಸ್ಥಳಾಂತರಗೊಂಡಿತ್ತು. ಅವರು ಸಿಡ್ನಿಯ ಕೊಗರಾ ಉಪನಗರದಲ್ಲಿ ವಾಸಿಸುತ್ತಿದ್ದರು. ಇತ್ತೀಚೆಗೆ, ಆನಂದ್ ಅವರ ಪೋಷಕರು ಸಿಡ್ನಿಯಲ್ಲಿದ್ದ ಅವರ ಮನೆಗೆ ಭೇಟಿ ನೀಡಿದ್ದರು ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT