ಹೆಬ್ಬಾವು 
ವಿದೇಶ

Indonesia: ನಾಪತ್ತೆಯಾಗಿದ್ದ ಮಹಿಳೆ 3 ದಿನಗಳ ಬಳಿಕ ಹೆಬ್ಬಾವಿನ ಹೊಟ್ಟೆಯೊಳಗೆ ಪತ್ತೆ!

3 ದಿನಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆಯೊಬ್ಬರು ಹೆಬ್ಬಾವಿನ (ಪೈಥಾನ್) ಹೊಟ್ಟೆಯೊಳಗೆ ಪತ್ತೆಯಾಗಿರುವ ಆಘಾತಕಾರಿ ಘಟನೆ ಇಂಡೋನೇಷ್ಯಾದಲ್ಲಿ ವರದಿಯಾಗಿದೆ.

ಜಕಾರ್ತ: 3 ದಿನಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆಯೊಬ್ಬರು ಹೆಬ್ಬಾವಿನ (ಪೈಥಾನ್) ಹೊಟ್ಟೆಯೊಳಗೆ ಪತ್ತೆಯಾಗಿರುವ ಆಘಾತಕಾರಿ ಘಟನೆ ಇಂಡೋನೇಷ್ಯಾದಲ್ಲಿ ವರದಿಯಾಗಿದೆ.

ಮಧ್ಯ ಇಂಡೋನೇಷ್ಯಾ ಮಕಾಸ್ಸರ್ ನಲ್ಲಿ ಈ ಘಟನೆ ವರದಿಯಾಗಿದ್ದು, ಹೆಬ್ಬಾವೊಂದು ಮಹಿಳೆಯನ್ನು ನುಂಗಿಹಾಕಿದೆ. 3 ದಿನಗಳ ಬಳಿಕ ಮಹಿಳೆ ಸತ್ತ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಸ್ಥಳೀಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೂಲಗಳ ಪ್ರಕಾರ 45 ವರ್ಷದ ಫರೀದಾ ಮೃತ ಮಹಿಳೆಯಾಗಿದ್ದು, ಫರೀದಾ ಅವರ ಪತಿ ಮತ್ತು ದಕ್ಷಿಣ ಸುಲವೆಸಿ ಪ್ರಾಂತ್ಯದ ಕಲೆಂಪಂಗ್ ಗ್ರಾಮದ ನಿವಾಸಿಗಳು ಶುಕ್ರವಾರ ಐದು ಮೀಟರ್ (16 ಅಡಿ) ಅಳತೆಯ ರೆಟಿಕ್ಯುಲೇಟೆಡ್ ಹೆಬ್ಬಾವಿನೊಳಗೆ ಆಕೆಯ ಶವವನ್ನು ಪತ್ತೆ ಮಾಡಿದ್ದಾರೆ.

ನಾಲ್ಕು ಮಕ್ಕಳ ತಾಯಿ 45 ವರ್ಷದ ಫರೀದಾ ಗುರುವಾರ ರಾತ್ರಿ ನಾಪತ್ತೆಯಾಗಿದ್ದರು. ಈ ವೇಳೆ ಫರೀದಾ ಅವರ ಪತಿ ಗ್ರಾಮದಲ್ಲಿ ವ್ಯಾಪಕ ಶೋಧ ನಡೆಸಿದ್ದರು. ಆದರೆ ಫರೀದಾ ಪತ್ತೆಯಾಗಿರಲಿಲ್ಲ. ಬಳಿಕ ಗ್ರಾಮದ ಕಾಲುವೆಯಲ್ಲಿ ಹೆಬ್ಬಾವು ಭಾರಿ ಗಾತ್ರದ ಹೊಟ್ಟೆಯೊಂದಿಗೆ ಪತ್ತೆಯಾಗಿತ್ತು.

ಇದನ್ನು ಗಮನಿಸಿದ ಗ್ರಾಮಸ್ಥರು ಅನುಮಾನಗೊಂಡು ಫರೀದಾ ಅವರ ಪತಿ ಮತ್ತು ಸ್ಥಳೀಯ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಕೂಡಲೇ ತಜ್ಞರೊಂದಿಗೆ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಅರಣ್ಯ ಇಲಾಖೆ ಒಪ್ಪಿಗೆ ಬಳಿಕ ಹಾವಿನ ಹೊಟ್ಟೆಯನ್ನು ಬಗೆಯಲು ಮುಂದಾದರು.

ಈ ವೇಳೆ ಹಾವಿನ ಹೊಟ್ಟೆಯಲ್ಲಿ ಫರೀದಾ ಅವರ ಬಟ್ಟೆ ಪತ್ತೆಯಾಗಿದೆ. ಈ ವೇಳೆ ಫರೀದಾ ಸಾವು ಖಚಿತವಾಗಿದ್ದು, ಸಂಪೂರ್ಣ ಹೊಟ್ಟೆಯನ್ನು ಕತ್ತರಿಸಿದಾಗ ಮಹಿಳೆಯ ಶವ ಪತ್ತೆಯಾಗಿದೆ.

ಅಪರೂಪದ ಘಟನೆ

ಇಂಡೋನೇಷ್ಯಾದಲ್ಲಿ ಇಂತಹ ಘಟನೆಗಳನ್ನು ಅತ್ಯಂತ ಅಪರೂಪವೆಂದು ಪರಿಗಣಿಸಲಾಗಿದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಇಂಡೋನೇಷ್ಯಾದಲ್ಲಿ ಹೆಬ್ಬಾವುಗಳು ಮನುಷ್ಯರನ್ನು ಸಂಪೂರ್ಣ ನುಂಗಿದ ಹಲವು ಘಟನೆಗಳು ವರದಿಯಾಗಿವೆ. ಕಳೆದ ವರ್ಷ, ಆಗ್ನೇಯ ಸುಲವೆಸಿಯ ಟಿನಾಂಗ್ಜಿಯಾ ಜಿಲ್ಲೆಯ ನಿವಾಸಿಗಳು ಎಂಟು ಮೀಟರ್ ಹೆಬ್ಬಾವನ್ನು ಇದೇ ಕಾರಣಕ್ಕೆ ಕೊಂದು ಹಾಕಿದ್ದರು.

ಈ ಹೆಬ್ಬಾವು ಹಳ್ಳಿಯೊಂದರಲ್ಲಿ ರೈತರೊಬ್ಬರನ್ನು ಕತ್ತು ಹಿಸುಕಿ ಕೊಂದು ತಿನ್ನುವುದು ರೈತರು ನೋಡಿ ಅದನ್ನು ಹೊಡೆದು ಕೊಂದು ಹಾಕಿದ್ದರು. 2018 ರಲ್ಲಿ, ಆಗ್ನೇಯ ಸುಲವೆಸಿಯ ಮುನಾ ಪಟ್ಟಣದಲ್ಲಿ 54 ವರ್ಷದ ಮಹಿಳೆಯನ್ನು ಏಳು ಮೀಟರ್ ಉದ್ದದ ಹೆಬ್ಬಾವು ನುಂಗಿ ಹಾಕಿತ್ತು. ಇದರ ಹಿಂದಿನ ವರ್ಷ ಇದೇ ಪಶ್ಚಿಮ ಸುಲವೆಸಿಯ ರೈತರೊಬ್ಬರನ್ನು ತಾಳೆ ಎಣ್ಣೆ ತೋಟದಲ್ಲಿ ನಾಲ್ಕು ಮೀಟರ್ ಹೆಬ್ಬಾವು ಜೀವಂತವಾಗಿ ನುಂಗಿಹಾಕಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT