ಬಾಹ್ಯಾಕಾಶ ನಿಲ್ದಾಣದಲ್ಲಿ ಸ್ಪೇಸ್ ಬಗ್ ಪತ್ತೆ 
ವಿದೇಶ

ಬಾಹ್ಯಾಕಾಶ ನಿಲ್ದಾಣಕ್ಕೆ ಹಾರಿರುವ Sunita Williams ತಂಡಕ್ಕೆ ಹೊಸ ತಲೆನೋವು, ಆತಂಕಕಾರಿ 'Spacebug' ಪತ್ತೆ!

ಇತ್ತೀಚೆಗಷ್ಟೇ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಹಾರಿದ್ದ ಭಾರತ ಮೂಲದ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಮತ್ತು ಅವರ ತಂಡಕ್ಕೆ ಹೊಸ ತಲೆನೋವು ಎದುರಾಗಿದ್ದು, ನಾಸಾದ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಭಯಾನಕ 'Spacebug' ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ನವದೆಹಲಿ: ಇತ್ತೀಚೆಗಷ್ಟೇ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಹಾರಿದ್ದ ಭಾರತ ಮೂಲದ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಮತ್ತು ಅವರ ತಂಡಕ್ಕೆ ಹೊಸ ತಲೆನೋವು ಎದುರಾಗಿದ್ದು, ನಾಸಾದ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಭಯಾನಕ 'Spacebug' ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಇದೇ ಜೂನ್ 6ರಂದು 8 ಮಂದಿ ಇತರ ಸಿಬ್ಬಂದಿಯೊಂದಿಗೆ ಬೋಯಿಂಗ್ ಸಂಸ್ಥೆಯ ಸ್ಟಾರ್ ಲೈನರ್ ರಾಕೆಟ್ ನಲ್ಲಿ ನಾಸಾದ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತಲುಪಿದ್ದರು. ಈಗಷ್ಟೇ ನಿಲ್ದಾಣದಲ್ಲಿ ಕೆಲಸ ಆರಂಭಿಸಿದ್ದ ಗಗನಯಾತ್ರಿಗಳಿಗೆ ಇದೀಗ ಹೊಸ ತಲೆನೋವು ಎದುರಾಗಿದ್ದು, ನಾಸಾದ ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದ ಅವರಣದಲ್ಲಿ ಸೂಪರ್ ಬಗ್ ಪತ್ತೆಯಾಗಿದೆ.

ಈ ಬಗ್ಗೆ ಬಾಹ್ಯಾಕಾಶ ತಜ್ಞರು ಮಾಹಿತಿ ನೀಡಿದ್ದು, ''ಐಎಸ್‌ಎಸ್‌ನ ಮುಚ್ಚಿದ ಪರಿಸರದಲ್ಲಿ ವಿಕಸನಗೊಂಡ ಮತ್ತು ಹೆಚ್ಚು ಪ್ರಬಲವಾಗಿರುವ 'ಎಂಟರ್‌ಬ್ಯಾಕ್ಟರ್ ಬುಗಾಂಡೆನ್ಸಿಸ್' ಎಂಬ ಹೆಸರಿನ ಬಹು-ಔಷಧ ನಿರೋಧಕ ಬ್ಯಾಕ್ಟೀರಿಯಾವನ್ನು ವಿಜ್ಞಾನಿಗಳು ಕಂಡುಹಿಡಿದಿದ್ದಾರೆ. ಇದು ಬಹು-ಔಷಧ ನಿರೋಧಕವಾಗಿರುವುದರಿಂದ, ಇದನ್ನು ಸಾಮಾನ್ಯವಾಗಿ 'ಸೂಪರ್ಬಗ್' ಎಂದು ಕರೆಯಲಾಗುತ್ತದೆ. ಈ ಬ್ಯಾಕ್ಟೀರಿಯಾವು ಉಸಿರಾಟದ ವ್ಯವಸ್ಥೆಗೆ ಸೋಂಕು ತರುತ್ತದೆ ಎಂದು ಹೇಳಿದ್ದಾರೆ.

ಅಂತೆಯೇ ಈ ಸ್ಪೇಸ್‌ಬಗ್‌ಗಳು ಬಾಹ್ಯಾಕಾಶ ಜೀವಿಗಳಲ್ಲ, ಆದರೆ ಗಗನಯಾತ್ರಿಗಳು ISS ನಲ್ಲಿ ಕೆಲಸ ಮಾಡಲು ಹೋದಾಗ ಅವರೊಂದಿಗೆ ಅಥವಾ ಅವರೊಂದಿಗಿದ್ದ ವಸ್ತುಗಳೊಂದಿಗೆ ಗುಪ್ತ ಸಹ-ಪ್ರಯಾಣಿಕರಾಗಿ ಪ್ರಯಾಣಿಸಿರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಈ ಹೊಸ ಬಗ್ ಪತ್ತೆಯಾದ ಹಿನ್ನಲೆಯಲ್ಲಿ ಭಾರತೀಯ ಸಂಜಾತೆ ಸುನಿತಾ ವಿಲಿಯಮ್ಸ್ ಮತ್ತು ಬ್ಯಾರಿ ಯುಜೀನ್ "ಬುಚ್" ವಿಲ್ಮೋರ್ ಅವರು ಭೂಮಿಗೆ ಆಗಮಿಸಿದ ಬಳಿಕ ಪ್ರಯೋಗಾಲಯದಲ್ಲಿ ಒಂದು ವಾರ ಕಳೆಯುವ ಸಾಧ್ಯತೆಯಿದೆ. ಅಲ್ಲಿ ಅವರನ್ನು ಸಂಪೂರ್ಣವಾಗಿ ವೈದ್ಯಕೀಯ ತಪಾಸಣೆಗೊಳಪಡಿಸಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT