ಕುವೈತ್‌ನ ದಕ್ಷಿಣ ನಗರವಾದ ಮಂಗಾಫ್‌ನ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ದುರಂತ 
ವಿದೇಶ

Kuwait Fire: ಮಂಗಾಫ್ ನಗರದ ಕಟ್ಟಡದಲ್ಲಿ ಅಗ್ನಿ ಅವಘಡ; 40 ಮಂದಿ ಸಜೀವ ದಹನ, 30 ಜನರಿಗೆ ಗಾಯ; ಬಹುತೇಕ ಭಾರತೀಯರು!

ಕುವೈತ್‌ನ ದಕ್ಷಿಣ ನಗರವಾದ ಮಂಗಾಫ್‌ನ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ 40 ಸಜೀವ ದಹನವಾಗಿದ್ದಾರೆ ಎಂದು ದೇಶದ ಸರ್ಕಾರಿ ಮಾಧ್ಯಮ ತಿಳಿಸಿದೆ.

ಮಂಗಾಫ್‌(ಕುವೈತ್‌): ಕುವೈತ್‌ನ ದಕ್ಷಿಣ ನಗರವಾದ ಮಂಗಾಫ್‌ನ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ 40 ಸಜೀವ ದಹನವಾಗಿದ್ದಾರೆ ಎಂದು ದೇಶದ ಸರ್ಕಾರಿ ಮಾಧ್ಯಮ ತಿಳಿಸಿದೆ.

ವರದಿಗಳ ಪ್ರಕಾರ, ಈ ದುರಂತ ಘಟನೆಯಲ್ಲಿ ಕನಿಷ್ಠ ನಾಲ್ವರು ಭಾರತೀಯರು ಸಹ ಸಾವನ್ನಪ್ಪಿದ್ದಾರೆ. ಕಟ್ಟಡದಲ್ಲಿ ಮಲಯಾಳಂ ಜನರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿದ್ದರು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಮೃತರಲ್ಲಿ ಹೆಚ್ಚಿನವರು ತಮಿಳುನಾಡು ಮತ್ತು ಕೇರಳದವರು ಎಂದು ತಿಳಿದುಬಂದಿದೆ.

ಕುವೈತ್ ಆರೋಗ್ಯ ಸಚಿವಾಲಯ ಹೊರಡಿಸಿದ ಹೇಳಿಕೆಯ ಪ್ರಕಾರ, ಎಲ್ಲಾ ಗಾಯಾಳುಗಳನ್ನು ಚಿಕಿತ್ಸೆಗಾಗಿ ಹತ್ತಿರದ ಹಲವಾರು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಅವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಅಗ್ನಿ ದುರಂತದಲ್ಲಿ ಗಾಯಗೊಂಡವರಿಗೆ ಸರಿಯಾದ ವೈದ್ಯಕೀಯ ಸೇವೆಯನ್ನು ಒದಗಿಸಲು ವೈದ್ಯಕೀಯ ತಂಡಗಳು ಎಲ್ಲ ಪ್ರಯತ್ನಗಳನ್ನು ಮಾಡುತ್ತಿವೆ ಎಂದು ಸಚಿವಾಲಯ ಹೇಳಿದೆ.

ವರದಿಗಳ ಪ್ರಕಾರ, ಬುಧವಾರ ಮುಂಜಾನೆ 4:30ಕ್ಕೆ ಕಾರ್ಮಿಕ ಶಿಬಿರದ ಅಡುಗೆಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೆಲವರು ಬೆಂಕಿಯನ್ನು ನೋಡಿ ಅಪಾರ್ಟ್‌ಮೆಂಟ್‌ಗಳಿಂದ ಹಾರಿ ಸಾವನ್ನಪ್ಪಿದರೆ, ಇನ್ನು ಕೆಲವರು ಸುಟ್ಟಗಾಯ ಮತ್ತು ಹೊಗೆಯಿಂದ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೊನೆಗೂ ವಿಜಯ್​ಗೆ ಸಿಕ್ತು ಮ್ಯಾಜಿಕ್​ ನಂಬರ್: CPI, VCKಯಿಂದಲೂ ಬೆಂಬಲ; ಶೀಘ್ರ CM ಆಗಿ ದಳಪತಿ ಪ್ರಮಾಣ!

ಶಾಸಕಾಂಗ ಪಕ್ಷದ ನಾಯಕರಾಗಿ ಸುವೇಂದು ಅಧಿಕಾರಿ ಆಯ್ಕೆ; ಬಂಗಾಳದ ಮೊದಲ ಬಿಜೆಪಿ CM ಆಗಿ ನಾಳೆ ಪ್ರಮಾಣ

LPG, ಟೊಮ್ಯಾಟೊ ಬೆಲೆ ಏರಿಕೆ ಎಫೆಕ್ಟ್: ಏಪ್ರಿಲ್‌ನಲ್ಲಿ ಸಸ್ಯಾಹಾರಿ, ಮಾಂಸಾಹಾರಿ ಥಾಲಿ ಊಟದ ಬೆಲೆ ಗಣನೀಯ ಹೆಚ್ಚಳ: Crisil

ದಳಪತಿ ವಿಜಯ್ ಸಂಪುಟದಲ್ಲಿ VCKಗೆ ಒಂದು, CPIಗೆ ಎರಡು ಸಚಿವ ಸ್ಥಾನ; ಕಾಂಗ್ರೆಸ್ ಗೆ ಎಷ್ಟು?

TCS ಕಾರ್ಪೋರೇಟ್ ಜಿಹಾದ್ ಪ್ರಕರಣ: ಪರಾರಿಯಲ್ಲಿದ್ದ ಆರೋಪಿ Nida Khan ಕೊನೆಗೂ ಬಂಧನ, ರೋಚಕ ಕಾರ್ಯಾಚರಣೆ

SCROLL FOR NEXT