ಕುವೈತ್‌ನ ದಕ್ಷಿಣ ನಗರವಾದ ಮಂಗಾಫ್‌ನ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ದುರಂತ online desk
ವಿದೇಶ

ಕುವೈತ್ ಅಗ್ನಿ ದುರಂತದಲ್ಲಿ ಮೃತಪಟ್ಟವರಿಗೆ ಲುಲು ಗ್ರೂಪ್ ನಿಂದ ತಲಾ 5 ಲಕ್ಷ ರೂ. ಪರಿಹಾರ

ಖ್ಯಾತ ಎನ್‌ಆರ್‌ಐ ಉದ್ಯಮಿ ಮತ್ತು ಯುಎಇ ಮೂಲದ ಲುಲು ಗ್ರೂಪ್‌ ಅಧ್ಯಕ್ಷ ಎಂಎ ಯೂಸುಫ್ ಅಲಿ ಅವರು ಗುರುವಾರ ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಅಬುಧಾಬಿ: ಕುವೈತ್ ಅಗ್ನಿ ದುರಂತದಲ್ಲಿ 45 ಭಾರತೀಯರು ಸೇರಿದಂತೆ 49 ಜನ ಸಜೀವ ದಹನವಾಗಿದ್ದು, ಖ್ಯಾತ ಎನ್‌ಆರ್‌ಐ ಉದ್ಯಮಿ ಮತ್ತು ಯುಎಇ ಮೂಲದ ಲುಲು ಗ್ರೂಪ್‌ ಅಧ್ಯಕ್ಷ ಎಂಎ ಯೂಸುಫ್ ಅಲಿ ಅವರು ಗುರುವಾರ ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಕುವೈತ್ ನ ದಕ್ಷಿಣ ನಗರವಾದ ಮಂಗಾಫ್‌ನಲ್ಲಿ 196 ವಲಸೆ ಕಾರ್ಮಿಕರು ತಂಗಿದ್ದ ಏಳು ಅಂತಸ್ತಿನ ಕಟ್ಟಡದಲ್ಲಿ ಬುಧವಾರ ಭಾರಿ ಅಗ್ನಿ ಅವಘಡ ಸಂಭವಿಸಿತ್ತು. ಘಟನೆಯಲ್ಲಿ ಕನಿಷ್ಠ 49 ವಿದೇಶಿ ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು 50 ಮಂದಿ ಗಾಯಗೊಂಡಿದ್ದಾರೆ.

ಪರಿಹಾರ ನಿಧಿಯ ಭಾಗವಾಗಿ ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ನೀಡಲಾಗುವುದು ಎಂದು ಅಬುಧಾಬಿಯಲ್ಲಿ ಲುಲು ಗ್ರೂಪ್ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕೇಂದ್ರ ಸರ್ಕಾರ ಮತ್ತು ಕೇರಳ ಸರ್ಕಾರ ಕೂಡ ಮೃತರ ಕುಟುಂಬಕ್ಕೆ ಇದೇ ರೀತಿಯ ಪರಿಹಾರ ಘೋಷಿಸಿವೆ.

ವಿದೇಶಾಂಗ ವ್ಯವಹಾರಗಳ ಖಾತೆ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್ ಅವರು ಗುರುವಾರ ಕುವೈತ್ ತಲುಪಿದ್ದು, ಬೆಂಕಿಯಲ್ಲಿ ಗಾಯಗೊಂಡ ಕೆಲವು ಭಾರತೀಯರನ್ನು ಭೇಟಿ ಮಾಡಿದರು. ಗಾಯಗೊಂಡವರೆಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಕುವೈತ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT