ಸಿಖ್‌ ಪ್ರತ್ಯೇಕತಾವಾದಿ ಗುರುಪತ್‌ವಂತ್‌ ಸಿಂಗ್‌ ಪನ್ನುನ್ 
ವಿದೇಶ

ಸಿಖ್​ ಪ್ರತ್ಯೇಕತಾವಾದಿ ಪನ್ನುನ್ ಹತ್ಯೆಗೆ ಸಂಚು: ಭಾರತ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ

ಸಿಖ್ ಪ್ರತ್ಯೇಕತಾವಾದಿ ಗುರುಪತ್ವಂತ್ ಸಿಂಗ್ ಪನ್ನುನ್ ಹತ್ಯೆಗೆ ಸಂಚು ರೂಪಿಸಿದ ಆರೋಪ ಎದುರಿಸುತ್ತಿರುವ ಭಾರತ ಮೂಲದ ನಿಖಿಲ್ ಗುಪ್ತಾ ಅವರನ್ನು ಜೆಕ್ ಗಣರಾಜ್ಯದಿಂದ ಅಮೆರಿಕಾಕ್ಕೆ ಹಸ್ತಾಂತರಿಸಲಾಗಿದೆ.

ವಾಷಿಂಗ್ಟನ್: ಸಿಖ್ ಪ್ರತ್ಯೇಕತಾವಾದಿ ಗುರುಪತ್ವಂತ್ ಸಿಂಗ್ ಪನ್ನುನ್ ಹತ್ಯೆಗೆ ಸಂಚು ರೂಪಿಸಿದ ಆರೋಪ ಎದುರಿಸುತ್ತಿರುವ ಭಾರತ ಮೂಲದ ನಿಖಿಲ್ ಗುಪ್ತಾ ಅವರನ್ನು ಜೆಕ್ ಗಣರಾಜ್ಯದಿಂದ ಅಮೆರಿಕಾಕ್ಕೆ ಹಸ್ತಾಂತರಿಸಲಾಗಿದೆ.

ಪನ್ನುನ್ ಹತ್ಯೆ ಸಂಚಿನಲ್ಲಿ ಭಾಗಿಯಾಗಿರುವ ಆರೋಪದ ಹಿನ್ನೆಲೆಯಲ್ಲಿ ನಿಖಿಲ್ ಅವರನ್ನು ಬಂಧಿಸುವಂತೆ ಅಮೆರಿಕಾ ಮಾಡಿದ್ದ ಮನವಿ ಮಾಡಿತ್ತು. ಇದರಂತೆ ಕಳೆದ ವರ್ಷ ಅವರನ್ನು ಜೆಕ್ ಗಣರಾಜ್ಯದಲ್ಲಿ ಬಂಧಿಸಲಾಗಿತ್ತು. ಇಂದು ಅವರನ್ನು ನ್ಯೂಯಾರ್ಕ್‌ನ ಫೆಡರಲ್ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ.

ಗುಪ್ತಾ ಅವರನ್ನು ಸದ್ಯ ಬ್ರೂಕ್ಲಿನ್‌ನ ಫೆಡರಲ್ ಮೆಟ್ರೋಪಾಲಿಟನ್ ವಿಚಾರಣಾ ಕೇಂದ್ರದಲ್ಲಿ ಇರಿಸಲಾಗಿದೆ. ಜೆಕ್ ಗಣರಾಜ್ಯದಲ್ಲಿ ಬಂಧನಕ್ಕೀಡಾಗಿದ್ದ ಗುಪ್ತಾ ಅವರನ್ನು ವಾರಾಂತ್ಯವೇ ಅಮೆರಿಕಕ್ಕೆ ಕರೆತರಲಾಗಿದೆ. ಸಾಮಾನ್ಯವಾಗಿ ಹಸ್ತಾಂತರಗೊಂಡವರನ್ನು ಒಂದು ದಿನದೊಳಗೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ. ಈ ಪ್ರಕರಣದಲ್ಲಿ ಹಾಗೇ ಆಗಿಲ್ಲ. ಕೆಲವು ಸೂಕ್ಷ್ಮ ತನಿಖೆ ನಡೆಯುತ್ತಿರಬಹುದು ಎಂದು ಮೂಲಗಳು ತಿಳಿಸಿವೆ.

ಪನ್ನುನ್ ಅವರನ್ನು ಕೊಲ್ಲಲು ವ್ಯಕ್ತಿಯೊಬ್ಬರಿಗೆ ಸುಪಾರಿ ನೀಡಿದ್ದ ಗುಪ್ತಾ, ಮುಂಗಡವಾಗಿ 15,000 ಡಾಲರ್ ನೀಡಿದ್ದ ಎಂದು ಪ್ರಾಸಿಕ್ಯೂಟರ್ ಆರೋಪಿಸಿದ್ದಾರೆ. ಹೆಸರು ಬಹಿರಂಗಪಡಿಸದ ಭಾರತೀಯ ಅಧಿಕಾರಿಯೊಬ್ಬರು ಸಹ ಇದರಲ್ಲಿ ಭಾಗಿಯಾಗಿದ್ದಾರೆ ಎಂದೂ ಆರೋಪಿಸಲಾಗಿದೆ.

ವಾರ್ಷಿಕ ಐಸಿಎಟಿ ಮಾತುಕತೆಗಾಗಿ ಅಮೆರಿಕ ಭದ್ರತಾ ಸಲಹೆಗಾರ ಜೆಕ್ ಸುಲ್ಲಿವನ್ ಭಾರತಕ್ಕೆ ಭೇಟಿ ನೀಡುತ್ತಿರುವ ಸಂದರ್ಭದಲ್ಲೇ ಈ ಹಸ್ತಾಂತರ ಪ್ರಕ್ರಿಯೆ ನಡೆದಿದೆ. ಭಾರತದ ಎನ್‌ಎಸ್‌ಎ ಅಜಿತ್ ಢೋಬಾಲ್ ಜೊತೆ ಅವರು ಈ ವಿಷಯ ಪ್ರಸ್ತಾಪಿಸುವ ನಿರೀಕ್ಷೆ ಇದೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT